‘1956ರಲ್ಲಿ ಕರ್ನಾಟಕ ಏಕೀಕರಣ ನಂತರ ಇಲ್ಲಿ ಹುಟ್ಟಿದವರೆಲ್ಲ ಕನ್ನಡಿಗರಾಗಿದ್ದಾರೆ. ಅವರ ಮಾತೃಭಾಷೆ ಬೇರೆಯಾಗಿರಬಹುದು. ಆದರೂ, ಅವರು ಕನ್ನಡಿಗರಾಗಿದ್ದಾರೆ. ರಾಜ್ಯದ ಸೌಲಭ್ಯ ಪಡೆದು, ರಾಜ್ಯದ ವಿರುದ್ಧವೇ ಕಾರ್ಯಕ್ರಮ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಅಂತಹವರ ವಿರುದ್ಧ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬಹುದು’ ಎಂದರು.