ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಸಂಸ್ಕೃತಿ ರಕ್ಷಣೆ ಬಗ್ಗೆ ದೊಡ್ಡ ದೊಡ್ಡ ಭಾಷಣ ಬಿಗಿಯುತ್ತಾರೆ. ಆದರೆ, ಕಲ್ಲಡ್ಕ ಪ್ರಭಾಕರ ಭಟ್ಟರು ಮೈಸೂರು ಮತ್ತು ಶ್ರೀರಂಗಪಟ್ಟಣದಲ್ಲಿ ನೀಡಿರುವ ಹೇಳಿಕೆ ಕೀಳು ಅಭಿವ್ಯಕ್ತಿಯಿಂದ ಕೂಡಿದ್ದಾಗಿದೆ. ಕೋಮುದ್ವೇಷ ಹರಡಲು ಅವರು ಪ್ರಯತ್ನಿಸುತ್ತಿದ್ದಾರೆ’ ಎಂದು ದೂರಿದರು.