<p><strong>ಬೆಂಗಳೂರು:</strong> ‘ನಾಡಿನ ಪ್ರಕಾಶಕರ ಹಿತ ಕಾಯಲು ಕನ್ನಡ ಪುಸ್ತಕ ಪ್ರಾಧಿಕಾರದ ಸಗಟು ಖರೀದಿ ಯೋಜನೆಗೆ ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನ ನೀಡಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.</p>.<p>ತಮ್ಮ ಗೃಹ ಕಚೇರಿಯಲ್ಲಿ ಪುಸ್ತಕ ಪ್ರಾಧಿಕಾರದ ‘ಮನೆಗೊಂದು ಗ್ರಂಥಾಲಯ’ ಯೋಜನೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಪುಸ್ತಕ ಪ್ರೀತಿ ಎಂಬುದನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು. ಪುಸ್ತಕ ಪ್ರೀತಿಯ ಫಲವಾಗಿಯೇ ಸಾಹಿತಿಗಳು, ಪ್ರಕಾಶಕರು ಹಾಗೂ ಪುಸ್ತಕೋದ್ಯಮ ಜೀವಂತವಾಗಿರಲು ಸಾಧ್ಯ. ಅದಕ್ಕೆ ಈ ಯೋಜನೆ ಪೂರಕವಾಗಲಿದೆ’ ಎಂದು ಆಶಿಸಿದರು.</p>.<p>ಗ್ರಂಥಾಲಯ ಅನುಷ್ಠಾನದ ಪ್ರಶಂಸಾ ಪತ್ರವನ್ನು ಸಾಹಿತಿಯೂ ಆಗಿರುವ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರು ಸಚಿವರಿಗೆ ನೀಡಿದರು.</p>.<p>‘ನಮ್ಮದು ಧರ್ಮಾಧಾರಿತ ಸಮಾಜ. ಅದನ್ನು ಮಾನವ ಧರ್ಮವಾಗಿ ರೂಪಿಸುವ ಹೊಣೆಗಾರಿಕೆ ಪುಸ್ತಕಗಳ ಮೇಲಿದೆ. ಮನೆಗೊಂದು ಗ್ರಂಥಾಲಯ ಯೋಚನೆಯ ಮೂಲಕ ಪ್ರಾಧಿಕಾರವು ಪುಸ್ತಕ ಪ್ರಕಾಶಕರು, ಸಾಹಿತಿಗಳಿಗೆ ನೆರವಾಗಲು ಹೊರಟಿದೆ. ಇದೊಂದು ಉತ್ತಮ ಯೋಜನೆ’ ’ ಎಂದು ಲಲಿತಾ ನಾಯಕ್ ಹೇಳಿದರು. </p>.<p>ಗ್ರಂಥಾಲಯ ಇಲಾಖೆ ಸಗಟು ಖರೀದಿ ಸ್ಥಗಿತಗೊಳಿಸಿರುವುದರಿಂದ ಪ್ರಕಾಶಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅದನ್ನು ಸರಿಪಡಿಸುವಂತೆ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಮನವಿ ಸಲ್ಲಿಸಿದರು.</p>.<p>‘ಮನೆಗೊಂದು ಗ್ರಂಥಾಲಯ ಯೋಜನೆಯ ಮೂಲಕ ಒಂದು ಲಕ್ಷ ಮನೆಗಳನ್ನು ತಲುಪುವ ಗುರಿ ನಮ್ಮದು. ಪ್ರತಿ ಜಿಲ್ಲೆಯಲ್ಲಿ ಜಾಗೃತಿ ಸಮಿತಿ ರಚಿಸಲಾಗಿದೆ. ಈ ಸಮಿತಿಯ ಸದಸ್ಯರು ಗ್ರಂಥಾಲಯ ರೂಪಿಸಲು ನೆರವಾಗಲಿದ್ದಾರೆ’ ಎಂದರು.</p>.<p>‘ಬಾನು ಮುಷ್ತಾಕ್ ಅವರ ಎದೆಯ ಹಣತೆ ಕೃತಿ ಯುರೋಪ್ ದೇಶಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಕನ್ನಡದಲ್ಲಿಯೂ ಅಂತಹ ಪುಸ್ತಕ ಸಂಸ್ಕೃತಿ ಬರಬೇಕಿದೆ’ ಎಂದರು.</p>.<p>ಬೆಂಗಳೂರು ನಗರ ಜಿಲ್ಲೆಯ ಗ್ರಂಥಾಲಯ ಜಾಗೃತಿ ಸಮಿತಿ ಸದಸ್ಯರಿಗೆ ಸಚಿವರು ಅರ್ಹತಾ ಪತ್ರಗಳನ್ನು ವಿತರಿಸಿದರು. ಈ ಯೋಜನೆಯ ಕುರಿತು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಮಾತನಾಡಿದರು. ಪ್ರಾಧಿಕಾರದ ಸದಸ್ಯರಾದ ಲಕ್ಷ್ಮಣ ಕೊಡಸೆ ಮತ್ತು ಬಿ.ಸಿ. ಕುಶಾಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಾಡಿನ ಪ್ರಕಾಶಕರ ಹಿತ ಕಾಯಲು ಕನ್ನಡ ಪುಸ್ತಕ ಪ್ರಾಧಿಕಾರದ ಸಗಟು ಖರೀದಿ ಯೋಜನೆಗೆ ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನ ನೀಡಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.</p>.<p>ತಮ್ಮ ಗೃಹ ಕಚೇರಿಯಲ್ಲಿ ಪುಸ್ತಕ ಪ್ರಾಧಿಕಾರದ ‘ಮನೆಗೊಂದು ಗ್ರಂಥಾಲಯ’ ಯೋಜನೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಪುಸ್ತಕ ಪ್ರೀತಿ ಎಂಬುದನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು. ಪುಸ್ತಕ ಪ್ರೀತಿಯ ಫಲವಾಗಿಯೇ ಸಾಹಿತಿಗಳು, ಪ್ರಕಾಶಕರು ಹಾಗೂ ಪುಸ್ತಕೋದ್ಯಮ ಜೀವಂತವಾಗಿರಲು ಸಾಧ್ಯ. ಅದಕ್ಕೆ ಈ ಯೋಜನೆ ಪೂರಕವಾಗಲಿದೆ’ ಎಂದು ಆಶಿಸಿದರು.</p>.<p>ಗ್ರಂಥಾಲಯ ಅನುಷ್ಠಾನದ ಪ್ರಶಂಸಾ ಪತ್ರವನ್ನು ಸಾಹಿತಿಯೂ ಆಗಿರುವ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರು ಸಚಿವರಿಗೆ ನೀಡಿದರು.</p>.<p>‘ನಮ್ಮದು ಧರ್ಮಾಧಾರಿತ ಸಮಾಜ. ಅದನ್ನು ಮಾನವ ಧರ್ಮವಾಗಿ ರೂಪಿಸುವ ಹೊಣೆಗಾರಿಕೆ ಪುಸ್ತಕಗಳ ಮೇಲಿದೆ. ಮನೆಗೊಂದು ಗ್ರಂಥಾಲಯ ಯೋಚನೆಯ ಮೂಲಕ ಪ್ರಾಧಿಕಾರವು ಪುಸ್ತಕ ಪ್ರಕಾಶಕರು, ಸಾಹಿತಿಗಳಿಗೆ ನೆರವಾಗಲು ಹೊರಟಿದೆ. ಇದೊಂದು ಉತ್ತಮ ಯೋಜನೆ’ ’ ಎಂದು ಲಲಿತಾ ನಾಯಕ್ ಹೇಳಿದರು. </p>.<p>ಗ್ರಂಥಾಲಯ ಇಲಾಖೆ ಸಗಟು ಖರೀದಿ ಸ್ಥಗಿತಗೊಳಿಸಿರುವುದರಿಂದ ಪ್ರಕಾಶಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅದನ್ನು ಸರಿಪಡಿಸುವಂತೆ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಮನವಿ ಸಲ್ಲಿಸಿದರು.</p>.<p>‘ಮನೆಗೊಂದು ಗ್ರಂಥಾಲಯ ಯೋಜನೆಯ ಮೂಲಕ ಒಂದು ಲಕ್ಷ ಮನೆಗಳನ್ನು ತಲುಪುವ ಗುರಿ ನಮ್ಮದು. ಪ್ರತಿ ಜಿಲ್ಲೆಯಲ್ಲಿ ಜಾಗೃತಿ ಸಮಿತಿ ರಚಿಸಲಾಗಿದೆ. ಈ ಸಮಿತಿಯ ಸದಸ್ಯರು ಗ್ರಂಥಾಲಯ ರೂಪಿಸಲು ನೆರವಾಗಲಿದ್ದಾರೆ’ ಎಂದರು.</p>.<p>‘ಬಾನು ಮುಷ್ತಾಕ್ ಅವರ ಎದೆಯ ಹಣತೆ ಕೃತಿ ಯುರೋಪ್ ದೇಶಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಕನ್ನಡದಲ್ಲಿಯೂ ಅಂತಹ ಪುಸ್ತಕ ಸಂಸ್ಕೃತಿ ಬರಬೇಕಿದೆ’ ಎಂದರು.</p>.<p>ಬೆಂಗಳೂರು ನಗರ ಜಿಲ್ಲೆಯ ಗ್ರಂಥಾಲಯ ಜಾಗೃತಿ ಸಮಿತಿ ಸದಸ್ಯರಿಗೆ ಸಚಿವರು ಅರ್ಹತಾ ಪತ್ರಗಳನ್ನು ವಿತರಿಸಿದರು. ಈ ಯೋಜನೆಯ ಕುರಿತು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಮಾತನಾಡಿದರು. ಪ್ರಾಧಿಕಾರದ ಸದಸ್ಯರಾದ ಲಕ್ಷ್ಮಣ ಕೊಡಸೆ ಮತ್ತು ಬಿ.ಸಿ. ಕುಶಾಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>