<p><strong>ನರಗುಂದ (ಗದಗ ಜಿಲ್ಲೆ):</strong> ಬಾಲಕಿಯರ ಮೊಬೈಲ್ಗೆ ಅಶ್ಲೀಲ ಸಂದೇಶ ಕಳಿಸಿದ್ದಾರೆ ಎಂದು ಆರೋಪಿಸಿ ಮೂವರು ಬಾಲಕರನ್ನು ಬನಹಟ್ಟಿ ಗ್ರಾಮ ಪಂಚಾಯಿತಿ ಕಚೇರಿ ಎದುರಿನ ಧ್ವಜ ಕಂಬಕ್ಕೆ ಕಟ್ಟಿ ಥಳಿಸಲಾಗಿದ್ದು ನರಗುಂದ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು, ಪ್ರತಿದೂರು ದಾಖಲಾಗಿದೆ.</p>.<p>‘ಮೇ 28 ರಂದು ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಾಲಕರನ್ನು ಥಳಿಸಿದವರ ವಿರುದ್ದ ಮಾಯಪ್ಪ ಕೊಳ್ಳಪ್ಪನವರ ಎಂಬುವವರು 55 ಜನರ ಮೇಲೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, 55 ಜನರ ಪೈಕಿ 10 ಜನರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ನರಗುಂದ ಸಿಪಿಐ ಮಂಜುನಾಥ್ ನಡುವಿನಮನಿ ತಿಳಿಸಿದರು.</p>.<p>‘ಜೊತೆಗೆ, ಬಾಲಕಿಯರ ಮೊಬೈಲ್ಗೆ ಅಶ್ಲೀಲ ಮೆಸೇಜ್ ಕಳಿಸಿದವರ ವಿರುದ್ಧವೂ ಸಿದ್ದಪ್ಪ ಕುರಿ ಎಂಬುವರು ಪ್ರತಿದೂರು ದಾಖಲಿಸಿದ್ದಾರೆ. ಸಂದೇಶ ಕಳಿಸಿದವರ ಪೈಕಿ ಥಳಿತಕ್ಕೊಳಗಾಗಿ ಗಾಯಗೊಂಡ ಒಬ್ಬ ಬಾಲಕ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನಿಬ್ಬರು ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕ್ರಮವಹಿಸಲಾಗಿದೆ’ ಎಂದರು. </p>.<p>‘ಈ ಎರಡೂ ದೂರುಗಳನ್ನು ದೌರ್ಜನ್ಯ ಮತ್ತು ಪೋಕ್ಸೊ ಕಾಯ್ದೆಯಡಿ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಘಟನೆ ವಿವರ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಬನಹಟ್ಟಿ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿದರು. ಬನಹಟ್ಟಿಯಲ್ಲಿ ಭದ್ರತೆಗಾಗಿ ಡಿಎಸ್ಪಿ, ಸಿಪಿಐ, ಪಿಎಸ್ಐ ಸೇರಿದಂತೆ ಮೀಸಲು ಪಡೆ, ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ (ಗದಗ ಜಿಲ್ಲೆ):</strong> ಬಾಲಕಿಯರ ಮೊಬೈಲ್ಗೆ ಅಶ್ಲೀಲ ಸಂದೇಶ ಕಳಿಸಿದ್ದಾರೆ ಎಂದು ಆರೋಪಿಸಿ ಮೂವರು ಬಾಲಕರನ್ನು ಬನಹಟ್ಟಿ ಗ್ರಾಮ ಪಂಚಾಯಿತಿ ಕಚೇರಿ ಎದುರಿನ ಧ್ವಜ ಕಂಬಕ್ಕೆ ಕಟ್ಟಿ ಥಳಿಸಲಾಗಿದ್ದು ನರಗುಂದ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು, ಪ್ರತಿದೂರು ದಾಖಲಾಗಿದೆ.</p>.<p>‘ಮೇ 28 ರಂದು ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಾಲಕರನ್ನು ಥಳಿಸಿದವರ ವಿರುದ್ದ ಮಾಯಪ್ಪ ಕೊಳ್ಳಪ್ಪನವರ ಎಂಬುವವರು 55 ಜನರ ಮೇಲೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, 55 ಜನರ ಪೈಕಿ 10 ಜನರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ನರಗುಂದ ಸಿಪಿಐ ಮಂಜುನಾಥ್ ನಡುವಿನಮನಿ ತಿಳಿಸಿದರು.</p>.<p>‘ಜೊತೆಗೆ, ಬಾಲಕಿಯರ ಮೊಬೈಲ್ಗೆ ಅಶ್ಲೀಲ ಮೆಸೇಜ್ ಕಳಿಸಿದವರ ವಿರುದ್ಧವೂ ಸಿದ್ದಪ್ಪ ಕುರಿ ಎಂಬುವರು ಪ್ರತಿದೂರು ದಾಖಲಿಸಿದ್ದಾರೆ. ಸಂದೇಶ ಕಳಿಸಿದವರ ಪೈಕಿ ಥಳಿತಕ್ಕೊಳಗಾಗಿ ಗಾಯಗೊಂಡ ಒಬ್ಬ ಬಾಲಕ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನಿಬ್ಬರು ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕ್ರಮವಹಿಸಲಾಗಿದೆ’ ಎಂದರು. </p>.<p>‘ಈ ಎರಡೂ ದೂರುಗಳನ್ನು ದೌರ್ಜನ್ಯ ಮತ್ತು ಪೋಕ್ಸೊ ಕಾಯ್ದೆಯಡಿ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಘಟನೆ ವಿವರ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಬನಹಟ್ಟಿ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿದರು. ಬನಹಟ್ಟಿಯಲ್ಲಿ ಭದ್ರತೆಗಾಗಿ ಡಿಎಸ್ಪಿ, ಸಿಪಿಐ, ಪಿಎಸ್ಐ ಸೇರಿದಂತೆ ಮೀಸಲು ಪಡೆ, ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>