ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಈಗಾಗಲೇ ವಿಧಾನಸಭೆ ಮತ್ತು ವಿಧಾನ ಪರಿಷತ್ನಲ್ಲಿ ಈ ಕುರಿತು ಸರ್ನಾನುಮತದ ನಿರ್ಣಯ ಮಾಡಿದ್ದೇವೆ. ಯಾವುದೇ ರಾಜಕೀಯ ಮಾತುಕತೆ ಸಾಧ್ಯವಿಲ್ಲ. ಆದರೆ, ಮುಖ್ಯಮಂತ್ರಿ ಬೊಮ್ಮಾಯಿ ಅವರು ಗಡಿ ವಿವಾದದ ಬಗ್ಗೆ ಪ್ರಸ್ತಾಪ ಮಾಡುತ್ತಾರೆ. ಈ ವಿಚಾರವಾಗಿ ಯಾರೇ ಆದರೂ ಅಪಸ್ವರ, ಲಘು ಹೇಳಿಕೆ ನೀಡುವುದು ದುರ್ದೈವದ ಸಂಗತಿ’ ಎಂದು ಹೇಳಿದರು.
‘ಕರ್ನಾಟಕ ರಾಜ್ಯಪಾಲರು ಮಹಾರಾಷ್ಟ್ರ ರಾಜ್ಯಪಾಲರ ಜತೆಗೆ ಮಾತನಾಡಿದ್ದಾರೆ. ಸಭೆಯಲ್ಲಿ ರಾಜ್ಯಪಾಲರು ಏನು ಮಾತನಾಡಿದರು ಎಂಬ ವಿವರಗಳನ್ನು ಸಾರ್ವಜನಿಕರು ಮುಂದೆ ತೆರೆದಿಡಬೇಕು’ ಎಂದು ಆಗ್ರಹಿಸಿದರು.