ತಿಪಟೂರಿನಲ್ಲಿ ಇಬ್ಬರು ವಶಕ್ಕೆ
ತುಮಕೂರು: ಶಿವಮೊಗ್ಗ ರೈಲು ನಿಲ್ದಾಣದ ವಾಹನ ನಿಲುಗಡೆ ಸ್ಥಳದಲ್ಲಿ ಪತ್ತೆಯಾಗಿದ್ದ ಎರಡು ಬಾಕ್ಸ್ಗಳ ಪ್ರಕರಣಕ್ಕೆ ಸಂಬಂಧಿಸಿ ತಿಪಟೂರಿನ ಇಬ್ಬರನ್ನು ಶಿವಮೊಗ್ಗ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.
ತಿಪಟೂರಿನ ಗಾಂಧಿನಗರದ ನಿವಾಸಿ ನಸರುಲ್ಲಾ ಭೋವಿ ಕಾಲೊನಿಯ ನಿವಾಸಿ ಜಬಿವುಲ್ಲಾ ಅವರನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಬಾಕ್ಸ್ ಇಡಲು ಬಳಸಿದ್ದ ಕಾರಿನ ಚಾಲಕರು ಎಂದು ತಿಳಿದು ಬಂದಿದೆ.
ಶಿವಮೊಗ್ಗ ರೈಲು ನಿಲ್ದಾಣದಿಂದ ಕಾರು ತಿಪಟೂರಿಗೆ ಬಂದಿರುವ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ‘ಶಿವಮೊಗ್ಗ ಜಿಲ್ಲಾ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದರು.