<p><strong>ಬೆಂಗಳೂರು</strong>: ಇದೇ 21 ರಿಂದ 29 ರವರೆಗೆ ರಾಜ್ಯವ್ಯಾಪಿ ‘ವಿಜಯಸಂಕಲ್ಪ’ ಅಭಿಯಾನವನ್ನು ಆರಂಭಿಸಲಿದ್ದು, 2 ಕೋಟಿ ಜನರನ್ನು ಸಂಪರ್ಕಿಸುವ ಗುರಿ ಹೊಂದಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ 39 ಸಂಘಟನಾ ಜಿಲ್ಲೆಗಳು, 312 ಮಂಡಲಗಳಲ್ಲಿ ಈ ಅಭಿಯಾನ ನಡೆಯಲಿದೆ. ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರಗಳ ಸಭೆಗಳು ನಡೆಯಲಿವೆ ಎಂದು ಅವರು ತಿಳಿಸಿದರು.</p>.<p>ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದಲ್ಲಿ ಜ.21 ರಂದು ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದರು.</p>.<p>ಈ ಅಭಿಯಾನದ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳನ್ನು ಸಂಪರ್ಕಿಸಲಾಗುವುದು. ಸುಮಾರು 2 ಕೋಟಿಗೂ ಹೆಚ್ಚು ಫಲಾನುಭವಿಗಳು ಎಂದರೆ, 1 ಕೋಟಿ ಕುಟುಂಬಗಳನ್ನು ಸಂಪರ್ಕಿಸುವ ಗುರಿ ಹಮ್ಮಿಕೊಳ್ಳಲಾಗಿದೆ. ಜನ್ಧನ್, ಪಿಎಂ ಕಿಸಾನ್, ಪಿಎಂ ಆವಾಸ್, ಉಜ್ವಲಾ, ರೈತ ವಿದ್ಯಾನಿಧಿ ಸೇರಿದಂತೆ ಎಲ್ಲ ಕಾರ್ಯಕ್ರಮಗಳ ಫಲಾನುಭವಿಗಳನ್ನು ಸಂರ್ಕಿಸುತ್ತೇವೆ ಎಂದರು.</p>.<p>ಅವರ ಮನೆಗಳ ಮೇಲೆ ಪಕ್ಷವನ್ನು ಬೆಂಬಲಿಸುವ ಉದ್ದೇಶದ ಸ್ಟಿಕರ್ಗಳನ್ನು ಅಂಟಿಸಲಾಗುವುದು. ಇದಕ್ಕಾಗಿ 3 ಕೋಟಿ ಸ್ಟಿಕ್ಕರ್ ಹಂಚಲಾಗುವುದು. ಈ ಕಾರ್ಯಕ್ರಮ ಏಕ ಕಾಲದಲ್ಲಿ 58 ಸಾವಿರ ಬೂತ್ಗಳಲ್ಲಿ ನಡೆಯಲಿದೆ. ಇದರಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರು, ಸಂಸದರು, ಶಾಸಕರು ಭಾಗವಹಿಸಲಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p>ಇದೇ 29 ರಂದು ಪ್ರಧಾನಿ ಮೋದಿಯವರ ‘ಮನ್ಕಿ ಬಾತ್ ರೇಡಿಯೋ’ ಕಾರ್ಯಕ್ರಮವನ್ನು ಎಲ್ಲ ಬೂತ್ಗಳಲ್ಲಿ ಒಟ್ಟಿಗೇ ಕುಳಿತು ಆಲಿಸುವ ಕಾರ್ಯಕ್ರಮವೂ ಇದೆ. ಇದರೊಂದಿಗೆ ಅಭಿಯಾನವನ್ನು ಪೂರ್ಣಗೊಳಿಸಲಾಗುವುದು ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p>–––––––––––––</p>.<p><strong>‘ನಾ ನಾಯಕಿಯಲ್ಲ... ನಾಲಾಯಕ್’</strong></p>.<p>ಕಾಂಗ್ರೆಸ್ ಪಕ್ಷ ಹಮ್ಮಿಕೊಂಡ ‘ನಾ ನಾಯಕಿ’ ಕಾರ್ಯಕ್ರಮ ‘ನಾಲಾಯಕ್’ ಎಂದು ಸಚಿವ ಡಾ. ಅಶ್ವತ್ಥನಾರಾಯಣ ವ್ಯಾಖ್ಯಾನಿಸಿದರು.</p>.<p>ಈ ಕಾರ್ಯಕ್ರಮದಿಂದ ಏನೂ ಪ್ರಯೋಜನ ಆಗುವುದಿಲ್ಲ. ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ವಾರ್ದಾ ಅವರು ಪ್ರಚಾರಕ್ಕೆ ಹೋದ ಮೇಲೆ ಅಲ್ಲಿ ಕಾಂಗ್ರೆಸ್ ಸಿಂಗಲ್ ಡಿಜಿಟ್ಗೆ ಇಳಿಯಿತು. ದೇಶದಲ್ಲಿ ಕಾಂಗ್ರೆಸ್ ಅಪ್ರಸ್ತುತವಾಗಿದೆ ಎಂದರು.</p>.<p>ದೇಶದಲ್ಲಿ ಕೋವಿಡ್ ತಾರಕಕ್ಕೆ ಏರಿದ ಸಂದರ್ಭದಲ್ಲಿ ಲಸಿಕೆ ಹಾಕಿಸಿಕೊಳ್ಳಬೇಡಿ ಎಂದು ಇಡೀ ದೇಶದಲ್ಲಿ ಅಪಪ್ರಚಾರ ಮಾಡಿದವರು ಇದೇ ವ್ಯಕ್ತಿಗಳು. ಭಾರತ್ ತೋಡೊ ಎನ್ನುವ ವ್ಯಕ್ತಿಗಳ ಜತೆ ಸೇರಿ ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಇದೇ 21 ರಿಂದ 29 ರವರೆಗೆ ರಾಜ್ಯವ್ಯಾಪಿ ‘ವಿಜಯಸಂಕಲ್ಪ’ ಅಭಿಯಾನವನ್ನು ಆರಂಭಿಸಲಿದ್ದು, 2 ಕೋಟಿ ಜನರನ್ನು ಸಂಪರ್ಕಿಸುವ ಗುರಿ ಹೊಂದಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ 39 ಸಂಘಟನಾ ಜಿಲ್ಲೆಗಳು, 312 ಮಂಡಲಗಳಲ್ಲಿ ಈ ಅಭಿಯಾನ ನಡೆಯಲಿದೆ. ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರಗಳ ಸಭೆಗಳು ನಡೆಯಲಿವೆ ಎಂದು ಅವರು ತಿಳಿಸಿದರು.</p>.<p>ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದಲ್ಲಿ ಜ.21 ರಂದು ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದರು.</p>.<p>ಈ ಅಭಿಯಾನದ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳನ್ನು ಸಂಪರ್ಕಿಸಲಾಗುವುದು. ಸುಮಾರು 2 ಕೋಟಿಗೂ ಹೆಚ್ಚು ಫಲಾನುಭವಿಗಳು ಎಂದರೆ, 1 ಕೋಟಿ ಕುಟುಂಬಗಳನ್ನು ಸಂಪರ್ಕಿಸುವ ಗುರಿ ಹಮ್ಮಿಕೊಳ್ಳಲಾಗಿದೆ. ಜನ್ಧನ್, ಪಿಎಂ ಕಿಸಾನ್, ಪಿಎಂ ಆವಾಸ್, ಉಜ್ವಲಾ, ರೈತ ವಿದ್ಯಾನಿಧಿ ಸೇರಿದಂತೆ ಎಲ್ಲ ಕಾರ್ಯಕ್ರಮಗಳ ಫಲಾನುಭವಿಗಳನ್ನು ಸಂರ್ಕಿಸುತ್ತೇವೆ ಎಂದರು.</p>.<p>ಅವರ ಮನೆಗಳ ಮೇಲೆ ಪಕ್ಷವನ್ನು ಬೆಂಬಲಿಸುವ ಉದ್ದೇಶದ ಸ್ಟಿಕರ್ಗಳನ್ನು ಅಂಟಿಸಲಾಗುವುದು. ಇದಕ್ಕಾಗಿ 3 ಕೋಟಿ ಸ್ಟಿಕ್ಕರ್ ಹಂಚಲಾಗುವುದು. ಈ ಕಾರ್ಯಕ್ರಮ ಏಕ ಕಾಲದಲ್ಲಿ 58 ಸಾವಿರ ಬೂತ್ಗಳಲ್ಲಿ ನಡೆಯಲಿದೆ. ಇದರಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರು, ಸಂಸದರು, ಶಾಸಕರು ಭಾಗವಹಿಸಲಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p>ಇದೇ 29 ರಂದು ಪ್ರಧಾನಿ ಮೋದಿಯವರ ‘ಮನ್ಕಿ ಬಾತ್ ರೇಡಿಯೋ’ ಕಾರ್ಯಕ್ರಮವನ್ನು ಎಲ್ಲ ಬೂತ್ಗಳಲ್ಲಿ ಒಟ್ಟಿಗೇ ಕುಳಿತು ಆಲಿಸುವ ಕಾರ್ಯಕ್ರಮವೂ ಇದೆ. ಇದರೊಂದಿಗೆ ಅಭಿಯಾನವನ್ನು ಪೂರ್ಣಗೊಳಿಸಲಾಗುವುದು ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p>–––––––––––––</p>.<p><strong>‘ನಾ ನಾಯಕಿಯಲ್ಲ... ನಾಲಾಯಕ್’</strong></p>.<p>ಕಾಂಗ್ರೆಸ್ ಪಕ್ಷ ಹಮ್ಮಿಕೊಂಡ ‘ನಾ ನಾಯಕಿ’ ಕಾರ್ಯಕ್ರಮ ‘ನಾಲಾಯಕ್’ ಎಂದು ಸಚಿವ ಡಾ. ಅಶ್ವತ್ಥನಾರಾಯಣ ವ್ಯಾಖ್ಯಾನಿಸಿದರು.</p>.<p>ಈ ಕಾರ್ಯಕ್ರಮದಿಂದ ಏನೂ ಪ್ರಯೋಜನ ಆಗುವುದಿಲ್ಲ. ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ವಾರ್ದಾ ಅವರು ಪ್ರಚಾರಕ್ಕೆ ಹೋದ ಮೇಲೆ ಅಲ್ಲಿ ಕಾಂಗ್ರೆಸ್ ಸಿಂಗಲ್ ಡಿಜಿಟ್ಗೆ ಇಳಿಯಿತು. ದೇಶದಲ್ಲಿ ಕಾಂಗ್ರೆಸ್ ಅಪ್ರಸ್ತುತವಾಗಿದೆ ಎಂದರು.</p>.<p>ದೇಶದಲ್ಲಿ ಕೋವಿಡ್ ತಾರಕಕ್ಕೆ ಏರಿದ ಸಂದರ್ಭದಲ್ಲಿ ಲಸಿಕೆ ಹಾಕಿಸಿಕೊಳ್ಳಬೇಡಿ ಎಂದು ಇಡೀ ದೇಶದಲ್ಲಿ ಅಪಪ್ರಚಾರ ಮಾಡಿದವರು ಇದೇ ವ್ಯಕ್ತಿಗಳು. ಭಾರತ್ ತೋಡೊ ಎನ್ನುವ ವ್ಯಕ್ತಿಗಳ ಜತೆ ಸೇರಿ ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>