ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆಗೆ ನ್ಯಾಯ ದೊರಕಿಲ್ಲ. ಇಂತಹ ಸಂದರ್ಭದಲ್ಲಿ ಸಂಕ್ರಾಂತಿ ಹಬ್ಬ ಆಚರಿಸುತ್ತಾ ಮನೆಯಲ್ಲಿ ಕುಳಿತಿರಲು ಸಾಧ್ಯವಿಲ್ಲ. ಹಾವೇರಿಗೆ ತೆರಳಿ ವಾಸ್ತವಿಕ ಘಟನೆಗಳ ಮಾಹಿತಿ ಸಂಗ್ರಹಿಸಿ, ಹೋರಾಟ ಮಾಡುತ್ತೇವೆ’ ಎಂದರು.