<p><strong>ಗದಗ:</strong> ‘ಶಾಸಕ ಶ್ರೀರಾಮುಲು ವಿರುದ್ಧ ಸಿದ್ಧರಾಮಯ್ಯ ಅವರು 420 ಪದ ಬಳಸಿರುವುದು ಇಡೀ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದಂತೆ. ಅವರ ಬಾಯಲ್ಲಿ ಇಂಥ ಮಾತು ನಿರೀಕ್ಷಿಸಿರಲಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.<br /><br />ಗುರುವಾರ ಇಲ್ಲಿನ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದ ಅವರು, ಲಿಂಗೈಕ್ಯರಾದ ತೋಂಟದ ಶ್ರೀಗಳ ಗದ್ದುಗೆ ದರ್ಶನ ಪಡೆದು, ನಮನ ಸಲ್ಲಿಸಿದರು.</p>.<p>‘ಶ್ರೀರಾಮುಲು ಮುಂದಿನ ಮುಖ್ಯಮಂತ್ರಿ ಎಂಬ ಸೋಮಣ್ಣ ಹೇಳಿಕೆ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, ‘ಈ ವಿಚಾರ ನನಗೆ ಗೊತ್ತಿಲ್ಲ’ ಎಂದು ಹೇಳಿದರು.</p>.<p>‘ನಾವು ಆಪರೇಷನ್ ಕಮಲ ಮಾಡಲ್ಲ. ಆ ರೀತಿಯ ತೀರ್ಮಾನ ಆಗಿದೆ. ಬಿಜೆಪಿಗೆ ಶಾಸಕರ ಸಂಖ್ಯೆ 105 ಆದ ಮೇಲೆ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತದೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>‘ಆಂತರಿಕ ಕಲಹದಿಂದ ಕಾಂಗ್ರೆಸ್ನಲ್ಲಿ ದಿನಕ್ಕೊಬ್ಬರು ಶಾಸಕರು ಬಂಡಾಯ ಏಳುತ್ತಿದ್ದಾರೆ. ಕುಮಾರಸ್ವಾಮಿ ಹಾಗೂ ರೇವಣ್ಣ ಅವರು ಕಾಂಗ್ರೆಸ್ ಶಾಸಕರ ಕೆಲಸ ಮಾಡಿಕೊಡುತ್ತಿಲ್ಲ ಅಂತ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ನ ಅವನತಿ ಪ್ರಾರಂಭವಾಗಿದೆ’ ಎಂದರು.<br /><br />‘ಸೋಮಣ್ಣ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಹೈಕಮಾಂಡ್ ಅವರ ಮೇಲೆ ವಿಶ್ವಾಸವಿಟ್ಟಿದೆ. ಶಿವಮೊಗ್ಗ, ಬಳ್ಳಾರಿ, ಜಮಖಂಡಿಯನ್ನು ನಾವು ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ’ ಎಂದು ಶೋಭಾ ಕರಂದ್ಲಾಜೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಶಾಸಕ ಶ್ರೀರಾಮುಲು ವಿರುದ್ಧ ಸಿದ್ಧರಾಮಯ್ಯ ಅವರು 420 ಪದ ಬಳಸಿರುವುದು ಇಡೀ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದಂತೆ. ಅವರ ಬಾಯಲ್ಲಿ ಇಂಥ ಮಾತು ನಿರೀಕ್ಷಿಸಿರಲಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.<br /><br />ಗುರುವಾರ ಇಲ್ಲಿನ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದ ಅವರು, ಲಿಂಗೈಕ್ಯರಾದ ತೋಂಟದ ಶ್ರೀಗಳ ಗದ್ದುಗೆ ದರ್ಶನ ಪಡೆದು, ನಮನ ಸಲ್ಲಿಸಿದರು.</p>.<p>‘ಶ್ರೀರಾಮುಲು ಮುಂದಿನ ಮುಖ್ಯಮಂತ್ರಿ ಎಂಬ ಸೋಮಣ್ಣ ಹೇಳಿಕೆ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, ‘ಈ ವಿಚಾರ ನನಗೆ ಗೊತ್ತಿಲ್ಲ’ ಎಂದು ಹೇಳಿದರು.</p>.<p>‘ನಾವು ಆಪರೇಷನ್ ಕಮಲ ಮಾಡಲ್ಲ. ಆ ರೀತಿಯ ತೀರ್ಮಾನ ಆಗಿದೆ. ಬಿಜೆಪಿಗೆ ಶಾಸಕರ ಸಂಖ್ಯೆ 105 ಆದ ಮೇಲೆ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತದೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>‘ಆಂತರಿಕ ಕಲಹದಿಂದ ಕಾಂಗ್ರೆಸ್ನಲ್ಲಿ ದಿನಕ್ಕೊಬ್ಬರು ಶಾಸಕರು ಬಂಡಾಯ ಏಳುತ್ತಿದ್ದಾರೆ. ಕುಮಾರಸ್ವಾಮಿ ಹಾಗೂ ರೇವಣ್ಣ ಅವರು ಕಾಂಗ್ರೆಸ್ ಶಾಸಕರ ಕೆಲಸ ಮಾಡಿಕೊಡುತ್ತಿಲ್ಲ ಅಂತ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ನ ಅವನತಿ ಪ್ರಾರಂಭವಾಗಿದೆ’ ಎಂದರು.<br /><br />‘ಸೋಮಣ್ಣ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಹೈಕಮಾಂಡ್ ಅವರ ಮೇಲೆ ವಿಶ್ವಾಸವಿಟ್ಟಿದೆ. ಶಿವಮೊಗ್ಗ, ಬಳ್ಳಾರಿ, ಜಮಖಂಡಿಯನ್ನು ನಾವು ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ’ ಎಂದು ಶೋಭಾ ಕರಂದ್ಲಾಜೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>