<p><strong>ಬೆಂಗಳೂರು</strong>: ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಬಳಸಿ ಜೈವಿಕ ಅನಿಲ ತಯಾರಿಸಲು ಬೆಂಗಳೂರಿನ ದಾಸನಪುರ, ಕೋಲಾರ ಮತ್ತು ಮೈಸೂರು ಎಪಿಎಂಸಿಗಳಲ್ಲಿ ತಲಾ 50 ಟಿಪಿಡಿ ಬಯೊ ಸಿಎನ್ಜಿ ಉತ್ಪಾದನಾ ಘಟಕ ಸ್ಥಾಪಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಇದರಿಂದ ಮಾರುಕಟ್ಟೆ ಪ್ರಾಂಗಣದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಹಾಯಕವಾಗುತ್ತದೆ. ಅಲ್ಲದೇ, ನಿಸರ್ಗದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಜತೆಗೆ ಆದಾಯವೂ ಬರುತ್ತದೆ. ಈ ಯೋಜನೆಯ ಅಂದಾಜು ವೆಚ್ಚ ₹74.88 ಕೋಟಿ. ಪ್ರತಿ ಘಟಕ ಸ್ಥಾಪನೆಗೆ ₹24.96 ಕೋಟಿ ವೆಚ್ಚವಾಗುತ್ತದೆ ಎಂದು ಅವರು ಹೇಳಿದರು.</p>.<p>ಈ ಮೂರು ಎಪಿಎಂಸಿಗಳಲ್ಲಿ ಪ್ರತಿ ದಿನ 20 ರಿಂದ 30 ಟನ್ ತ್ಯಾಜ್ಯ ಸಂಗ್ರಹವಾಗುತ್ತಿದೆ. ಈ ತ್ಯಾಜ್ಯವನ್ನು ಬಳಕೆ ಮಾಡಿಕೊಂಡು ಬಯೊ ಸಿಎನ್ಜಿ ಘಟಕ ಸ್ಥಾಪನೆ ಮಾಡುವುದರಿಂದ ಎಪಿಎಂಸಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸುದ್ದಿಗಾರರಿಗೆ ತಿಳಿಸಿದರು.</p>.<p>ಪ್ರಮುಖ ತೀರ್ಮಾನಗಳು:</p>.<p>*ವಿಜಯಪುರ ಜಿಲ್ಲೆಯಲ್ಲಿ ಅಭಿವೃದ್ಧಿಪಡಿಸುತ್ತಿರುವ ವಿಜಯಪುರ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳ ಒಟ್ಟು ₹618.75 ಕೋಟಿ ಮೊತ್ತ ಪರಿಷ್ಕೃತ ಅಂದಾಜಿಗೆ ಅನುಮೋದನೆ</p>.<p>*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಹೃದ್ರೋಗ ವಿಭಾಗ ಸ್ಥಾಪಿಸಲು ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ₹10.89 ಕೋಟಿ ಮೊತ್ತದಲ್ಲಿ ಖರೀದಿಗೆ ಒಪ್ಪಿಗೆ.</p>.<p>*ಗದಗದಲ್ಲಿರುವ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕಾರ್ಯ ಚಟುವಟಿಕೆಗಳಿಗೆ ಅಗತ್ಯವಿರುವ ಕಟ್ಟಡ ಮತ್ತು ಮೂಲಸೌಲಭ್ಯ ಒದಗಿಸಲು ₹48.43 ಕೋಟಿ ಪರಿಷ್ಕೃತ ಅಂದಾಜಿಗೆ ಅನುಮೋದನೆ</p>.<p>*ಗದಗ ಜಿಲ್ಲೆ ರೋಣ ತಾಲ್ಲೂಕಿನ 9 ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ₹43.50 ಕೋಟಿ. ಮಲಪ್ರಭ ಬಲದಂಡೆ ಕಾಲುವೆಯ ವಿತರಣಾ ಕಾಲುವೆಗಳ ಆಧುನೀಕರಣ ಕಾಮಗಾರಿಗೆ ₹31.08 ಕೋಟಿ</p>.<p>*ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅನುಷ್ಠಾನಗೊಂಡಿರುವ ಫಿಟ್ಟರ್ ಮತ್ತು ಎಲೆಕ್ಟ್ರಿಷಿಯನ್ ವೃತ್ತಿಗಳಿಗೆ ಡಿಜಿಟಿ ಪಠ್ಯಕ್ರಮದಂತೆ ಅಗತ್ಯವಿರುವ ಉಪಕರಣ ಮತ್ತು ಯಂತ್ರೋಪಕರಣಗಳನ್ನು ₹50 ಕೋಟಿಯಲ್ಲಿ ಖರೀದಿಸಲು ಒಪ್ಪಿಗೆ</p>.<p>* ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ಗೆ ₹58.44 ಕೋಟಿ</p>.<p>* ಕೋಲಾರ ಜಿಲ್ಲೆ ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ</p>.<p>* ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕು ಕರ್ನಾಳ್ ಏತನೀರಾವರಿ ಯೋಜನೆಗೆ ₹50.75 ಕೋಟಿ</p>.<p>* ರಾಜ್ಯದ 9,337 ಶಾಲೆಗಳಲ್ಲಿ ಬಿಸಿಯೂಟ ಸಿದ್ಧಪಡಿಸಲು ಹೊಸ ಪಾತ್ರೆ ಪರಿಕರಗಳನ್ನು ಖರೀದಿಸಲು ₹21.55 ಕೋಟಿಯನ್ನು ಕ್ಷೀರಭಾಗ್ಯ ಯೋಜನೆಯ ಅನುದಾನದಿಂದ ಭರಿಸಲು ಒಪ್ಪಿಗೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಬಳಸಿ ಜೈವಿಕ ಅನಿಲ ತಯಾರಿಸಲು ಬೆಂಗಳೂರಿನ ದಾಸನಪುರ, ಕೋಲಾರ ಮತ್ತು ಮೈಸೂರು ಎಪಿಎಂಸಿಗಳಲ್ಲಿ ತಲಾ 50 ಟಿಪಿಡಿ ಬಯೊ ಸಿಎನ್ಜಿ ಉತ್ಪಾದನಾ ಘಟಕ ಸ್ಥಾಪಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಇದರಿಂದ ಮಾರುಕಟ್ಟೆ ಪ್ರಾಂಗಣದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಹಾಯಕವಾಗುತ್ತದೆ. ಅಲ್ಲದೇ, ನಿಸರ್ಗದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಜತೆಗೆ ಆದಾಯವೂ ಬರುತ್ತದೆ. ಈ ಯೋಜನೆಯ ಅಂದಾಜು ವೆಚ್ಚ ₹74.88 ಕೋಟಿ. ಪ್ರತಿ ಘಟಕ ಸ್ಥಾಪನೆಗೆ ₹24.96 ಕೋಟಿ ವೆಚ್ಚವಾಗುತ್ತದೆ ಎಂದು ಅವರು ಹೇಳಿದರು.</p>.<p>ಈ ಮೂರು ಎಪಿಎಂಸಿಗಳಲ್ಲಿ ಪ್ರತಿ ದಿನ 20 ರಿಂದ 30 ಟನ್ ತ್ಯಾಜ್ಯ ಸಂಗ್ರಹವಾಗುತ್ತಿದೆ. ಈ ತ್ಯಾಜ್ಯವನ್ನು ಬಳಕೆ ಮಾಡಿಕೊಂಡು ಬಯೊ ಸಿಎನ್ಜಿ ಘಟಕ ಸ್ಥಾಪನೆ ಮಾಡುವುದರಿಂದ ಎಪಿಎಂಸಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸುದ್ದಿಗಾರರಿಗೆ ತಿಳಿಸಿದರು.</p>.<p>ಪ್ರಮುಖ ತೀರ್ಮಾನಗಳು:</p>.<p>*ವಿಜಯಪುರ ಜಿಲ್ಲೆಯಲ್ಲಿ ಅಭಿವೃದ್ಧಿಪಡಿಸುತ್ತಿರುವ ವಿಜಯಪುರ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳ ಒಟ್ಟು ₹618.75 ಕೋಟಿ ಮೊತ್ತ ಪರಿಷ್ಕೃತ ಅಂದಾಜಿಗೆ ಅನುಮೋದನೆ</p>.<p>*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಹೃದ್ರೋಗ ವಿಭಾಗ ಸ್ಥಾಪಿಸಲು ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ₹10.89 ಕೋಟಿ ಮೊತ್ತದಲ್ಲಿ ಖರೀದಿಗೆ ಒಪ್ಪಿಗೆ.</p>.<p>*ಗದಗದಲ್ಲಿರುವ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕಾರ್ಯ ಚಟುವಟಿಕೆಗಳಿಗೆ ಅಗತ್ಯವಿರುವ ಕಟ್ಟಡ ಮತ್ತು ಮೂಲಸೌಲಭ್ಯ ಒದಗಿಸಲು ₹48.43 ಕೋಟಿ ಪರಿಷ್ಕೃತ ಅಂದಾಜಿಗೆ ಅನುಮೋದನೆ</p>.<p>*ಗದಗ ಜಿಲ್ಲೆ ರೋಣ ತಾಲ್ಲೂಕಿನ 9 ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ₹43.50 ಕೋಟಿ. ಮಲಪ್ರಭ ಬಲದಂಡೆ ಕಾಲುವೆಯ ವಿತರಣಾ ಕಾಲುವೆಗಳ ಆಧುನೀಕರಣ ಕಾಮಗಾರಿಗೆ ₹31.08 ಕೋಟಿ</p>.<p>*ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅನುಷ್ಠಾನಗೊಂಡಿರುವ ಫಿಟ್ಟರ್ ಮತ್ತು ಎಲೆಕ್ಟ್ರಿಷಿಯನ್ ವೃತ್ತಿಗಳಿಗೆ ಡಿಜಿಟಿ ಪಠ್ಯಕ್ರಮದಂತೆ ಅಗತ್ಯವಿರುವ ಉಪಕರಣ ಮತ್ತು ಯಂತ್ರೋಪಕರಣಗಳನ್ನು ₹50 ಕೋಟಿಯಲ್ಲಿ ಖರೀದಿಸಲು ಒಪ್ಪಿಗೆ</p>.<p>* ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ಗೆ ₹58.44 ಕೋಟಿ</p>.<p>* ಕೋಲಾರ ಜಿಲ್ಲೆ ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ</p>.<p>* ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕು ಕರ್ನಾಳ್ ಏತನೀರಾವರಿ ಯೋಜನೆಗೆ ₹50.75 ಕೋಟಿ</p>.<p>* ರಾಜ್ಯದ 9,337 ಶಾಲೆಗಳಲ್ಲಿ ಬಿಸಿಯೂಟ ಸಿದ್ಧಪಡಿಸಲು ಹೊಸ ಪಾತ್ರೆ ಪರಿಕರಗಳನ್ನು ಖರೀದಿಸಲು ₹21.55 ಕೋಟಿಯನ್ನು ಕ್ಷೀರಭಾಗ್ಯ ಯೋಜನೆಯ ಅನುದಾನದಿಂದ ಭರಿಸಲು ಒಪ್ಪಿಗೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>