<p><strong>ಬೆಂಗಳೂರು:</strong> ‘ಮಹಿಳಾ ಪ್ರಾತಿನಿಧ್ಯ ಮತ್ತು ಮಹಿಳಾ ಮೀಸಲಾತಿ ಎರಡೂ ಹೆಚ್ಚಾಗಬೇಕು’ ಎಂದು ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಉಸ್ತುವಾರಿ ಶಿಲ್ಪಿ ಅರೋರ ಹೇಳಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯತ್ವ ನೋಂದಣಿಗೆ ಭಾನುವಾರ ಚಾಲನೆ ನೀಡಿದ ಅವರು, ‘ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ’ ಎಂದರು.</p>.<p>‘ಮಹಿಳೆಯರ ಹಕ್ಕುಗಳಿಗಾಗಿ ಮಹಿಳಾ ಕಾಂಗ್ರೆಸ್ ಹೋರಾಡುತ್ತಿದೆ. ‘ನಾರಿ ನ್ಯಾಯ’ ಹೆಸರಿನಲ್ಲಿ ಮಹಿಳೆಯರ ಸಂಘಟನೆ ಮಾಡಲಾಗಿದೆ. ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ನಮ್ಮ ಗುರಿ’ ಎಂದರು.</p>.<p>ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರು, ‘ನಿರ್ಣಾಯಕ ಸ್ಥಾನದಲ್ಲಿರುವ ಮಹಿಳೆಗೆ ಇನ್ನೂ ಶೇ 50 ರಷ್ಟು ಮೀಸಲಾತಿ ಸೌಲಭ್ಯ ಸಿಕ್ಕಿಲ್ಲ. 30 ವರ್ಷಗಳ ಹೋರಾಟಕ್ಕೆ ಇನ್ನೂ ಫಲ ಸಿಕ್ಕಿಲ್ಲ’ ಎಂದರು.</p>.<p>ಮಾಜಿ ಸಚಿವೆ ಮೋಟಮ್ಮ, ‘ನರೇಂದ್ರ ಮೋದಿ ಅವರು ಕೇವಲ ಮಾತಿನಲ್ಲಿ ಭೇಟಿ ಬಚಾವೊ ಭೇಟಿ ಪಡಾವೊ ಎನ್ನುತ್ತಾರೆ. ಹೆಣ್ಣು ಮಕ್ಕಳ ರಕ್ಷಣೆಯನ್ನು ಬಿಜೆಪಿ ಮಾಡಿಲ್ಲ’ ಎಂದರು.</p>.<p>ಮಹಿಳಾ ಕಾಂಗ್ರೆಸ್ ಉಸ್ತುವಾರಿ ನಾರಾಯಣಸ್ವಾಮಿ, ‘ಹೆಚ್ಚು ಹೆಚ್ಚು ಮಹಿಳಾ ಸದಸ್ಯರನ್ನು ನೋಂದಣಿ ಮಾಡಿಸಿದರೆ ತಳಮಟ್ಟದಲ್ಲಿ ಪಕ್ಷದ ಬಲ ಹೆಚ್ಚುತ್ತದೆ. ಅಭಿಯಾನದ ಮೂಲಕ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಕೈಯನ್ನು ಬಲಪಡಿಸಬೇಕು’ ಎಂದು ಪಕ್ಷದ ಕಾರ್ಯಕರ್ತೆಯರಿಗೆ ಮನವಿ ಮಾಡಿದರು.</p>.<p>ಮಾಜಿ ಮೇಯರ್ ಪದ್ಮಾವತಿ, ಕುಸುಮ ಹನುಮಂತರಾಯಪ್ಪ, ಕೆಪಿಸಿಸಿ ಉಪಾಧ್ಯಕ್ಷೆ ಅಕ್ಕೈ ಪದ್ಮಶಾಲಿ, ಕಾರ್ಯದರ್ಶಿ ರುಕ್ಮಿಣಿ ಸಾಹುಕಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮಹಿಳಾ ಪ್ರಾತಿನಿಧ್ಯ ಮತ್ತು ಮಹಿಳಾ ಮೀಸಲಾತಿ ಎರಡೂ ಹೆಚ್ಚಾಗಬೇಕು’ ಎಂದು ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಉಸ್ತುವಾರಿ ಶಿಲ್ಪಿ ಅರೋರ ಹೇಳಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯತ್ವ ನೋಂದಣಿಗೆ ಭಾನುವಾರ ಚಾಲನೆ ನೀಡಿದ ಅವರು, ‘ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ’ ಎಂದರು.</p>.<p>‘ಮಹಿಳೆಯರ ಹಕ್ಕುಗಳಿಗಾಗಿ ಮಹಿಳಾ ಕಾಂಗ್ರೆಸ್ ಹೋರಾಡುತ್ತಿದೆ. ‘ನಾರಿ ನ್ಯಾಯ’ ಹೆಸರಿನಲ್ಲಿ ಮಹಿಳೆಯರ ಸಂಘಟನೆ ಮಾಡಲಾಗಿದೆ. ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ನಮ್ಮ ಗುರಿ’ ಎಂದರು.</p>.<p>ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರು, ‘ನಿರ್ಣಾಯಕ ಸ್ಥಾನದಲ್ಲಿರುವ ಮಹಿಳೆಗೆ ಇನ್ನೂ ಶೇ 50 ರಷ್ಟು ಮೀಸಲಾತಿ ಸೌಲಭ್ಯ ಸಿಕ್ಕಿಲ್ಲ. 30 ವರ್ಷಗಳ ಹೋರಾಟಕ್ಕೆ ಇನ್ನೂ ಫಲ ಸಿಕ್ಕಿಲ್ಲ’ ಎಂದರು.</p>.<p>ಮಾಜಿ ಸಚಿವೆ ಮೋಟಮ್ಮ, ‘ನರೇಂದ್ರ ಮೋದಿ ಅವರು ಕೇವಲ ಮಾತಿನಲ್ಲಿ ಭೇಟಿ ಬಚಾವೊ ಭೇಟಿ ಪಡಾವೊ ಎನ್ನುತ್ತಾರೆ. ಹೆಣ್ಣು ಮಕ್ಕಳ ರಕ್ಷಣೆಯನ್ನು ಬಿಜೆಪಿ ಮಾಡಿಲ್ಲ’ ಎಂದರು.</p>.<p>ಮಹಿಳಾ ಕಾಂಗ್ರೆಸ್ ಉಸ್ತುವಾರಿ ನಾರಾಯಣಸ್ವಾಮಿ, ‘ಹೆಚ್ಚು ಹೆಚ್ಚು ಮಹಿಳಾ ಸದಸ್ಯರನ್ನು ನೋಂದಣಿ ಮಾಡಿಸಿದರೆ ತಳಮಟ್ಟದಲ್ಲಿ ಪಕ್ಷದ ಬಲ ಹೆಚ್ಚುತ್ತದೆ. ಅಭಿಯಾನದ ಮೂಲಕ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಕೈಯನ್ನು ಬಲಪಡಿಸಬೇಕು’ ಎಂದು ಪಕ್ಷದ ಕಾರ್ಯಕರ್ತೆಯರಿಗೆ ಮನವಿ ಮಾಡಿದರು.</p>.<p>ಮಾಜಿ ಮೇಯರ್ ಪದ್ಮಾವತಿ, ಕುಸುಮ ಹನುಮಂತರಾಯಪ್ಪ, ಕೆಪಿಸಿಸಿ ಉಪಾಧ್ಯಕ್ಷೆ ಅಕ್ಕೈ ಪದ್ಮಶಾಲಿ, ಕಾರ್ಯದರ್ಶಿ ರುಕ್ಮಿಣಿ ಸಾಹುಕಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>