ನಗರದಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಎನ್ಇಪಿಯು ಬೇರೆ ರಾಜ್ಯಗಳಲ್ಲಿ ಅನುಷ್ಠಾನವಾಗಿಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿಗೊಳಿಸಲಾಗಿದೆ. ನೀತಿಯಲ್ಲಿ ಸಂಘ ಪರಿವಾರದ ರಹಸ್ಯ ಕಾರ್ಯಸೂಚಿಯನ್ನು ಅನುಷ್ಠಾನಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಅದರ ವಿರುದ್ಧ ಧ್ವನಿ ಎತ್ತುವ ಕೆಲಸವನ್ನು ಪಕ್ಷದಿಂದ ಮಾಡಲಾಗುತ್ತಿದೆ’ ಎಂದರು.