<p><strong>ಬೆಂಗಳೂರು</strong>: ‘ನನ್ನ ವಿರುದ್ಧ ಕೇಳಿ ಬಂದ ಆರೋಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಿದ್ದೇನೆ’ ಎಂದು ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್ಖಾನ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ನನ್ನ ಮೇಲೆ ಎಲ್ಲೂ ನೇರ ಆರೋಪಗಳಿಲ್ಲ. ಇದು ಮಾಧ್ಯಮದ ಸೃಷ್ಟಿ. ನನ್ನ ಮೇಲೆ ಬಿ.ಆರ್. ಪಾಟೀಲ ನೇರ ಆರೋಪ ಮಾಡಿರಲಿಲ್ಲ. ಈ ಕುರಿತು ಈಗಾಗಲೇ ಹೇಳಿದ್ದೇನೆ’ ಎಂದರು.</p>.<p>‘ಪಂಚಾಯಿತಿ ಅಧ್ಯಕ್ಷನ ಪತ್ರಕ್ಕೆ ಮನೆ ಮಂಜೂರಾತಿ ಆಗಿದೆ. ಆದರೆ, ಮಾಧ್ಯಮದಲ್ಲಿ ನನ್ನ ಹೆಸರು ಬಂತು. ಈ ಕಾರಣಕ್ಕೆ ಮುಖ್ಯಮಂತ್ರಿಗೆ ವರದಿ ಕೊಟ್ಟಿದ್ದೇನೆ’ ಎಂದು ಹೇಳಿದರು.</p>.<p>‘ಬಿ.ಆರ್. ಪಾಟೀಲ ಅವರು 2 ವರ್ಷದಲ್ಲಿ ಆರು ಸಾವಿರ ಮನೆ ಕೇಳಿದ್ದರು. ಎಲ್ಲ ಪಂಚಾಯಿತಿಗಳಿಗೂ ಸೇರಿ 950 ಮನೆಗಳನ್ನು ಮಂಜೂರು ಮಾಡಲಾಗಿದೆ. ಬುಧವಾರ ಭೇಟಿ ಮಾಡುವುದಾಗಿ ಪಾಟೀಲರು ನನಗೆ ಹೇಳಿದ್ದರು. ಆದರೆ, ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದಾರೆ’ ಎಂದರು.</p>.<p>‘ವಸತಿ ಇಲಾಖೆಯಲ್ಲಿ ಮನೆ ಹಂಚಿಕೆಗೆ ಲಂಚ ನಡೆಯುತ್ತಿದೆ’ ಎಂದು ಬಿ.ಆರ್. ಪಾಟೀಲ ಅವರು ಆರೋಪಿಸಿದ್ದರು.</p>.<p><strong>‘ಕ್ರಮ ತೆಗೆದುಕೊಳ್ಳುವುದು ಸಿಎಂ, ಡಿಸಿಎಂಗೆ ಬಿಟ್ಟದ್ದು’</strong></p><p>‘ನನ್ನದೇನೂ ಸಮಾಧಾನ, ಅಸಮಾಧಾನ ಇಲ್ಲ. ಏನೆಲ್ಲ ಹೇಳಬೇಕಾಗಿತ್ತೊ ಅದನ್ನು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ವಿವರವಾಗಿ ಹೇಳಿದ್ದೇನೆ. ಅವರು ಏನು ಕ್ರಮ ತೆಗೆದುಕೊಳ್ಳುತ್ತಾರೊ. ಅವರಿಗೆ ಬಿಟ್ಟದ್ದು’ ಎಂದು ಆಳಂದ ಶಾಸಕ ಬಿ.ಆರ್. ಪಾಟೀಲ ಹೇಳಿದರು.</p><p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ವಿಚಾರಗಳನ್ನು ಅವರು ಸಮಾಧಾನದಿಂದ ಆಲಿಸಿದ್ದಾರೆ. ಯೋಚನೆ ಮಾಡಿ ನಿರ್ಣಯ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ’ ಎಂದರು.</p><p>‘ಸಮಸ್ಯೆ ಸರಿ ಹೋಗಬಹುದೆಂಬ ವಿಶ್ವಾಸ ಇದೆಯೇ?’ ಎಂಬ ಪ್ರಶ್ನೆಗೆ, ‘ಅವರಿಗೇ ಕೇಳಿ’ ಎಂದಷ್ಟೆ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯನ್ನು ಪಾಟೀಲರು ಬುಧವಾರ ಸಂಜೆ ಭೇಟಿ ಮಾಡಿದ ಚರ್ಚೆ ನಡೆಸಿದ್ದರು.</p>.<p>‘<strong>ಆರೋಪ</strong> <strong>ಸುಳ್ಳು ಎನ್ನಲ್ಲ’</strong></p><p>‘ಹಿರಿಯ ಶಾಸಕರೂ ಆಗಿರುವ ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಅವರು ವಸತಿ ಹಂಚಿಕೆ ವಿಚಾರದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಜೊತೆ ಆಡಿರುವ ಮಾತುಗಳನ್ನು ಸುಳ್ಳು ಎನ್ನುವುದಿಲ್ಲ. ಅವರ ಅನುಭವವನ್ನು ಅವರು ಹೇಳಿದ್ದಾರೆ. ಈ ವಿಚಾರದಲ್ಲಿ ನಾನು ಹೆಚ್ಚು ಪ್ರತಿಕ್ರಿಯಿಸುವುದಿಲ್ಲ’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.</p><p>‘ಸಚಿವರು ಕೈಗೆ ಸಿಗುತ್ತಿಲ್ಲ ಎಂಬ ರಾಜು ಕಾಗೆ ಅವರ ಆರೋಪ ಸತ್ಯಕ್ಕೆ ದೂರವಾದದ್ದು. ಒಂದಷ್ಟು ಸಚಿವರು ಎಂದರೆ ಯಾರು ಎಂದು ನಿರ್ದಿಷ್ಟವಾಗಿ ಹೇಳಿದರೆ ತಿದ್ದಿಕೊಳ್ಳಬಹುದು. ಅದು ಯಾರೇ ಆಗಿರಲಿ, ನಾನೇ ಆಗಿರಲಿ. ಮನುಷ್ಯ ಎಂದ ಮೇಲೆ ಲೋಪ ಇರುತ್ತದೆ. ತಿದ್ದಿಕೊಳ್ಳಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನನ್ನ ವಿರುದ್ಧ ಕೇಳಿ ಬಂದ ಆರೋಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಿದ್ದೇನೆ’ ಎಂದು ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್ಖಾನ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ನನ್ನ ಮೇಲೆ ಎಲ್ಲೂ ನೇರ ಆರೋಪಗಳಿಲ್ಲ. ಇದು ಮಾಧ್ಯಮದ ಸೃಷ್ಟಿ. ನನ್ನ ಮೇಲೆ ಬಿ.ಆರ್. ಪಾಟೀಲ ನೇರ ಆರೋಪ ಮಾಡಿರಲಿಲ್ಲ. ಈ ಕುರಿತು ಈಗಾಗಲೇ ಹೇಳಿದ್ದೇನೆ’ ಎಂದರು.</p>.<p>‘ಪಂಚಾಯಿತಿ ಅಧ್ಯಕ್ಷನ ಪತ್ರಕ್ಕೆ ಮನೆ ಮಂಜೂರಾತಿ ಆಗಿದೆ. ಆದರೆ, ಮಾಧ್ಯಮದಲ್ಲಿ ನನ್ನ ಹೆಸರು ಬಂತು. ಈ ಕಾರಣಕ್ಕೆ ಮುಖ್ಯಮಂತ್ರಿಗೆ ವರದಿ ಕೊಟ್ಟಿದ್ದೇನೆ’ ಎಂದು ಹೇಳಿದರು.</p>.<p>‘ಬಿ.ಆರ್. ಪಾಟೀಲ ಅವರು 2 ವರ್ಷದಲ್ಲಿ ಆರು ಸಾವಿರ ಮನೆ ಕೇಳಿದ್ದರು. ಎಲ್ಲ ಪಂಚಾಯಿತಿಗಳಿಗೂ ಸೇರಿ 950 ಮನೆಗಳನ್ನು ಮಂಜೂರು ಮಾಡಲಾಗಿದೆ. ಬುಧವಾರ ಭೇಟಿ ಮಾಡುವುದಾಗಿ ಪಾಟೀಲರು ನನಗೆ ಹೇಳಿದ್ದರು. ಆದರೆ, ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದಾರೆ’ ಎಂದರು.</p>.<p>‘ವಸತಿ ಇಲಾಖೆಯಲ್ಲಿ ಮನೆ ಹಂಚಿಕೆಗೆ ಲಂಚ ನಡೆಯುತ್ತಿದೆ’ ಎಂದು ಬಿ.ಆರ್. ಪಾಟೀಲ ಅವರು ಆರೋಪಿಸಿದ್ದರು.</p>.<p><strong>‘ಕ್ರಮ ತೆಗೆದುಕೊಳ್ಳುವುದು ಸಿಎಂ, ಡಿಸಿಎಂಗೆ ಬಿಟ್ಟದ್ದು’</strong></p><p>‘ನನ್ನದೇನೂ ಸಮಾಧಾನ, ಅಸಮಾಧಾನ ಇಲ್ಲ. ಏನೆಲ್ಲ ಹೇಳಬೇಕಾಗಿತ್ತೊ ಅದನ್ನು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ವಿವರವಾಗಿ ಹೇಳಿದ್ದೇನೆ. ಅವರು ಏನು ಕ್ರಮ ತೆಗೆದುಕೊಳ್ಳುತ್ತಾರೊ. ಅವರಿಗೆ ಬಿಟ್ಟದ್ದು’ ಎಂದು ಆಳಂದ ಶಾಸಕ ಬಿ.ಆರ್. ಪಾಟೀಲ ಹೇಳಿದರು.</p><p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ವಿಚಾರಗಳನ್ನು ಅವರು ಸಮಾಧಾನದಿಂದ ಆಲಿಸಿದ್ದಾರೆ. ಯೋಚನೆ ಮಾಡಿ ನಿರ್ಣಯ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ’ ಎಂದರು.</p><p>‘ಸಮಸ್ಯೆ ಸರಿ ಹೋಗಬಹುದೆಂಬ ವಿಶ್ವಾಸ ಇದೆಯೇ?’ ಎಂಬ ಪ್ರಶ್ನೆಗೆ, ‘ಅವರಿಗೇ ಕೇಳಿ’ ಎಂದಷ್ಟೆ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯನ್ನು ಪಾಟೀಲರು ಬುಧವಾರ ಸಂಜೆ ಭೇಟಿ ಮಾಡಿದ ಚರ್ಚೆ ನಡೆಸಿದ್ದರು.</p>.<p>‘<strong>ಆರೋಪ</strong> <strong>ಸುಳ್ಳು ಎನ್ನಲ್ಲ’</strong></p><p>‘ಹಿರಿಯ ಶಾಸಕರೂ ಆಗಿರುವ ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಅವರು ವಸತಿ ಹಂಚಿಕೆ ವಿಚಾರದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಜೊತೆ ಆಡಿರುವ ಮಾತುಗಳನ್ನು ಸುಳ್ಳು ಎನ್ನುವುದಿಲ್ಲ. ಅವರ ಅನುಭವವನ್ನು ಅವರು ಹೇಳಿದ್ದಾರೆ. ಈ ವಿಚಾರದಲ್ಲಿ ನಾನು ಹೆಚ್ಚು ಪ್ರತಿಕ್ರಿಯಿಸುವುದಿಲ್ಲ’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.</p><p>‘ಸಚಿವರು ಕೈಗೆ ಸಿಗುತ್ತಿಲ್ಲ ಎಂಬ ರಾಜು ಕಾಗೆ ಅವರ ಆರೋಪ ಸತ್ಯಕ್ಕೆ ದೂರವಾದದ್ದು. ಒಂದಷ್ಟು ಸಚಿವರು ಎಂದರೆ ಯಾರು ಎಂದು ನಿರ್ದಿಷ್ಟವಾಗಿ ಹೇಳಿದರೆ ತಿದ್ದಿಕೊಳ್ಳಬಹುದು. ಅದು ಯಾರೇ ಆಗಿರಲಿ, ನಾನೇ ಆಗಿರಲಿ. ಮನುಷ್ಯ ಎಂದ ಮೇಲೆ ಲೋಪ ಇರುತ್ತದೆ. ತಿದ್ದಿಕೊಳ್ಳಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>