ಪಕ್ಷದ ಚುನಾಯಿತ ಪ್ರತಿನಿಧಿಗಳು, ರೈತ ಮೋರ್ಚಾ ಪದಾಧಿಕಾರಿಗಳು ಸೇರಿದಂತೆ ಪ್ರಮುಖ ಮುಖಂಡರು ಈ ಅಭಿಯಾನದಲ್ಲಿ ಪಾಲ್ಗೊಳ್ಳುವರು. ಒಂದು ತಿಂಗಳ ಕಾಲ, ದಿನವೊಂದಕ್ಕೆ ಐದು ಹಳ್ಳಿಗಳಿಗೆ ಭೇಟಿ ನೀಡಲಾಗುವುದು. ಅಲ್ಲಿನ ಸಮಸ್ಯೆಗಳು ಮತ್ತು ಜನರ ಅಹವಾಲುಗಳ ಕುರಿತು ಮಾಹಿತಿ ಸಂಗ್ರಹಿಸಿ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷರಿಗೆ ರವಾನಿಸಲಾಗುವುದು ಎಂದರು.