ರಾಜ್ಯದ 16 ಜಿಲ್ಲೆಗಳಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ಧಾರವಾಡದಲ್ಲಿ 14 ಮಂದಿ, ಬೆಂಗಳೂರು ನಗರದಲ್ಲಿ 6 ಮಂದಿ, ಶಿವಮೊಗ್ಗ ಹಾಗೂ ಕಲಬುರ್ಗಿಯಲ್ಲಿ ತಲಾ 5 ಮಂದಿ, ದಕ್ಷಿಣ ಕನ್ನಡದಲ್ಲಿ 4 ಮಂದಿ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ ಹಾಗೂ ಕೊಪ್ಪಳದಲ್ಲಿ ತಲಾ ಇಬ್ಬರು, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಮಗಳೂರು, ರಾಯಚೂರು ಹಾಗೂ ಯಾದಗಿರಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿರುವುದು ದೃಢಪಟ್ಟಿದೆ.