<p><strong>ಚಿಕ್ಕಮಗಳೂರು:</strong> ಅತಿವೃಷ್ಟಿ ಹಾನಿ ಪರಿಹಾರಕ್ಕೆ ಕೇಂದ್ರ ಸರ್ಕಾರವು ನಾಲ್ಕೈದು ದಿನಗಳಲ್ಲಿ ಅನುದಾನ ಘೋಷಿಸುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದರು.</p>.<p>ಶೃಂಗೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಏಳೆಂಟು ರಾಜ್ಯಗಳಲ್ಲಿ ಅತಿವೃಷ್ಟಿಯಾಗಿದೆ.ಕೇಂದ್ರದ ತಂಡವು ರಾಜ್ಯದಲ್ಲಿ ಹಾನಿ ಅಧ್ಯಯನ ಮಾಡಿ ವರದಿ ನೀಡಿದೆ’ ಎಂದು ಉತ್ತರಿಸಿದರು.</p>.<p>‘ಅತಿವೃಷ್ಟಿಯಲ್ಲಿ ಮನೆ ಪೂರ್ಣ ನಾಶವಾಗಿರುವ ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ತಲಾ ₹ 5 ಲಕ್ಷ ಒದಗಿಸಲಾಗುವುದು. ಈ ಬಗ್ಗೆ ಆದೇಶ ಹೊರಬೀಳಲಿದೆ. ಕಾಫಿ ಸಹಿತ ವಿವಿಧ ಬೆಳೆಗಳು ಈ ಭಾಗದಲ್ಲಿ ನಾಶವಾಗಿವೆ. ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ. ವರದಿ ಪಡೆದು ಪರಿಹಾರ ನೀಡುವನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಕಾಂಗ್ರೆಸ್ ಪ್ರತಿಪಕ್ಷವಾಗಿ ಅಸ್ತಿತ್ವ ಉಳಿಸಿಕೊಳ್ಳಲು ಏನಾದರೊಂದು ಚಟುವಟಿಕೆ ಮಾಡಬೇಕು. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದಾಗಿದೆ. ಸಂತ್ರಸ್ತರಿಗೆ ತಲಾ ₹ 10,000 ನೀಡಲಾಗಿದೆ. ಪರಿಹಾರ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಪ್ರತಿಭಟನೆಗೆ ನಾನೇಕೆಬೇಡ ಎನ್ನಲಿ’ ಎಂದು ಉತ್ತರಿಸಿದರು.</p>.<p>‘ಈ ಹಿಂದೆ ಮಳೆಗಾಗಿ ಪೂಜೆ ಸಲ್ಲಿಸಿದ್ದೆವು. ಅತಿವೃಷ್ಟಿಯಿಂದ ಈ ಭಾಗದಲ್ಲಿ ಅಪಾರ ಹಾನಿಯಾಗಿದೆ. ಮಳೆ ಬೇಡ ಎಂದು ಪೂಜೆ ಸಲ್ಲಿಸುವ ಸ್ಥಿತಿ ಇದೆ,’ ಎಂದು ಪ್ರತಿಕ್ರಿಯಿಸಿದರು.</p>.<p>‘ಶಾರದಾಂಬೆ ದರ್ಶನ ಪಡೆದು, ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ. ಗೌರಿಗದ್ದೆಯ ಮಠದಲ್ಲಿ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಳ್ಳತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಅತಿವೃಷ್ಟಿ ಹಾನಿ ಪರಿಹಾರಕ್ಕೆ ಕೇಂದ್ರ ಸರ್ಕಾರವು ನಾಲ್ಕೈದು ದಿನಗಳಲ್ಲಿ ಅನುದಾನ ಘೋಷಿಸುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದರು.</p>.<p>ಶೃಂಗೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಏಳೆಂಟು ರಾಜ್ಯಗಳಲ್ಲಿ ಅತಿವೃಷ್ಟಿಯಾಗಿದೆ.ಕೇಂದ್ರದ ತಂಡವು ರಾಜ್ಯದಲ್ಲಿ ಹಾನಿ ಅಧ್ಯಯನ ಮಾಡಿ ವರದಿ ನೀಡಿದೆ’ ಎಂದು ಉತ್ತರಿಸಿದರು.</p>.<p>‘ಅತಿವೃಷ್ಟಿಯಲ್ಲಿ ಮನೆ ಪೂರ್ಣ ನಾಶವಾಗಿರುವ ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ತಲಾ ₹ 5 ಲಕ್ಷ ಒದಗಿಸಲಾಗುವುದು. ಈ ಬಗ್ಗೆ ಆದೇಶ ಹೊರಬೀಳಲಿದೆ. ಕಾಫಿ ಸಹಿತ ವಿವಿಧ ಬೆಳೆಗಳು ಈ ಭಾಗದಲ್ಲಿ ನಾಶವಾಗಿವೆ. ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ. ವರದಿ ಪಡೆದು ಪರಿಹಾರ ನೀಡುವನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>‘ಕಾಂಗ್ರೆಸ್ ಪ್ರತಿಪಕ್ಷವಾಗಿ ಅಸ್ತಿತ್ವ ಉಳಿಸಿಕೊಳ್ಳಲು ಏನಾದರೊಂದು ಚಟುವಟಿಕೆ ಮಾಡಬೇಕು. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದಾಗಿದೆ. ಸಂತ್ರಸ್ತರಿಗೆ ತಲಾ ₹ 10,000 ನೀಡಲಾಗಿದೆ. ಪರಿಹಾರ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಪ್ರತಿಭಟನೆಗೆ ನಾನೇಕೆಬೇಡ ಎನ್ನಲಿ’ ಎಂದು ಉತ್ತರಿಸಿದರು.</p>.<p>‘ಈ ಹಿಂದೆ ಮಳೆಗಾಗಿ ಪೂಜೆ ಸಲ್ಲಿಸಿದ್ದೆವು. ಅತಿವೃಷ್ಟಿಯಿಂದ ಈ ಭಾಗದಲ್ಲಿ ಅಪಾರ ಹಾನಿಯಾಗಿದೆ. ಮಳೆ ಬೇಡ ಎಂದು ಪೂಜೆ ಸಲ್ಲಿಸುವ ಸ್ಥಿತಿ ಇದೆ,’ ಎಂದು ಪ್ರತಿಕ್ರಿಯಿಸಿದರು.</p>.<p>‘ಶಾರದಾಂಬೆ ದರ್ಶನ ಪಡೆದು, ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ. ಗೌರಿಗದ್ದೆಯ ಮಠದಲ್ಲಿ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಳ್ಳತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>