ಕೇಂದ್ರ ಸಚಿವರನ್ನು ನವದೆಹಲಿಯಲ್ಲಿ ಗುರುವಾರ ಭೇಟಿ ಮಾಡಿದ ಅವರು, ‘ಕರ್ನಾಟಕದ ಜನ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಅದಕ್ಕೆ ಹೊಂದಿಕೊಂಡಿರುವ ರಾಮನಗರದಲ್ಲಿದ್ದು, ಈ ಪ್ರದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯ ಪ್ರಯೋಜನದ ದೃಷ್ಟಿಯಿಂದ ಬೆಂಗಳೂರಿಗೆ ವಿಜ್ಞಾನ ನಗರ ಮಂಜೂರು ಮಾಡಬೇಕು’ ಎಂದರು.