<p><strong>ಬೆಂಗಳೂರು:</strong> ಬಿಜೆಪಿಯಲ್ಲಿನ ಆಂತರಿಕ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಕಾರ್ಯಾಚರಣೆಗೆ ಇಳಿದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ದಾವಣಗೆರೆ ಜಿಲ್ಲೆಯಲ್ಲಿ ಪಕ್ಷದೊಳಗಿನ ಸಮಸ್ಯೆ ಬಗೆಹರಿಸಲು ಮತ್ತೊಂದು ಸುತ್ತಿನ ಸಭೆ ನಡೆಸಲು ಮುಂದಾಗಿದ್ದಾರೆ.</p>.<p>ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಎಂ.ಪಿ.ರೇಣುಕಾಚಾರ್ಯ ಅವರ ತಂಡವೇ ಕಾರಣ ಎಂದು ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಆರೋಪ ಮಾಡಿದ್ದರು. </p>.<p>ಈ ಆರೋಪಕ್ಕೆ ಸಂಬಂಧಿಸಿದಂತೆ ಪ್ರಲ್ಹಾದ ಜೋಶಿ ಈಗಾಗಲೇ ಸಿದ್ದೇಶ್ವರ ಅವರ ಜತೆ ಮಾತುಕತೆ ನಡೆಸಿದ್ದಾರೆ. ಇದೀಗ ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿನ ಎರಡು ಬಣಗಳ ಜತೆ ಸಂಧಾನ ನಡೆಸುವ ಉದ್ದೇಶದಿಂದ ಜೋಶಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ.</p>.<p>ದಾವಣಗೆರೆ ಜಿಲ್ಲೆಯ ನಾಯಕರ ಮಧ್ಯೆ ಸಮನ್ವಯ ಮೂಡಿಸುವ ಉದ್ದೇಶದಿಂದ ರೇಣುಕಾಚಾರ್ಯ ಮತ್ತು ಅವರ ತಂಡವನ್ನು ಸಭೆಗೆ ಆಹ್ವಾನಿಸಲಾಗಿದೆ. ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಪ್ರಲ್ಹಾದ ಜೋಶಿ ಅವರಿಗೆ ಆರ್ಎಸ್ಎಸ್ ಜವಾಬ್ದಾರಿ ನೀಡಿತ್ತು. ಆ ಹಿನ್ನೆಲೆಯಲ್ಲಿ ಜೋಶಿ ಸರಣಿ ಸಭೆಗಳನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿಯಲ್ಲಿನ ಆಂತರಿಕ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಕಾರ್ಯಾಚರಣೆಗೆ ಇಳಿದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ದಾವಣಗೆರೆ ಜಿಲ್ಲೆಯಲ್ಲಿ ಪಕ್ಷದೊಳಗಿನ ಸಮಸ್ಯೆ ಬಗೆಹರಿಸಲು ಮತ್ತೊಂದು ಸುತ್ತಿನ ಸಭೆ ನಡೆಸಲು ಮುಂದಾಗಿದ್ದಾರೆ.</p>.<p>ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಎಂ.ಪಿ.ರೇಣುಕಾಚಾರ್ಯ ಅವರ ತಂಡವೇ ಕಾರಣ ಎಂದು ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಆರೋಪ ಮಾಡಿದ್ದರು. </p>.<p>ಈ ಆರೋಪಕ್ಕೆ ಸಂಬಂಧಿಸಿದಂತೆ ಪ್ರಲ್ಹಾದ ಜೋಶಿ ಈಗಾಗಲೇ ಸಿದ್ದೇಶ್ವರ ಅವರ ಜತೆ ಮಾತುಕತೆ ನಡೆಸಿದ್ದಾರೆ. ಇದೀಗ ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿನ ಎರಡು ಬಣಗಳ ಜತೆ ಸಂಧಾನ ನಡೆಸುವ ಉದ್ದೇಶದಿಂದ ಜೋಶಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ.</p>.<p>ದಾವಣಗೆರೆ ಜಿಲ್ಲೆಯ ನಾಯಕರ ಮಧ್ಯೆ ಸಮನ್ವಯ ಮೂಡಿಸುವ ಉದ್ದೇಶದಿಂದ ರೇಣುಕಾಚಾರ್ಯ ಮತ್ತು ಅವರ ತಂಡವನ್ನು ಸಭೆಗೆ ಆಹ್ವಾನಿಸಲಾಗಿದೆ. ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಪ್ರಲ್ಹಾದ ಜೋಶಿ ಅವರಿಗೆ ಆರ್ಎಸ್ಎಸ್ ಜವಾಬ್ದಾರಿ ನೀಡಿತ್ತು. ಆ ಹಿನ್ನೆಲೆಯಲ್ಲಿ ಜೋಶಿ ಸರಣಿ ಸಭೆಗಳನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>