ಸಮಾಜದ ಅಭಿವೃದ್ಧಿಗೆ ವಿಶೇಷ ಅನುದಾನ, ಮೀಸಲಾತಿ, ಬ್ರಾಹ್ಮಣ ಯುವಕರ ಮದುವೆ ಹಾಗೂ ಪೌರೋಹಿತ್ಯಕ್ಕೆ ಪ್ರೋತ್ಸಾಹ ಸೇರಿದಂತೆ ಹಲವು ನಿರ್ಣಯಗಳು ಸಮ್ಮೇಳನದಲ್ಲಿ ಅಂಗೀಕಾರವಾಗುವ ಸಾಧ್ಯತೆಗಳಿವೆ.ಸಮಾವೇಶಕ್ಕೆ ಬರುವವರ ವಾಸ್ತವ್ಯಕ್ಕೆ 41 ಕಲ್ಯಾಣ ಮಂಟಪ ಹಾಗೂ ವಸತಿ ಗೃಹಗಳನ್ನು ಕಾಯ್ದಿರಿಸಲಾಗಿದೆ. 60 ಸಾವಿರ ಜನರಿಗೆ ಊಟದ ವ್ಯವಸ್ಥೆ, ಕುಂದಾಪುರದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿದೆ.