<p><strong>ಬೆಂಗಳೂರು</strong>: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು.</p><p>ಯಡಿಯೂರಪ್ಪ ಅವರು ರಾಜಕೀಯ ಜೀವನಕ್ಕೆ ಪದಾರ್ಪಣೆ ಮಾಡಿ ಐದು ದಶಕಗಳನ್ನು ಪೂರೈಸುತ್ತಿದ್ದು, ಈ ಸಮಯದಲ್ಲಿ ಸಂತೋಷ್ ಅವರು ಭೇಟಿ ನೀಡಿ, ಅವರ ಜತೆಗೆ ಉಪಾಹಾರ ಸೇವಿಸಿದ್ದಾರೆ.</p><p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ‘ಪಕ್ಷವನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಸಂಘಟಿಸುತ್ತಿರುವ ಬಿ.ಎಲ್.ಸಂತೋಷ್ ಅವರು ನನ್ನ ಮನೆಗೆ ಭೇಟಿ ನೀಡಿದ್ದು ಖುಷಿ ತಂದಿದೆ. ಅವರ ಸಂಘಟನಾ ಸಾಮರ್ಥ್ಯ-ಚತುರತೆ ಪ್ರತಿಯೊಬ್ಬ ಕಾರ್ಯಕರ್ತನಿಗೂ ಸ್ಫೂರ್ತಿಯ ಸೆಲೆಯಾಗಿದೆ. ನನ್ನ ರಾಜಕೀಯ ಜೀವನದ 50ನೇ ವರ್ಷದ ಪಯಣಕ್ಕೆ ಶುಭಾಶಯ ಸಲ್ಲಿಸಿದರು’ ಎಂದಿದ್ದಾರೆ.</p><p>‘ಈಚೆಗೆ ನಡೆದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಕುರಿತು ಚರ್ಚಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸದೃಢವಾಗಿದ್ದು, ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತವಾಯಿತು’ ಎಂದು ಹೇಳಿದ್ದಾರೆ.</p><p>ಚಿತ್ರದುರ್ಗದಲ್ಲಿ ಮೇ 9ರಂದು ಬಿಜೆಪಿ 'ಯಡಿಯೂರಪ್ಪ ಅಭಿಮಾನೋತ್ಸವ' ಸಮಾವೇಶ ಆಯೋಜಿಸಿದೆ. ಕೇಂದ್ರ ಸಚಿವ ಅಮಿತ್ ಶಾ ಭಾಗವಹಿಸಲಿರುವ ಈ ಕಾರ್ಯಕ್ರಮದ ಮೂಲಕ 10 ಲಕ್ಷ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಲು ವೇದಿಕೆ ಸಜ್ಜುಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು.</p><p>ಯಡಿಯೂರಪ್ಪ ಅವರು ರಾಜಕೀಯ ಜೀವನಕ್ಕೆ ಪದಾರ್ಪಣೆ ಮಾಡಿ ಐದು ದಶಕಗಳನ್ನು ಪೂರೈಸುತ್ತಿದ್ದು, ಈ ಸಮಯದಲ್ಲಿ ಸಂತೋಷ್ ಅವರು ಭೇಟಿ ನೀಡಿ, ಅವರ ಜತೆಗೆ ಉಪಾಹಾರ ಸೇವಿಸಿದ್ದಾರೆ.</p><p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ‘ಪಕ್ಷವನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಸಂಘಟಿಸುತ್ತಿರುವ ಬಿ.ಎಲ್.ಸಂತೋಷ್ ಅವರು ನನ್ನ ಮನೆಗೆ ಭೇಟಿ ನೀಡಿದ್ದು ಖುಷಿ ತಂದಿದೆ. ಅವರ ಸಂಘಟನಾ ಸಾಮರ್ಥ್ಯ-ಚತುರತೆ ಪ್ರತಿಯೊಬ್ಬ ಕಾರ್ಯಕರ್ತನಿಗೂ ಸ್ಫೂರ್ತಿಯ ಸೆಲೆಯಾಗಿದೆ. ನನ್ನ ರಾಜಕೀಯ ಜೀವನದ 50ನೇ ವರ್ಷದ ಪಯಣಕ್ಕೆ ಶುಭಾಶಯ ಸಲ್ಲಿಸಿದರು’ ಎಂದಿದ್ದಾರೆ.</p><p>‘ಈಚೆಗೆ ನಡೆದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಕುರಿತು ಚರ್ಚಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸದೃಢವಾಗಿದ್ದು, ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತವಾಯಿತು’ ಎಂದು ಹೇಳಿದ್ದಾರೆ.</p><p>ಚಿತ್ರದುರ್ಗದಲ್ಲಿ ಮೇ 9ರಂದು ಬಿಜೆಪಿ 'ಯಡಿಯೂರಪ್ಪ ಅಭಿಮಾನೋತ್ಸವ' ಸಮಾವೇಶ ಆಯೋಜಿಸಿದೆ. ಕೇಂದ್ರ ಸಚಿವ ಅಮಿತ್ ಶಾ ಭಾಗವಹಿಸಲಿರುವ ಈ ಕಾರ್ಯಕ್ರಮದ ಮೂಲಕ 10 ಲಕ್ಷ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಲು ವೇದಿಕೆ ಸಜ್ಜುಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>