‘ಸ್ವಾತಂತ್ರ್ಯ ಪೂರ್ವದಲ್ಲಿ ಇದ್ದ ಎಲ್ಲ ಪೂಜಾ ಸ್ಥಳ, ಪ್ರಾರ್ಥನಾ ಸ್ಥಳ, ಧಾರ್ಮಿಕ ಸ್ಥಳಗಳನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳಬೇಕು ಎಂದು ‘ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991’ ಹೇಳುತ್ತದೆ. ಇದಕ್ಕಾಗಿ1947ರ ಆಗಸ್ಟ್ 15ರ ದಿನಾಂಕ ಗುರುತು ಮಾಡಿದೆ. ಇದಕ್ಕೂ ಮುಂಚೆ ಇದ್ದ ಯಾವುದೇ ಧಾರ್ಮಿಕ ಸ್ಥಳ ಭವಿಷ್ಯದಲ್ಲಿ ಬದಲಾಯಿಸಬಾರದು ಎಂದರ್ಥ. ಜ್ಞಾನವಾಪಿ ಮಸೀದಿ ವಿಚಾರದಲ್ಲೂ ಸುಪ್ರಿಂ ಕೋರ್ಟ್ ಇದೇ ಕಾನೂನು ಎತ್ತಿಹಿಡಿಯುತ್ತದೆ ಎಂಬ ನಮ್ಮ ನಿರೀಕ್ಷೆ ಹುಸಿಯಾಗಿದೆ’ ಎಂದರು.