<p><strong>ಬೆಂಗಳೂರು</strong>: ‘ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆಗೆ ಚಿಂತನೆ ನಡೆಸಲಾಗಿದೆ. ಕೇಂದ್ರ ಸರ್ಕಾರದ ಮಾನದಂಡ ಪರಿಗಣಿಸಿ ಪರಿಷ್ಕರಿಸಲು ಎಲ್ಲರೂ ಸಹಕಾರ ನೀಡಬೇಕು’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.</p>.<p>ವಿಧಾನ ಪರಿಷತ್ನಲ್ಲಿ ಬಿಜೆಪಿಯ ಸಿ.ಟಿ. ರವಿ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ 1.10 ಕೋಟಿ ಬಿಪಿಎಲ್ ಕಾರ್ಡ್ಗಳ ಪೈಕಿ 20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳಿವೆ ಎಂದು ಅಂದಾಜಿಸಲಾಗಿದೆ’ ಎಂದರು. </p>.<p>‘ಹೊಸ ಬಿಪಿಎಲ್ ಕಾರ್ಡ್ ನೀಡಲು ಭೌತಿಕ ಪರಿಶೀಲನೆ ಕಡ್ಡಾಯ. ಈ ಉದ್ದೇಶದಿಂದ ಗ್ರಾಮ ಮಟ್ಟದಲ್ಲಿ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಕಾರ್ಯದರ್ಶಿ, ಕಂದಾಯ ನಿರೀಕ್ಷಕರನ್ನು ಒಳಗೊಂಡ ಸಮಿತಿ ರಚಿಸಲಾಗುವುದು’ ಎಂದರು.</p>.<p>‘ಹೊಸ ಬಿಪಿಎಲ್ ಪಡಿತರ ಚೀಟಿಗಾಗಿ 2023ರಿಂದ ಈವರೆಗೂ 2,95,986 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 2,04,760 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದ 91 ಸಾವಿರ ಅರ್ಜಿಗಳು ಪರಿಷ್ಕರಣೆ ಹಂತದಲ್ಲಿದ್ದು, ಅದರಲ್ಲಿ 50ರಿಂದ 60 ಸಾವಿರ ಅನರ್ಹ ಬಿಪಿಎಲ್ ಅರ್ಜಿಗಳಿವೆ. ಎರಡು ತಿಂಗಳ ಒಳಗೆ ಪರಿಷ್ಕರಣೆ ಪೂರ್ಣಗೊಳಿಸಲಾಗುವುದು’ ಎಂದರು.</p>.<p><strong>‘ಮುದಿಗೆರೆ ಅಮೃತಮಹಲ್ ಕಾವಲ್ ಸಂರಕ್ಷಣೆ’</strong></p>.<p>‘ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಮುದಿಗೆರೆಯ ಅಮೃತಮಹಲ್ ಕಾವಲ್ನ 3,025 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯವಾಗಿ ಉಳಿಸಿ ಅಭಿವೃದ್ಧಿಪಡಿಸಲಾಗುವುದು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.</p>.<p>ಬಿಜೆಪಿಯ ಸದಸ್ಯ ಚಿದಾನಂದ ಎಂ. ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಬುಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದಲ್ಲಿ ಪ್ರಾಣಿಗಳಿಗೆ ಆಹಾರ ಒದಗಿಸಲು ಹುಲ್ಲು ಬೀಜ ಬಿತ್ತನೆ, ನಾಟಿ ಮಾಡಲಾಗುತ್ತಿದ್ದು, ಹುಲ್ಲುಗಾವಲಿನಲ್ಲಿ ಬೆಳೆದಿರುವ ಲಂಟನಾ ತೆರವಿಗೂ ಕ್ರಮ ಕೈಗೊಳ್ಳಲಾಗಿದೆ’ ಎಂದರು.</p>.<p><strong>‘ವೈದ್ಯರಿಗೆ 4 ಬಾರಿ ಬಯೊಮೆಟ್ರಿಕ್ ಕಡ್ಡಾಯ’</strong></p>.<p>‘ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಿಗ್ಗೆ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ 4 ಗಂಟೆವರೆಗೂ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ’ ಎಂದು ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.</p>.<p>ಕಾಂಗ್ರೆಸ್ನ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ವೈದ್ಯರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವ ಸಂದರ್ಭದಲ್ಲಿ ಬೆಳಿಗ್ಗೆ 9 ಗಂಟೆ, ಮಧ್ಯಾಹ್ನ 2, 3 ಮತ್ತು ಸಂಜೆ 4 ಗಂಟೆ ಹೀಗೆ ಒಟ್ಟು ನಾಲ್ಕು ಬಾರಿ ಬಯೊಮೆಟ್ರಿಕ್ ನೀಡಬೇಕು. ಅದನ್ನು ಆಧರಿಸಿ ಸಂಬಳ ನೀಡಲಾಗುತ್ತದೆ’ ಎಂದರು.</p>.<p><strong>‘ಔಷಧ ಗುಣಮಟ್ಟ ಪರಿಶೀಲನೆಗೆ 12 ಪ್ರಯೋಗಾಲಯ’</strong></p>.<p>‘ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ಔಷಧಗಳನ್ನು ಖರೀದಿಸಿದ ಬಳಿಕ ಗುಣಮಟ್ಟ ಪರಿಶೀಲಿಸಲು ಪ್ರತ್ಯೇಕ 12 ಪ್ರಯೋಗಾಲಯಗಳನ್ನು ತೆರೆಯಲಾಗಿದೆ. ನಂತರವಷ್ಟೇ ಜಿಲ್ಲಾ ಔಷಧ ಉಗ್ರಾಣಗಳಿಗೆ ಪೂರೈಕೆ ಮಾಡಲಾಗುತ್ತಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.</p>.<p>ಬಿಜೆಪಿಯ ತಳವಾರ ಸಾಬಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಸ್ಥಳೀಯ ಮಟ್ಟದಲ್ಲಿ ಔಷಧ ಖರೀದಿಸಲು ಸಂಬಂಧಿಸಿದ ಪ್ರಾಧಿಕಾರಗಳಿಗೆ ಅನುಮತಿ ನೀಡಲಾಗಿದೆ. 2022-23ರಲ್ಲಿ ಅನುಮೋದಿಸಿದ್ದ 732 ಅಗತ್ಯ ಔಷಧಗಳ ಖರೀದಿಯನ್ನು ಈ ವರ್ಷ 1,084 ಹೆಚ್ಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆಗೆ ಚಿಂತನೆ ನಡೆಸಲಾಗಿದೆ. ಕೇಂದ್ರ ಸರ್ಕಾರದ ಮಾನದಂಡ ಪರಿಗಣಿಸಿ ಪರಿಷ್ಕರಿಸಲು ಎಲ್ಲರೂ ಸಹಕಾರ ನೀಡಬೇಕು’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.</p>.<p>ವಿಧಾನ ಪರಿಷತ್ನಲ್ಲಿ ಬಿಜೆಪಿಯ ಸಿ.ಟಿ. ರವಿ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ 1.10 ಕೋಟಿ ಬಿಪಿಎಲ್ ಕಾರ್ಡ್ಗಳ ಪೈಕಿ 20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳಿವೆ ಎಂದು ಅಂದಾಜಿಸಲಾಗಿದೆ’ ಎಂದರು. </p>.<p>‘ಹೊಸ ಬಿಪಿಎಲ್ ಕಾರ್ಡ್ ನೀಡಲು ಭೌತಿಕ ಪರಿಶೀಲನೆ ಕಡ್ಡಾಯ. ಈ ಉದ್ದೇಶದಿಂದ ಗ್ರಾಮ ಮಟ್ಟದಲ್ಲಿ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಕಾರ್ಯದರ್ಶಿ, ಕಂದಾಯ ನಿರೀಕ್ಷಕರನ್ನು ಒಳಗೊಂಡ ಸಮಿತಿ ರಚಿಸಲಾಗುವುದು’ ಎಂದರು.</p>.<p>‘ಹೊಸ ಬಿಪಿಎಲ್ ಪಡಿತರ ಚೀಟಿಗಾಗಿ 2023ರಿಂದ ಈವರೆಗೂ 2,95,986 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 2,04,760 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದ 91 ಸಾವಿರ ಅರ್ಜಿಗಳು ಪರಿಷ್ಕರಣೆ ಹಂತದಲ್ಲಿದ್ದು, ಅದರಲ್ಲಿ 50ರಿಂದ 60 ಸಾವಿರ ಅನರ್ಹ ಬಿಪಿಎಲ್ ಅರ್ಜಿಗಳಿವೆ. ಎರಡು ತಿಂಗಳ ಒಳಗೆ ಪರಿಷ್ಕರಣೆ ಪೂರ್ಣಗೊಳಿಸಲಾಗುವುದು’ ಎಂದರು.</p>.<p><strong>‘ಮುದಿಗೆರೆ ಅಮೃತಮಹಲ್ ಕಾವಲ್ ಸಂರಕ್ಷಣೆ’</strong></p>.<p>‘ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಮುದಿಗೆರೆಯ ಅಮೃತಮಹಲ್ ಕಾವಲ್ನ 3,025 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯವಾಗಿ ಉಳಿಸಿ ಅಭಿವೃದ್ಧಿಪಡಿಸಲಾಗುವುದು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.</p>.<p>ಬಿಜೆಪಿಯ ಸದಸ್ಯ ಚಿದಾನಂದ ಎಂ. ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಬುಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದಲ್ಲಿ ಪ್ರಾಣಿಗಳಿಗೆ ಆಹಾರ ಒದಗಿಸಲು ಹುಲ್ಲು ಬೀಜ ಬಿತ್ತನೆ, ನಾಟಿ ಮಾಡಲಾಗುತ್ತಿದ್ದು, ಹುಲ್ಲುಗಾವಲಿನಲ್ಲಿ ಬೆಳೆದಿರುವ ಲಂಟನಾ ತೆರವಿಗೂ ಕ್ರಮ ಕೈಗೊಳ್ಳಲಾಗಿದೆ’ ಎಂದರು.</p>.<p><strong>‘ವೈದ್ಯರಿಗೆ 4 ಬಾರಿ ಬಯೊಮೆಟ್ರಿಕ್ ಕಡ್ಡಾಯ’</strong></p>.<p>‘ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಿಗ್ಗೆ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ 4 ಗಂಟೆವರೆಗೂ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ’ ಎಂದು ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.</p>.<p>ಕಾಂಗ್ರೆಸ್ನ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ವೈದ್ಯರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವ ಸಂದರ್ಭದಲ್ಲಿ ಬೆಳಿಗ್ಗೆ 9 ಗಂಟೆ, ಮಧ್ಯಾಹ್ನ 2, 3 ಮತ್ತು ಸಂಜೆ 4 ಗಂಟೆ ಹೀಗೆ ಒಟ್ಟು ನಾಲ್ಕು ಬಾರಿ ಬಯೊಮೆಟ್ರಿಕ್ ನೀಡಬೇಕು. ಅದನ್ನು ಆಧರಿಸಿ ಸಂಬಳ ನೀಡಲಾಗುತ್ತದೆ’ ಎಂದರು.</p>.<p><strong>‘ಔಷಧ ಗುಣಮಟ್ಟ ಪರಿಶೀಲನೆಗೆ 12 ಪ್ರಯೋಗಾಲಯ’</strong></p>.<p>‘ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ಔಷಧಗಳನ್ನು ಖರೀದಿಸಿದ ಬಳಿಕ ಗುಣಮಟ್ಟ ಪರಿಶೀಲಿಸಲು ಪ್ರತ್ಯೇಕ 12 ಪ್ರಯೋಗಾಲಯಗಳನ್ನು ತೆರೆಯಲಾಗಿದೆ. ನಂತರವಷ್ಟೇ ಜಿಲ್ಲಾ ಔಷಧ ಉಗ್ರಾಣಗಳಿಗೆ ಪೂರೈಕೆ ಮಾಡಲಾಗುತ್ತಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.</p>.<p>ಬಿಜೆಪಿಯ ತಳವಾರ ಸಾಬಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಸ್ಥಳೀಯ ಮಟ್ಟದಲ್ಲಿ ಔಷಧ ಖರೀದಿಸಲು ಸಂಬಂಧಿಸಿದ ಪ್ರಾಧಿಕಾರಗಳಿಗೆ ಅನುಮತಿ ನೀಡಲಾಗಿದೆ. 2022-23ರಲ್ಲಿ ಅನುಮೋದಿಸಿದ್ದ 732 ಅಗತ್ಯ ಔಷಧಗಳ ಖರೀದಿಯನ್ನು ಈ ವರ್ಷ 1,084 ಹೆಚ್ಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>