<p><strong>ಬೆಂಗಳೂರು: </strong>ಸರ್ಕಾರದ ಯೋಜನೆಯೊಂದಕ್ಕೆ ಸ್ವಾಧೀನಪಡಿಸಿಕೊಂಡಿರುವ ಜಮೀನಿನ ಮಾಲೀಕರಿಗೆ ಪರಿಹಾರದ ಚೆಕ್ ವಿತರಿಸಲು ₹2 ಲಕ್ಷ ಲಂಚ ಪಡೆಯುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿ ವ್ಯವಸ್ಥಾಪಕನನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಂಗಳವಾರ ಬಂಧಿಸಿದೆ.</p>.<p>ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ- 1 ಕಚೇರಿಯ ವ್ಯವಸ್ಥಾಪಕ ದಾಸೇಗೌಡ ಬಂಧಿತ ಅಧಿಕಾರಿ. ವಿಶೇಷ ಭೂಸ್ವಾಧೀನಾಧಿಕಾರಿ- 1 ತೇಜಸ್ ಪರವಾಗಿ ಲಂಚ ಪಡೆದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>'ಚಿಂತಾಮಣಿ ತಾಲ್ಲೂಕಿನ ಮಲ್ಕಾಪುರ ಗ್ರಾಮದಲ್ಲಿ ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿರುವ ಜಮೀನಿನ ಮಾಲೀಕರಿಗೆ ಪರಿಹಾರ ನೀಡಬೇಕಿತ್ತು. ಜಮೀನಿನ ಮಾಲೀಕರು ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರು. ತೇಜಸ್ ₹ 13 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಡು, ₹10.5 ಲಕ್ಷ ಪಡೆದಿದ್ದಾರೆ ಎಂದು ಜಮೀನು ಮಾಲೀಕರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿತ್ತು' ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಅರಮನೆ ರಸ್ತೆಯಲ್ಲಿರುವ ಕೆಐಎಡಿಬಿ ಕಚೇರಿಯಲ್ಲಿ ಮಂಗಳವಾರ ದಾಸೇಗೌಡ ₹ 2 ಲಕ್ಷ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸರ್ಕಾರದ ಯೋಜನೆಯೊಂದಕ್ಕೆ ಸ್ವಾಧೀನಪಡಿಸಿಕೊಂಡಿರುವ ಜಮೀನಿನ ಮಾಲೀಕರಿಗೆ ಪರಿಹಾರದ ಚೆಕ್ ವಿತರಿಸಲು ₹2 ಲಕ್ಷ ಲಂಚ ಪಡೆಯುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿ ವ್ಯವಸ್ಥಾಪಕನನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಂಗಳವಾರ ಬಂಧಿಸಿದೆ.</p>.<p>ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ- 1 ಕಚೇರಿಯ ವ್ಯವಸ್ಥಾಪಕ ದಾಸೇಗೌಡ ಬಂಧಿತ ಅಧಿಕಾರಿ. ವಿಶೇಷ ಭೂಸ್ವಾಧೀನಾಧಿಕಾರಿ- 1 ತೇಜಸ್ ಪರವಾಗಿ ಲಂಚ ಪಡೆದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>'ಚಿಂತಾಮಣಿ ತಾಲ್ಲೂಕಿನ ಮಲ್ಕಾಪುರ ಗ್ರಾಮದಲ್ಲಿ ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿರುವ ಜಮೀನಿನ ಮಾಲೀಕರಿಗೆ ಪರಿಹಾರ ನೀಡಬೇಕಿತ್ತು. ಜಮೀನಿನ ಮಾಲೀಕರು ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರು. ತೇಜಸ್ ₹ 13 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಡು, ₹10.5 ಲಕ್ಷ ಪಡೆದಿದ್ದಾರೆ ಎಂದು ಜಮೀನು ಮಾಲೀಕರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿತ್ತು' ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಅರಮನೆ ರಸ್ತೆಯಲ್ಲಿರುವ ಕೆಐಎಡಿಬಿ ಕಚೇರಿಯಲ್ಲಿ ಮಂಗಳವಾರ ದಾಸೇಗೌಡ ₹ 2 ಲಕ್ಷ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>