‘ರಾಮೇಶ್ವರಂ ಕೆಫೆಯಲ್ಲಿ ನಡೆದ ಘಟನೆಯ ತನಿಖೆಗೆ ಏಳೆಂಟು ತಂಡಗಳನ್ನು ರಚಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ದುಷ್ಕರ್ಮಿ ಹೇಗೆ ಬಂದ, ಯಾವ ರೀತಿ ಸ್ಫೋಟಕ ಇಟ್ಟು ಹೋದ ಎಂಬ ವಿಡಿಯೊ ತುಣುಕು ಸಿಕ್ಕಿದೆ. ಅವನ ಚಹರೆಯ ಸುಳಿವು ಸಿಕ್ಕಿದೆ. ಈ ಹಂತದಲ್ಲಿ ಈ ತನಿಖೆಯ ಮಾಹಿತಿ ಬಹಿರಂಗಪಡಿಸುವುದಿಲ್ಲ. ತನಿಖೆ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಿದ್ದೇವೆ. ಘಟನೆಗೆ ಕಾರಣರಾಗಿರುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದರು.