<p><strong>ಶಿರಾ:</strong> ವಿವಾಹದ ಹಿಂದಿನ ದಿನ ಸಿನಿಮೀಯ ರೀತಿಯಲ್ಲಿ ನಾಟಕವಾಡಿದವಧು ಪ್ರಿಯಕರನ ಜೊತೆ ಹೋಗಿರುವ ಪ್ರಸಂಗ ತಾಲ್ಲೂಕಿನ ಮೆಳೇಕೋಟೆ ಗ್ರಾಮದಲ್ಲಿ ನಡೆದಿದೆ.</p>.<p>ಮೆಳೇಕೋಟೆಯ ಯುವತಿಯ ಜೊತೆ ದೊಡ್ಡಗೂಳ ಗ್ರಾಮದ ಮಂಜುನಾಥ್ ವಿವಾಹ ನಿಶ್ಚಯವಾಗಿತ್ತು. ಶನಿವಾರ ಪ್ರಥಮ ಶಾಸ್ತ್ರ ಹಾಗೂ ಆರತಕ್ಷತೆ ನಡೆದಿತ್ತು. ಭಾನುವಾರ ಬೆಳಿಗ್ಗೆ ಮುಹೂರ್ತಕ್ಕೆ ಎಲ್ಲ ರೀತಿಯ ತಯಾರಿ ಜರುಗಿತ್ತು.</p>.<p>ಶನಿವಾರ ರಾತ್ರಿ ವಧು ವಿಷ ಸೇವಿಸುವ ನಾಟಕವಾಡಿದ್ದಾಳೆ. ವಿಷವನ್ನು ಮೈ ಮೇಲೆ ಚೆಲ್ಲಿಕೊಂಡಿದ್ದಾಳೆ. ಪೋಷಕರು ವಧುವನ್ನು ತಾವರೆಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>ಆಗ ವಧು ಆಸ್ಪತ್ರೆಯಿಂದ ತನ್ನ ಪ್ರಿಯಕರನಾದ ಅತ್ತೆಯ ಮಗ ಚೇತನ್ ಎಂಬುವವರ ಜೊತೆ ಪರಾರಿಯಾಗಿದ್ದಾಳೆ. ಈ ಇಬ್ಬರು ಹಲವು ದಿನಗಳಿಂದ ಪ್ರೀತಿಸುತ್ತಿದ್ದರು. ಯುವತಿಗೆ ಈ ಮದುವೆ ಇಷ್ಟ ಇರಲಿಲ್ಲ. ಪೋಷಕರು ಬಲವಂತವಾಗಿ ಒಪ್ಪಿಸಿದ್ದರು ಎನ್ನಲಾಗಿದೆ.</p>.<p>‘ವಧುವಿನ ಸಂಬಂಧಿಕರು ಠಾಣೆಗೆ ಬಂದು ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ. ಆದರೆ ದೂರು ನೀಡಿಲ್ಲ’ ಎಂದು ತಾವರೆಕೆರೆಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ವಿವಾಹದ ಹಿಂದಿನ ದಿನ ಸಿನಿಮೀಯ ರೀತಿಯಲ್ಲಿ ನಾಟಕವಾಡಿದವಧು ಪ್ರಿಯಕರನ ಜೊತೆ ಹೋಗಿರುವ ಪ್ರಸಂಗ ತಾಲ್ಲೂಕಿನ ಮೆಳೇಕೋಟೆ ಗ್ರಾಮದಲ್ಲಿ ನಡೆದಿದೆ.</p>.<p>ಮೆಳೇಕೋಟೆಯ ಯುವತಿಯ ಜೊತೆ ದೊಡ್ಡಗೂಳ ಗ್ರಾಮದ ಮಂಜುನಾಥ್ ವಿವಾಹ ನಿಶ್ಚಯವಾಗಿತ್ತು. ಶನಿವಾರ ಪ್ರಥಮ ಶಾಸ್ತ್ರ ಹಾಗೂ ಆರತಕ್ಷತೆ ನಡೆದಿತ್ತು. ಭಾನುವಾರ ಬೆಳಿಗ್ಗೆ ಮುಹೂರ್ತಕ್ಕೆ ಎಲ್ಲ ರೀತಿಯ ತಯಾರಿ ಜರುಗಿತ್ತು.</p>.<p>ಶನಿವಾರ ರಾತ್ರಿ ವಧು ವಿಷ ಸೇವಿಸುವ ನಾಟಕವಾಡಿದ್ದಾಳೆ. ವಿಷವನ್ನು ಮೈ ಮೇಲೆ ಚೆಲ್ಲಿಕೊಂಡಿದ್ದಾಳೆ. ಪೋಷಕರು ವಧುವನ್ನು ತಾವರೆಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>ಆಗ ವಧು ಆಸ್ಪತ್ರೆಯಿಂದ ತನ್ನ ಪ್ರಿಯಕರನಾದ ಅತ್ತೆಯ ಮಗ ಚೇತನ್ ಎಂಬುವವರ ಜೊತೆ ಪರಾರಿಯಾಗಿದ್ದಾಳೆ. ಈ ಇಬ್ಬರು ಹಲವು ದಿನಗಳಿಂದ ಪ್ರೀತಿಸುತ್ತಿದ್ದರು. ಯುವತಿಗೆ ಈ ಮದುವೆ ಇಷ್ಟ ಇರಲಿಲ್ಲ. ಪೋಷಕರು ಬಲವಂತವಾಗಿ ಒಪ್ಪಿಸಿದ್ದರು ಎನ್ನಲಾಗಿದೆ.</p>.<p>‘ವಧುವಿನ ಸಂಬಂಧಿಕರು ಠಾಣೆಗೆ ಬಂದು ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ. ಆದರೆ ದೂರು ನೀಡಿಲ್ಲ’ ಎಂದು ತಾವರೆಕೆರೆಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>