ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಸರ್ವನಾಶ ಮಾಡಲು ಬಿಜೆಪಿ ಹೆಜ್ಜೆ ಇಟ್ಟಿದೆ ಎಂದು ಕರ್ನಾಟಕ ಕಾಂಗ್ರೆಸ್ ಹೇಳಿದೆ.
ಈ ಬಗ್ಗೆ ಶನಿವಾರ ಕಾಂಗ್ರೆಸ್ನ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಟ್ವೀಟ್ ಮಾಡಲಾಗಿದೆ.
‘ಯಡಿಯೂರಪ್ಪ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎನ್ನುತ್ತಿದ್ದ ಬಿಜೆಪಿಗರು ಈಗ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎನ್ನುತ್ತಿದ್ದಾರೆ. ಕಣ್ಣೀರು ಹಾಕಿಸಿ ಯಡಿಯೂರಪ್ಪ ಅವರ ಅಧಿಕಾರ ಕಿತ್ತುಕೊಂಡ ಬಿಜೆಪಿ, ಈಗ ಅವರ ಆಪ್ತರನ್ನೇ ಟಾರ್ಗೆಟ್ ಮಾಡಿ ಐಟಿ ರೈಡ್ ಮಾಡಿಸಿದೆ,‘ ಎಂದು ಆರೋಪಿಸಿದೆ.
ಐಟಿ ದಾಳಿಯು ಬಿಎಸ್ವೈ ಅವರನ್ನು ರಾಜಕೀಯವಾಗಿ ಸರ್ವನಾಶ ಮಾಡಲು ಬಿಜೆಪಿ ಇಟ್ಟ ಎರಡನೇ ಹೆಜ್ಜೆ ಎಂದು ಕಾಂಗ್ರೆಸ್ ಹೇಳಿದೆ.
BSY ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎನ್ನುತ್ತಿದ್ದ ಬಿಜೆಪಿಗರು ಈಗ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎನ್ನುತ್ತಿದ್ದಾರೆ.
ಕಣ್ಣೀರು ಹಾಕಿಸಿ @BSYBJP ಅವರ ಅಧಿಕಾರ ಕಿತ್ತುಕೊಂಡ ಬಿಜೆಪಿ, ಈಗ ಅವರ ಆಪ್ತರನ್ನೇ ಟಾರ್ಗೆಟ್ ಮಾಡಿ ಐಟಿ ರೈಡ್ ಮಾಡಿಸಿದೆ.
ಈ ಮೂಲಕ BSY ಅವರನ್ನ ರಾಜಕೀಯವಾಗಿ ಸರ್ವನಾಶ ಮಾಡಲು 2ನೇ ಹೆಜ್ಜೆ ಇರಿಸಿದೆ.#BJPvsBSY