‘ಆತ್ಮಕಥನವುಕಥೆ, ಕಾದಂಬರಿ, ನಾಟಕಗಳಿಗಿಂತಲೂ ಭಿನ್ನವಾದ ಪ್ರಕಾರ. ಇದನ್ನು ಶುರುಮಾಡುವ ವಿಧಾನವೇ ಬೇರೆಯದ್ದಾಗಿರುತ್ತದೆ. ಇದನ್ನು ಸಾಹಿತ್ಯದ, ವಿಮರ್ಶೆಯ ಪರಿಧಿಯೊಳಗೆ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕೋ ಬೇಡವೊ ಎಂಬ ಯೋಚನೆ ಇದೆ. ಆತ್ಮಕಥನಗಳಲ್ಲಿನ ಸಾಮಾನ್ಯ ಅಂಶವನ್ನು ಶೋಧಿಸಿ, ಅದನ್ನು ಹೇಗೆ ಆರಂಭಿಸುತ್ತಾರೆ, ಏತಕ್ಕಾಗಿ ಬರೆಯುತ್ತಾರೆ ಎಂಬುದನ್ನು ಸೂತ್ರೀಕರಿಸಿ ಅದಕ್ಕೆ ತಾತ್ವಿಕ ಚೌಕಟ್ಟು ಕಟ್ಟಬೇಕು. ಆ ಪ್ರಯತ್ನವನ್ನು ಸತ್ಯನಾರಾಯಣ ‘ಅವರವರ ಭವಕ್ಕೆ ಓದುಗರ ಭಕುತಿಗೆ’ ಕೃತಿಯಲ್ಲಿ ಮಾಡಿದ್ದಾರೆ’ ಎಂದು ಹೇಳಿದರು.