ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವುದರಿಂದ ಸೊರಬದ ಶಾಸಕ ಕುಮಾರ್ ಬಂಗಾರಪ್ಪಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬುದೂ ಯಡಿಯೂರಪ್ಪ ಒತ್ತಾಸೆ. ಈ ಬೇಡಿಕೆಗೆ ಸಮ್ಮತಿ ನೀಡುವುದು ಅಥವಾ ನೀಡದೇ ಇರುವುದು ವರಿಷ್ಠರಿಗೆ ಬಿಟ್ಟ ವಿಚಾರ. ನಾಯಕರ ಜತೆಗಿನ ಚರ್ಚೆಯ ವೇಳೆ ಬೊಮ್ಮಾಯಿ, ಈ ವಿಷಯ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.