<p>ಕನ್ನಡದ ಪ್ರಮುಖ ಲೇಖಕಿ ಎಸ್.ಕೆ. ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕೃತಿಗೆ ವಿಶ್ವದ ಮೇರು ಸಾಹಿತ್ಯ ಪ್ರಶಸ್ತಿ 2025ರ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಒಲಿದಿದೆ. ಲಂಡನ್ನಲ್ಲಿ ಮಂಗಳವಾರ (ಮೇ 20) ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೃತಿಯ ಅನುವಾದಕರಾದ ದೀಪಾ ಭಸ್ತಿ ಅವರೊಂದಿಗೆ ಬಾನು ಮುಷ್ತಾಕ್ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಬಾನು ಅವರು ‘ಎದೆಯ ಹಣತೆ’ ಶೀರ್ಷಿಕೆಯಡಿ ಬರೆದಿದ್ದ ಈ ಕೃತಿಯನ್ನು ದೀಪಾ ಭಸ್ತಿಯವರು ‘ಹಾರ್ಟ್ ಲ್ಯಾಂಪ್’ ಹೆಸರಿನಲ್ಲಿ ಅನುವಾದಿಸಿದ್ದಾರೆ. ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯು ‘ಕನ್ನಡದ ಸಾಹಿತ್ಯಕ್ಕೆ ಸಿಕ್ಕ ಗೆಲುವು’ ಎಂದು ಬಾನು ಮುಷ್ತಾಕ್ ಅವರು ‘ಪ್ರಜಾವಾಣಿ’ಯೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.</p>.PHOTOS | ಕನ್ನಡದ ಲೇಖಕಿ ಬಾನು ಮುಷ್ತಾಕ್ ‘ಬೂಕರ್’ ಪ್ರಶಸ್ತಿ ಪಡೆದ ಕ್ಷಣಗಳು.Booker Prize: ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>