<p><strong>ಬೆಂಗಳೂರು</strong>: ‘ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟು ಹೆಚ್ಚಿಸಿ ‘ಬ್ರ್ಯಾಂಡ್’ ವರ್ಚಸ್ಸು ನೀಡಲು ಯೋಜನೆ ರೂಪಿಸಲಾಗಿದೆ’ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು.</p>.<p>ಕಾರ್ಖಾನೆಯ ಆಡಳಿತ ಮಂಡಳಿಯ ಸಭೆಯ ಬಳಿಕ ಮಾತನಾಡಿದ ಅವರು, ‘ಕಾರ್ಖಾನೆಯು ಸದ್ಯಕ್ಕೆ ವಾರ್ಷಿಕ ₹ 34 ಕೋಟಿಯಿಂದ ₹ 35 ಕೋಟಿಯಷ್ಟು ವಹಿವಾಟು ನಡೆಸುತ್ತಿದೆ. ಲೋಕಸಭಾ ಚುನಾವಣೆ ಬಂದಿರುವುದರಿಂದ ಶಾಯಿ ತಯಾರಿಕೆಗೆ ಬೇಡಿಕೆ ಬಂದಿದೆ. ಈ ವರ್ಷ ವಹಿವಾಟು ₹ 77 ಕೋಟಿ ತಲುಪುವ ನಿರೀಕ್ಷೆಯಿದೆ’ ಎಂದರು.</p>.<p>‘ಮನೆ ಗೋಡೆಗೆ ಬಳಿಯುವಂತಹ ಬಣ್ಣಗಳನ್ನು ತಯಾರಿಸಲು ಸೂಚಿಸಲಾಗಿದೆ. ಮುಕ್ತ ಮಾರುಕಟ್ಟೆ ಅಲ್ಲದೆ, ಸರ್ಕಾರಿ ಕಟ್ಟಡಗಳು, ಶಾಲಾ- ಕಾಲೇಜು, ಹಾಸ್ಟೆಲ್ಗಳಿಗೆ ಬೇಕಾಗುವ ಬಣ್ಣ, ಎಮಲ್ಶನ್ ಇತ್ಯಾದಿಗಳನ್ನು ಈ ಕಾರ್ಖಾನೆಯಲ್ಲೇ ತಯಾರಿಸುವ ಚಿಂತನೆ ನಡೆದಿದೆ. ಇದಕ್ಕಾಗಿ, ಬಣ್ಣಗಳ ಉದ್ಯಮದಲ್ಲಿ ಪಳಗಿರುವ ಪರಿಣತರೊಬ್ಬರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಸಭೆಯಲ್ಲಿ ಅನುಮತಿ ನೀಡಲಾಗಿದೆ’ ಎಂದರು.</p>.<p>‘ವೈಜ್ಞಾನಿಕವಾಗಿ ಮಾರುಕಟ್ಟೆಯನ್ನೂ ವಿಸ್ತರಿಸಿ, ಸ್ಪರ್ಧಾತ್ಮಕ ಬೆಲೆಯಲ್ಲಿ ಪೇಂಟ್ ಸಿಗುವಂತೆ ಮಾಡಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಲಾಗಿದೆ’ ಎಂದೂ ಅವರು ಮಾಹಿತಿ ನೀಡಿದರು.</p>.<p>ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಮಹಮದ್ ಇರ್ಫಾನ್ ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟು ಹೆಚ್ಚಿಸಿ ‘ಬ್ರ್ಯಾಂಡ್’ ವರ್ಚಸ್ಸು ನೀಡಲು ಯೋಜನೆ ರೂಪಿಸಲಾಗಿದೆ’ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು.</p>.<p>ಕಾರ್ಖಾನೆಯ ಆಡಳಿತ ಮಂಡಳಿಯ ಸಭೆಯ ಬಳಿಕ ಮಾತನಾಡಿದ ಅವರು, ‘ಕಾರ್ಖಾನೆಯು ಸದ್ಯಕ್ಕೆ ವಾರ್ಷಿಕ ₹ 34 ಕೋಟಿಯಿಂದ ₹ 35 ಕೋಟಿಯಷ್ಟು ವಹಿವಾಟು ನಡೆಸುತ್ತಿದೆ. ಲೋಕಸಭಾ ಚುನಾವಣೆ ಬಂದಿರುವುದರಿಂದ ಶಾಯಿ ತಯಾರಿಕೆಗೆ ಬೇಡಿಕೆ ಬಂದಿದೆ. ಈ ವರ್ಷ ವಹಿವಾಟು ₹ 77 ಕೋಟಿ ತಲುಪುವ ನಿರೀಕ್ಷೆಯಿದೆ’ ಎಂದರು.</p>.<p>‘ಮನೆ ಗೋಡೆಗೆ ಬಳಿಯುವಂತಹ ಬಣ್ಣಗಳನ್ನು ತಯಾರಿಸಲು ಸೂಚಿಸಲಾಗಿದೆ. ಮುಕ್ತ ಮಾರುಕಟ್ಟೆ ಅಲ್ಲದೆ, ಸರ್ಕಾರಿ ಕಟ್ಟಡಗಳು, ಶಾಲಾ- ಕಾಲೇಜು, ಹಾಸ್ಟೆಲ್ಗಳಿಗೆ ಬೇಕಾಗುವ ಬಣ್ಣ, ಎಮಲ್ಶನ್ ಇತ್ಯಾದಿಗಳನ್ನು ಈ ಕಾರ್ಖಾನೆಯಲ್ಲೇ ತಯಾರಿಸುವ ಚಿಂತನೆ ನಡೆದಿದೆ. ಇದಕ್ಕಾಗಿ, ಬಣ್ಣಗಳ ಉದ್ಯಮದಲ್ಲಿ ಪಳಗಿರುವ ಪರಿಣತರೊಬ್ಬರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಸಭೆಯಲ್ಲಿ ಅನುಮತಿ ನೀಡಲಾಗಿದೆ’ ಎಂದರು.</p>.<p>‘ವೈಜ್ಞಾನಿಕವಾಗಿ ಮಾರುಕಟ್ಟೆಯನ್ನೂ ವಿಸ್ತರಿಸಿ, ಸ್ಪರ್ಧಾತ್ಮಕ ಬೆಲೆಯಲ್ಲಿ ಪೇಂಟ್ ಸಿಗುವಂತೆ ಮಾಡಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಲಾಗಿದೆ’ ಎಂದೂ ಅವರು ಮಾಹಿತಿ ನೀಡಿದರು.</p>.<p>ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಮಹಮದ್ ಇರ್ಫಾನ್ ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>