ಬೆಸ್ಕಾಂ ಕಸ್ತೂರಿನಗರ ಕಚೇರಿ ವ್ಯಾಪ್ತಿಯಲ್ಲಿ ಮನೆಯೊಂದರ ಆವರಣದಲ್ಲಿದ್ದ ವಿದ್ಯುತ್ ಕಂಬ ಸ್ಥಳಾಂತರ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಾರಾಯಣಪುರ ನಿವಾಸಿ ಅರವಿಂದ್ ಎಂಬ ಎಲೆಕ್ಟ್ರಿಕಲ್ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಬೇಕಿತ್ತು. ಅವರು ಕಚೇರಿಯನ್ನು ಸಂಪರ್ಕಿಸಿದ್ದಾಗ ಕಾರ್ಯಾದೇಶ ನೀಡಲು ₹25,000 ಲಂಚ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ₹ 5,000 ಪಡೆದುಕೊಂಡಿದ್ದರು.