<p><strong>ಬೆಂಗಳೂರು:</strong> ₹2,000 ಕೋಟಿ ಅಂದಾಜು ವೆಚ್ಚದಲ್ಲಿ ಸೇತುವೆಗಳ ಪುನರ್ನಿರ್ಮಾಣ ಮತ್ತು ಪುನಶ್ಚೇತನ ಕಾಮಗಾರಿ ಕೈಗೆತ್ತಿಕೊಳ್ಳುವ ಪ್ರಸ್ತಾವಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.</p>.<p>ಮೊದಲ ಹಂತದಲ್ಲಿ 39 ಬೃಹತ್ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಇದಕ್ಕೆ ₹1,000 ಕೋಟಿ ವೆಚ್ಚವಾಗಲಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಪಿಆರ್ಎಎಂಸಿ ಅಧ್ಯಯನದಲ್ಲಿ ಗುರುತಿಸಿರುವ ಮತ್ತು ಪ್ರಮುಖ ಸೇತುವೆಗಳ ಪುನರ್ ನಿರ್ಮಾಣ ಮತ್ತು ಪುನಶ್ಚೇತನದ ಅಗತ್ಯವಿದೆ. ಮಳೆ–ಪ್ರವಾಹದಿಂದ ಹಾನಿಗೊಳಗಾದ ಸೇತುವೆಗಳು, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಂಪರ್ಕ ರಹಿತ ಜನವಸತಿ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು ಕಾಲುಸಂಕ ನಿರ್ಮಿಸಲೂ ಒಪ್ಪಿಗೆ ನೀಡಲಾಗಿದೆ ಎಂದರು.</p>.<p><strong>ಪ್ರಮುಖ ತೀರ್ಮಾನಗಳು</strong></p>.<p>*ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜಿಗೆ ಅಗತ್ಯವಿರುವ ಕಾಲೇಜು ಕಟ್ಟಡ, ಹಾಸ್ಟೆಲ್ಗಳು, ವಸತಿ ಗೃಹಗಳು ಮತ್ತು ಇತರ ಸೌಲಭ್ಯಗಳ ಕಾಮಗಾರಿಗೆ ₹550 ಕೋಟಿ ಬೇಕಿದ್ದು, ಈ ಮೊತ್ತವನ್ನು ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಭರಿಸಲು ಅನುಮೋದನೆ</p>.<p>*ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ ₹405.55 ಕೋಟಿ ವೆಚ್ಚದಲ್ಲಿ 11 ಶ್ರಮಿಕ ವಸತಿ ಶಾಲೆಗಳ ಸ್ಥಾಪನೆ</p>.<p>*ಕಾರ್ಮಿಕರ ಕಲ್ಯಾಣ ನಿಧಿಗೆ ವಂತಿಗೆ ಮೊತ್ತವನ್ನು ಸಕಾಲದಲ್ಲಿ ಮತ್ತು ಶೀಘ್ರದಲ್ಲಿ ಜಮೆ ಮಾಡುವುದಕ್ಕೆ ಪೂರಕವಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ಮಸೂದೆಗೆ ಒಪ್ಪಿಗೆ</p>.<p>*₹90.07 ಕೋಟಿ ವೆಚ್ಚದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ‘ದಿಬ್ಬದಿಂದ–ಕಣಿವೆ ಜಲಾನಯನ’ ಕಾರ್ಯಕ್ರಮವನ್ನು ರಾಜ್ಯದ ಆಯ್ದ 15 ತಾಲ್ಲೂಕುಗಳಲ್ಲಿ 39,413 ಹೆಕ್ಟೇರ್ ಪ್ರದೇಶದಲ್ಲಿ ಜಾರಿಗೆ ಅನುಮೋದನೆ</p>.<p>*ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿರುವ ಭದ್ರತಾ ಕಾರ್ಯಾಚರಣೆ ಕೇಂದ್ರವನ್ನು ನವೀಕರಿಸಲು ಮತ್ತು ಸೈಬರ್ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶಕ್ಕಾಗಿ ₹38.33 ಕೋಟಿ ವೆಚ್ಚದಲ್ಲಿ ಹೊಸ ತಂತ್ರಾಂಶ ಅಳವಡಿಸಲು ಒಪ್ಪಿಗೆ</p>.<p>*5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ಇದೇ ನವೆಂಬರ್ವರೆಗೆ ವಿಸ್ತರಿಸಲು ಒಪ್ಪಿಗೆ</p>.<p>*ಕೇಂದ್ರ ಪುರಸ್ಕೃತ ಐಸಿಜೆಎಸ್–2.0 ಯೋಜನೆಯಡಿ ಕೇಂದ್ರದ ಗೃಹ ಮಂತ್ರಾಲಯ ಮಂಜೂರು ಮಾಡಿರುವ ₹89.22 ಕೋಟಿಯಲ್ಲಿ ಪೊಲೀಸ್ ಗಣಕ ವಿಭಾಗದ ವತಿಯಿಂದ ಉಪಕರಣಗಳನ್ನು ಖರೀದಿಸಲು ಮತ್ತು ತರಬೇತಿ ಕೈಗೊಳ್ಳಲು ಅನುಮೋದನೆ</p>.<p>*ಬೀದರ್ ಜಿಲ್ಲೆ ಔರಾದ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ</p>.<p>*ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ತಡೆಗಟ್ಟುವ ಉದ್ದೇಶದಿಂದ 52–54 ಮೀಟರ್ ಎತ್ತರಕ್ಕೆ ತಲುಪಬಲ್ಲ ಒಂದು ಏರಿಯಲ್ ಲ್ಯಾಡರ್ ಪ್ಲಾಟ್ ಫಾರಂ ವಾಹನ ಖರೀದಿಗೆ ₹16 ಕೋಟಿ</p>.<p>*ಮಂಗಳೂರು ತಾಲ್ಲೂಕಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯ ಸರ್ವೇ ಸಂಖ್ಯೆ 129 ಮತ್ತು 113 ರಲ್ಲಿನ 3.285 ಎಕರೆ ಭೂಮಿಯಲ್ಲಿ ‘ವಾಣಿಜ್ಯ ಕಚೇರಿ ಟೆಕ್ ಪಾರ್ಕ್’ ಅಭಿವೃದ್ಧಿಪಡಿಸಲು ಒಪ್ಪಿಗೆ</p>.<p>*ಮೈಸೂರು ನಗರದ ಸಿಪಿಸಿ ಪಾಲಿಟೆಕ್ನಿಕ್ ಸಂಸ್ಥೆಯ ಪಾರಂಪರಿಕ ಕಟ್ಟಡದ ನವೀಕರಣ ಹಾಗೂ ಹೊಸ ಪೂರಕ ಕಟ್ಟಡಗಳ ನಿರ್ಮಾಣ ಕಾಮಗಾರಿಗಳನ್ನು ₹70 ಕೋಟಿಯಲ್ಲಿ ಕೈಗೊಳ್ಳಲಾಗುವುದು. ಇದರಲ್ಲಿ ₹10 ಕೋಟಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭರಿಸಲಾಗುವುದು. ₹60 ಕೋಟಿಯನ್ನು ಬಜೆಟ್ನಿಂದ ಒದಗಿಸಲಾಗುವ ಅನುದಾನದಿಂದ ಹಂತ ಹಂತವಾಗಿ ಭರಿಸಲಾಗುವುದು</p>.<p>*ಚಿಂತಾಮಣಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಕಟ್ಟಡ ನವೀಕರಣ ಹಾಗೂ ಆಡಿಟೋರಿಯಂ ಸೇರಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾಮಗಾರಿಗಳಿಗೆ ₹50 ಕೋಟಿ. ಇದಕ್ಕೆ ಪರೀಕ್ಷಾ ಪ್ರಾಧಿಕಾರ ₹10 ಕೋಟಿ ಭರಿಸಲಿದೆ. ₹40 ಕೋಟಿ ಬಜೆಟ್ನಲ್ಲಿ ಒದಗಿಸಿದ ಅನುದಾನ ಬಳಸಿಕೊಳ್ಳಲಾಗುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ₹2,000 ಕೋಟಿ ಅಂದಾಜು ವೆಚ್ಚದಲ್ಲಿ ಸೇತುವೆಗಳ ಪುನರ್ನಿರ್ಮಾಣ ಮತ್ತು ಪುನಶ್ಚೇತನ ಕಾಮಗಾರಿ ಕೈಗೆತ್ತಿಕೊಳ್ಳುವ ಪ್ರಸ್ತಾವಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.</p>.<p>ಮೊದಲ ಹಂತದಲ್ಲಿ 39 ಬೃಹತ್ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಇದಕ್ಕೆ ₹1,000 ಕೋಟಿ ವೆಚ್ಚವಾಗಲಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಪಿಆರ್ಎಎಂಸಿ ಅಧ್ಯಯನದಲ್ಲಿ ಗುರುತಿಸಿರುವ ಮತ್ತು ಪ್ರಮುಖ ಸೇತುವೆಗಳ ಪುನರ್ ನಿರ್ಮಾಣ ಮತ್ತು ಪುನಶ್ಚೇತನದ ಅಗತ್ಯವಿದೆ. ಮಳೆ–ಪ್ರವಾಹದಿಂದ ಹಾನಿಗೊಳಗಾದ ಸೇತುವೆಗಳು, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಂಪರ್ಕ ರಹಿತ ಜನವಸತಿ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು ಕಾಲುಸಂಕ ನಿರ್ಮಿಸಲೂ ಒಪ್ಪಿಗೆ ನೀಡಲಾಗಿದೆ ಎಂದರು.</p>.<p><strong>ಪ್ರಮುಖ ತೀರ್ಮಾನಗಳು</strong></p>.<p>*ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜಿಗೆ ಅಗತ್ಯವಿರುವ ಕಾಲೇಜು ಕಟ್ಟಡ, ಹಾಸ್ಟೆಲ್ಗಳು, ವಸತಿ ಗೃಹಗಳು ಮತ್ತು ಇತರ ಸೌಲಭ್ಯಗಳ ಕಾಮಗಾರಿಗೆ ₹550 ಕೋಟಿ ಬೇಕಿದ್ದು, ಈ ಮೊತ್ತವನ್ನು ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಭರಿಸಲು ಅನುಮೋದನೆ</p>.<p>*ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ ₹405.55 ಕೋಟಿ ವೆಚ್ಚದಲ್ಲಿ 11 ಶ್ರಮಿಕ ವಸತಿ ಶಾಲೆಗಳ ಸ್ಥಾಪನೆ</p>.<p>*ಕಾರ್ಮಿಕರ ಕಲ್ಯಾಣ ನಿಧಿಗೆ ವಂತಿಗೆ ಮೊತ್ತವನ್ನು ಸಕಾಲದಲ್ಲಿ ಮತ್ತು ಶೀಘ್ರದಲ್ಲಿ ಜಮೆ ಮಾಡುವುದಕ್ಕೆ ಪೂರಕವಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ಮಸೂದೆಗೆ ಒಪ್ಪಿಗೆ</p>.<p>*₹90.07 ಕೋಟಿ ವೆಚ್ಚದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ‘ದಿಬ್ಬದಿಂದ–ಕಣಿವೆ ಜಲಾನಯನ’ ಕಾರ್ಯಕ್ರಮವನ್ನು ರಾಜ್ಯದ ಆಯ್ದ 15 ತಾಲ್ಲೂಕುಗಳಲ್ಲಿ 39,413 ಹೆಕ್ಟೇರ್ ಪ್ರದೇಶದಲ್ಲಿ ಜಾರಿಗೆ ಅನುಮೋದನೆ</p>.<p>*ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿರುವ ಭದ್ರತಾ ಕಾರ್ಯಾಚರಣೆ ಕೇಂದ್ರವನ್ನು ನವೀಕರಿಸಲು ಮತ್ತು ಸೈಬರ್ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶಕ್ಕಾಗಿ ₹38.33 ಕೋಟಿ ವೆಚ್ಚದಲ್ಲಿ ಹೊಸ ತಂತ್ರಾಂಶ ಅಳವಡಿಸಲು ಒಪ್ಪಿಗೆ</p>.<p>*5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ಇದೇ ನವೆಂಬರ್ವರೆಗೆ ವಿಸ್ತರಿಸಲು ಒಪ್ಪಿಗೆ</p>.<p>*ಕೇಂದ್ರ ಪುರಸ್ಕೃತ ಐಸಿಜೆಎಸ್–2.0 ಯೋಜನೆಯಡಿ ಕೇಂದ್ರದ ಗೃಹ ಮಂತ್ರಾಲಯ ಮಂಜೂರು ಮಾಡಿರುವ ₹89.22 ಕೋಟಿಯಲ್ಲಿ ಪೊಲೀಸ್ ಗಣಕ ವಿಭಾಗದ ವತಿಯಿಂದ ಉಪಕರಣಗಳನ್ನು ಖರೀದಿಸಲು ಮತ್ತು ತರಬೇತಿ ಕೈಗೊಳ್ಳಲು ಅನುಮೋದನೆ</p>.<p>*ಬೀದರ್ ಜಿಲ್ಲೆ ಔರಾದ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ</p>.<p>*ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ತಡೆಗಟ್ಟುವ ಉದ್ದೇಶದಿಂದ 52–54 ಮೀಟರ್ ಎತ್ತರಕ್ಕೆ ತಲುಪಬಲ್ಲ ಒಂದು ಏರಿಯಲ್ ಲ್ಯಾಡರ್ ಪ್ಲಾಟ್ ಫಾರಂ ವಾಹನ ಖರೀದಿಗೆ ₹16 ಕೋಟಿ</p>.<p>*ಮಂಗಳೂರು ತಾಲ್ಲೂಕಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯ ಸರ್ವೇ ಸಂಖ್ಯೆ 129 ಮತ್ತು 113 ರಲ್ಲಿನ 3.285 ಎಕರೆ ಭೂಮಿಯಲ್ಲಿ ‘ವಾಣಿಜ್ಯ ಕಚೇರಿ ಟೆಕ್ ಪಾರ್ಕ್’ ಅಭಿವೃದ್ಧಿಪಡಿಸಲು ಒಪ್ಪಿಗೆ</p>.<p>*ಮೈಸೂರು ನಗರದ ಸಿಪಿಸಿ ಪಾಲಿಟೆಕ್ನಿಕ್ ಸಂಸ್ಥೆಯ ಪಾರಂಪರಿಕ ಕಟ್ಟಡದ ನವೀಕರಣ ಹಾಗೂ ಹೊಸ ಪೂರಕ ಕಟ್ಟಡಗಳ ನಿರ್ಮಾಣ ಕಾಮಗಾರಿಗಳನ್ನು ₹70 ಕೋಟಿಯಲ್ಲಿ ಕೈಗೊಳ್ಳಲಾಗುವುದು. ಇದರಲ್ಲಿ ₹10 ಕೋಟಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭರಿಸಲಾಗುವುದು. ₹60 ಕೋಟಿಯನ್ನು ಬಜೆಟ್ನಿಂದ ಒದಗಿಸಲಾಗುವ ಅನುದಾನದಿಂದ ಹಂತ ಹಂತವಾಗಿ ಭರಿಸಲಾಗುವುದು</p>.<p>*ಚಿಂತಾಮಣಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಕಟ್ಟಡ ನವೀಕರಣ ಹಾಗೂ ಆಡಿಟೋರಿಯಂ ಸೇರಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾಮಗಾರಿಗಳಿಗೆ ₹50 ಕೋಟಿ. ಇದಕ್ಕೆ ಪರೀಕ್ಷಾ ಪ್ರಾಧಿಕಾರ ₹10 ಕೋಟಿ ಭರಿಸಲಿದೆ. ₹40 ಕೋಟಿ ಬಜೆಟ್ನಲ್ಲಿ ಒದಗಿಸಿದ ಅನುದಾನ ಬಳಸಿಕೊಳ್ಳಲಾಗುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>