<p><strong>ಬೆಂಗಳೂರು</strong>: ‘ರಾಮೇಶ್ವರಂ ಕೆಫೆ ಹೋಟೆಲ್ನಲ್ಲಿ ಶುಕ್ರವಾರ (ಮಾರ್ಚ್ 1) ನಡೆದ ಸ್ಫೋಟಕ್ಕೂ ಮಂಗಳೂರಿನ ನಾಗುರಿ ಎಂಬಲ್ಲಿ ನ. 19ರಂದು ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ ಘಟನೆಗೂ ಲಿಂಕ್ ಇರುವಂತೆ ಕಾಣಿಸುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಎರಡೂ ಕಡೆ ಬಳಸಿದ ಸ್ಫೋಟಕ ಸಾಮಗ್ರಿಗಳಲ್ಲಿ ಸಾಮ್ಯತೆ ಇದೆ. ಹೀಗಾಗಿ, ಮಂಗಳೂರು ಮತ್ತು ಶಿವಮೊಗ್ಗ ಪೊಲೀಸರು ಕೂಡ ಬಂದು ಪರಿಶೀಲನೆ ನಡೆಸುತ್ತಿದ್ದಾರೆ’ ಎಂದರು.</p>.<p>‘ರಾಮೇಶ್ವರಂ ಕೆಫೆಯಲ್ಲಿ ನಡೆದ ಘಟನೆಯ ತನಿಖೆಗೆ ಏಳೆಂಟು ತಂಡಗಳನ್ನು ರಚಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ದುಷ್ಕರ್ಮಿ ಹೇಗೆ ಬಂದ, ಯಾವ ರೀತಿ ಸ್ಫೋಟಕ ಇಟ್ಟು ಹೋದ ಎಂಬ ವಿಡಿಯೊ ತುಣುಕು ಸಿಕ್ಕಿದೆ. ಅವನ ಚಹರೆಯ ಸುಳಿವು ಸಿಕ್ಕಿದೆ. ಈ ಹಂತದಲ್ಲಿ ಈ ತನಿಖೆಯ ಮಾಹಿತಿ ಬಹಿರಂಗಪಡಿಸುವುದಿಲ್ಲ. ತನಿಖೆ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಿದ್ದೇವೆ. ಘಟನೆಗೆ ಕಾರಣರಾಗಿರುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಬಿಜೆಪಿ ನಾಯಕರು ಏನೇ ಟೀಕೆ ಮಾಡಿದರೂ ತಲೆಕೆಡಿಸಿಕೊಳ್ಳುವುದಿಲ್ಲ. ಬೆಂಗಳೂರಿನ ಹೆಸರು ಹಾಳು ಮಾಡಲು ಬಿಜೆಪಿಯವರು ಪ್ರಯತ್ನಿಸುತ್ತಿರುವುದು ನಮ್ಮ ಗಮನದಲ್ಲಿದೆ. ನಾವು ಮಾತ್ರ ಎಲ್ಲ ಆಯಾಮಗಳಲ್ಲಿ ಪ್ರಕರಣದ ತನಿಖೆ ನಡೆಸುತ್ತೇವೆ’ ಎಂದರು.</p>.<p>‘ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಬಿಬಿಎಂಪಿ ವತಿಯಿಂದ ಭರಿಸಲಾಗುವುದು. ಪರಿಹಾರ ನೀಡುವ ಸಂದರ್ಭ ಬಂದರೆ ಅದನ್ನೂ ನೀಡುತ್ತೇವೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಮೇಶ್ವರಂ ಕೆಫೆ ಹೋಟೆಲ್ನಲ್ಲಿ ಶುಕ್ರವಾರ (ಮಾರ್ಚ್ 1) ನಡೆದ ಸ್ಫೋಟಕ್ಕೂ ಮಂಗಳೂರಿನ ನಾಗುರಿ ಎಂಬಲ್ಲಿ ನ. 19ರಂದು ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ ಘಟನೆಗೂ ಲಿಂಕ್ ಇರುವಂತೆ ಕಾಣಿಸುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಎರಡೂ ಕಡೆ ಬಳಸಿದ ಸ್ಫೋಟಕ ಸಾಮಗ್ರಿಗಳಲ್ಲಿ ಸಾಮ್ಯತೆ ಇದೆ. ಹೀಗಾಗಿ, ಮಂಗಳೂರು ಮತ್ತು ಶಿವಮೊಗ್ಗ ಪೊಲೀಸರು ಕೂಡ ಬಂದು ಪರಿಶೀಲನೆ ನಡೆಸುತ್ತಿದ್ದಾರೆ’ ಎಂದರು.</p>.<p>‘ರಾಮೇಶ್ವರಂ ಕೆಫೆಯಲ್ಲಿ ನಡೆದ ಘಟನೆಯ ತನಿಖೆಗೆ ಏಳೆಂಟು ತಂಡಗಳನ್ನು ರಚಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ದುಷ್ಕರ್ಮಿ ಹೇಗೆ ಬಂದ, ಯಾವ ರೀತಿ ಸ್ಫೋಟಕ ಇಟ್ಟು ಹೋದ ಎಂಬ ವಿಡಿಯೊ ತುಣುಕು ಸಿಕ್ಕಿದೆ. ಅವನ ಚಹರೆಯ ಸುಳಿವು ಸಿಕ್ಕಿದೆ. ಈ ಹಂತದಲ್ಲಿ ಈ ತನಿಖೆಯ ಮಾಹಿತಿ ಬಹಿರಂಗಪಡಿಸುವುದಿಲ್ಲ. ತನಿಖೆ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಿದ್ದೇವೆ. ಘಟನೆಗೆ ಕಾರಣರಾಗಿರುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಬಿಜೆಪಿ ನಾಯಕರು ಏನೇ ಟೀಕೆ ಮಾಡಿದರೂ ತಲೆಕೆಡಿಸಿಕೊಳ್ಳುವುದಿಲ್ಲ. ಬೆಂಗಳೂರಿನ ಹೆಸರು ಹಾಳು ಮಾಡಲು ಬಿಜೆಪಿಯವರು ಪ್ರಯತ್ನಿಸುತ್ತಿರುವುದು ನಮ್ಮ ಗಮನದಲ್ಲಿದೆ. ನಾವು ಮಾತ್ರ ಎಲ್ಲ ಆಯಾಮಗಳಲ್ಲಿ ಪ್ರಕರಣದ ತನಿಖೆ ನಡೆಸುತ್ತೇವೆ’ ಎಂದರು.</p>.<p>‘ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಬಿಬಿಎಂಪಿ ವತಿಯಿಂದ ಭರಿಸಲಾಗುವುದು. ಪರಿಹಾರ ನೀಡುವ ಸಂದರ್ಭ ಬಂದರೆ ಅದನ್ನೂ ನೀಡುತ್ತೇವೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>