ಗೊಂದಲ ನಿವಾರಿಸಿ: ‘ರಾಜ್ಯ ಹೈಕೋರ್ಟ್ನ ದ್ವಿಸದಸ್ಯ ಪೀಠ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಆರ್ಟಿಇ ಕಾಯ್ದೆ ಉಲ್ಲಂಘಿಸಿ ನಡೆಸಿದ ಪರೀಕ್ಷೆ ಅಸಿಂಧುವಾಗಿದೆ. ಹೀಗಾಗಿ, 5,8 ಮತ್ತು 9ನೇ ತರಗತಿ ಫಲಿತಾಂಶ ಪ್ರಕಟಿಸುವಂತೆ ಇಲ್ಲ. ಒಂದು ವೇಳೆ ಪ್ರಕಟಿಸಿದ್ದರೆ ಮಾನ್ಯತೆ ನೀಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಮತ್ತು ಪೋಷಕರಿಗೆ ಉಂಟಾಗಿರುವ ಗೊಂದಲ ನಿವಾರಿಸಲು ಇಲಾಖೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಅಷ್ಟೆ ಅಲ್ಲ, ಇನ್ನಾದರೂ ಇಲಾಖೆಯ ಅಧಿಕಾರಿಗಳು ಶಿಕ್ಷಣ ಹಕ್ಕು ಕಾಯ್ದೆ ನಿಯಮಗಳನ್ನು ಪಾಲಿಸಬೇಕು’ ಎಂದು ರುಪ್ಸ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಆಗ್ರಹಿಸಿದ್ದಾರೆ.