ದಲಿತ ಚಳವಳಿಗಳಲ್ಲಿ ಮುಂಚೂಣಿಯಲ್ಲಿರುವ ಮಂಡ್ಯ ಜಿಲ್ಲೆಯ ಹಾನವಾಡಿಯವರಾದ ಪತ್ರಕರ್ತ ರಾಮ್ದೇವ್ ರಾಕೆ, ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ಹಕ್ಕಿಗೆ ಹೋರಾಟ ನಡೆಸುತ್ತಿರುವ ಸುಶೀಲ ನಾಡ, ಬೆಳ್ತಂಗಡಿಯ ಚಾರ್ಮಾಡಿ ಘಾಟ್ನಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ ಸಿಲುಕಿದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸುವ ಕಾರ್ಯವನ್ನು ಮೂರು ದಶಕದಿಂದ ಮಾಡುತ್ತಿರುವ ಹಸನಬ್ಬ, ಋತುಮತಿಯಾದ ಹೆಣ್ಣುಮಕ್ಕಳನ್ನು ಮನೆಯಿಂದ ಹೊರಗೆ ಗುಡಿಸಲು, ಮರದ ಕೆಳಗೆ ಬಿಡುವ ಅನಿಷ್ಠ ಪದ್ಧತಿ ವಿರುದ್ಧ ಹೋರಾಡುತ್ತಿರುವ ಜಿ.ಕೆ. ಪ್ರೇಮ ಅವರಿಗೆ ‘ಬೋಧಿವರ್ಧನ ಪ್ರಶಸ್ತಿ’ ನೀಡಲಾಗುತ್ತದೆ ಎಂದು ‘ಸ್ಫೂರ್ತಿಧಾಮ’ದ ಅಧ್ಯಕ್ಷ ಎಸ್. ಮರಿಸ್ವಾಮಿ ತಿಳಿಸಿದ್ದಾರೆ.