<p><strong>ಬೆಂಗಳೂರು:</strong> ‘ಈಗಿನ ಬರಹಗಾರರು ಪರಂಪರೆಯನ್ನು ಅರಿತುಕೊಂಡು ಸಾಹಿತ್ಯ ಸೃಷ್ಟಿಸಬೇಕು. ಪರಂಪರೆಯ ಪ್ರತಿರೋಧದಿಂದಲೇ ಸಾಹಿತ್ಯ ಚಳವಳಿ ಹುಟ್ಟಿರುವುದು’ ಎಂದು ವಿಮರ್ಶಕ ಎಚ್. ದಂಡಪ್ಪ ತಿಳಿಸಿದರು.</p>.<p>ಬಿಎಂಶ್ರೀ ಪ್ರತಿಷ್ಠಾನವು ರುಕ್ಮಿಣಮ್ಮ ಸೀತಾರಾಮರಾವ್ ದತ್ತಿ ಕಾರ್ಯಕ್ರಮದ ಪ್ರಯುಕ್ತ ‘ಕನ್ನಡದ ಸಾಹಿತ್ಯದಲ್ಲಿ ಪರಂಪರೆ ಮತ್ತು ಪ್ರತಿಭಟನೆ’ ಎಂಬ ವಿಷಯದ ಮೇಲೆ ಆನ್ಲೈನ್ ವೇದಿಕೆಯಲ್ಲಿ ಮಂಗಳವಾರ ಆಯೋಜಿಸಿದ ಉಪನ್ಯಾಸದಲ್ಲಿ ಮಾತನಾಡಿದರು.</p>.<p>‘ಮುನುಷ್ಯ ಕೇಂದ್ರಿತ ವಿಚಾರಗಳು ಪರಂಪರೆಯಾಗಿ ಬೆಳೆಯುತ್ತಾ ಬಂದಿದೆ. ಆದರೆ, ಅದು ಪ್ರತಿರೋಧಗಳಿಂದ ಹೊಸ ಹೊಸ ರೂಪಗಳನ್ನು ಪಡೆದಿದೆ. ಪರಂಪರೆ ಎನ್ನುವುದು ಒಂದು ಕಡೆಯಿಂದ ಮತ್ತೊಂದು ಕಡೆ ನಿರಂತರ ಚಲನಶೀಲತೆಯಿಂದ ಕೂಡಿರುತ್ತದೆ. ಸಂಪ್ರದಾಯವು ಜಡತ್ವವನ್ನು ಹೊಂದಿರುತ್ತದೆ. ಸಾಹಿತ್ಯವೂ ಒಂದು ಪರಂಪರೆ<br />ಯಾಗಿ ಉಳಿದುಕೊಂಡು ಬಂದಿದೆ’ ಎಂದರು.</p>.<p>ಪ್ರತಿಷ್ಠಾನದ ಅಧ್ಯಕ್ಷ ಆರ್. ಲಕ್ಷ್ಮೀನಾರಾಯಣ, ಗೌರವ ಕಾರ್ಯದರ್ಶಿ ಬಿ.ಸಿ. ರಾಜಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಈಗಿನ ಬರಹಗಾರರು ಪರಂಪರೆಯನ್ನು ಅರಿತುಕೊಂಡು ಸಾಹಿತ್ಯ ಸೃಷ್ಟಿಸಬೇಕು. ಪರಂಪರೆಯ ಪ್ರತಿರೋಧದಿಂದಲೇ ಸಾಹಿತ್ಯ ಚಳವಳಿ ಹುಟ್ಟಿರುವುದು’ ಎಂದು ವಿಮರ್ಶಕ ಎಚ್. ದಂಡಪ್ಪ ತಿಳಿಸಿದರು.</p>.<p>ಬಿಎಂಶ್ರೀ ಪ್ರತಿಷ್ಠಾನವು ರುಕ್ಮಿಣಮ್ಮ ಸೀತಾರಾಮರಾವ್ ದತ್ತಿ ಕಾರ್ಯಕ್ರಮದ ಪ್ರಯುಕ್ತ ‘ಕನ್ನಡದ ಸಾಹಿತ್ಯದಲ್ಲಿ ಪರಂಪರೆ ಮತ್ತು ಪ್ರತಿಭಟನೆ’ ಎಂಬ ವಿಷಯದ ಮೇಲೆ ಆನ್ಲೈನ್ ವೇದಿಕೆಯಲ್ಲಿ ಮಂಗಳವಾರ ಆಯೋಜಿಸಿದ ಉಪನ್ಯಾಸದಲ್ಲಿ ಮಾತನಾಡಿದರು.</p>.<p>‘ಮುನುಷ್ಯ ಕೇಂದ್ರಿತ ವಿಚಾರಗಳು ಪರಂಪರೆಯಾಗಿ ಬೆಳೆಯುತ್ತಾ ಬಂದಿದೆ. ಆದರೆ, ಅದು ಪ್ರತಿರೋಧಗಳಿಂದ ಹೊಸ ಹೊಸ ರೂಪಗಳನ್ನು ಪಡೆದಿದೆ. ಪರಂಪರೆ ಎನ್ನುವುದು ಒಂದು ಕಡೆಯಿಂದ ಮತ್ತೊಂದು ಕಡೆ ನಿರಂತರ ಚಲನಶೀಲತೆಯಿಂದ ಕೂಡಿರುತ್ತದೆ. ಸಂಪ್ರದಾಯವು ಜಡತ್ವವನ್ನು ಹೊಂದಿರುತ್ತದೆ. ಸಾಹಿತ್ಯವೂ ಒಂದು ಪರಂಪರೆ<br />ಯಾಗಿ ಉಳಿದುಕೊಂಡು ಬಂದಿದೆ’ ಎಂದರು.</p>.<p>ಪ್ರತಿಷ್ಠಾನದ ಅಧ್ಯಕ್ಷ ಆರ್. ಲಕ್ಷ್ಮೀನಾರಾಯಣ, ಗೌರವ ಕಾರ್ಯದರ್ಶಿ ಬಿ.ಸಿ. ರಾಜಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>