ಹುಬ್ಬಳ್ಳಿ: ನಾಡಕಚೇರಿ ಮತ್ತು ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಬ್ರಾಹ್ಮಣರಿಗೆ ಜಾತಿಪ್ರಮಾಣ ಪತ್ರವನ್ನು ರಾಜ್ಯದಾದ್ಯಂತ ಸೆ.10ರಿಂದ ನೀಡಲಾಗುವುದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ತಿಳಿಸಿದರು.
ಮಂಗಳವಾರ ನಗರದಲ್ಲಿ ಬ್ರಾಹ್ಮಣರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು ‘ಬೆಂಗಳೂರಿನಲ್ಲಿ ಈಗಾಗಲೇ 5,000 ಬ್ರಾಹ್ಮಣರಿಗೆ ಪ್ರಮಾಣಪತ್ರ ನೀಡಲಾಗಿದೆ. ಕಡಿಮೆ ಅವಧಿಯಲ್ಲಿ ಎಲ್ಲರಿಗೂ ತಲುಪಲು ನಾಡಕಚೇರಿ ಮೂಲಕವೂ ನೀಡಲು ಸರ್ಕಾರ ನಿರ್ಧರಿಸಿದೆ’ ಎಂದರು.