<p><strong>ಬೆಂಗಳೂರು</strong>: ನಗರದ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಐ.ಟಿ ಕಾರಿಡಾರ್ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡಿದ್ದ 8 ಎಕರೆ 10 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ವರದಿ ತಿರಸ್ಕರಿಸಿರುವ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮರು ತನಿಖೆ ನಡೆಸುವಂತೆ ಆದೇಶಿಸಿದೆ.</p>.<p>ಯಡಿಯೂರಪ್ಪ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸುವಂತೆ ಶಿಫಾರಸು ಮಾಡಿ ಲೋಕಾಯುಕ್ತ ಪೊಲೀಸರು ಜನವರಿ 18ರಂದು ಸಲ್ಲಿಸಿದ್ದ ವರದಿಯನ್ನು ನ್ಯಾಯಾಲಯ ಶನಿವಾರ ತಿರಸ್ಕರಿಸಿದ್ದು, ಮರು ತನಿಖೆ ನಡೆಸಿ ಆಗಸ್ಟ್ 21ರೊಳಗೆ ವರದಿ ಸಲ್ಲಿಸುವಂತೆ ತನಿಖಾಧಿಕಾರಿಗೆ ನಿರ್ದೇಶನ ನೀಡಿದೆ.</p>.<p>2006–07ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಡಿಯೂರಪ್ಪ ಅವರು ಕಾನೂನಿಗೆ ವಿರುದ್ಧವಾಗಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳ 8 ಎಕರೆ 10 ಗುಂಟೆ ಜಮೀನನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದರು ಎಂದು ಆರೋಪಿಸಿ ನಗರದ ವಾಸುದೇವ ರೆಡ್ಡಿ ಎಂಬುವವರು 2013ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯದ ಆದೇಶದಂತೆ 2015ರ ಫೆಬ್ರುವರಿ 21ರಂದು ಲೋಕಾಯುಕ್ತ ಪೊಲೀಸರು ಎಫ್ಐಆರ್ದಾಖಲಿಸಿ ತನಿಖೆ ಆರಂಭಿಸಿದ್ದರು.</p>.<p>ದೀರ್ಘ ಕಾಲ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿರಲಿಲ್ಲ. ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p>.<p>ಅದನ್ನು ತಿರಸ್ಕರಿಸಿ 2020ರ ಡಿಸೆಂಬರ್ 22ರಂದು ಆದೇಶ ಹೊರಡಿಸಿದ್ದ ಹೈಕೋರ್ಟ್, ‘ಅರ್ಜಿದಾರರು ಸಂಜ್ಞೇಯ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಸಾಕ್ಷ್ಯಗಳು ಮೇಲ್ನೋಟದಲ್ಲೇ ಕಾಣಿಸುತ್ತಿರುವುದರಿಂದ ಪ್ರಕರಣ ರದ್ದು ಮಾಡಲಾಗದು’ ಎಂದು ಹೇಳಿತ್ತು. ಪ್ರಕರಣದ ತನಿಖೆಯನ್ನು ವಿಳಂಬ ಮಾಡಿರುವುದಕ್ಕಾಗಿ ಲೋಕಾಯುಕ್ತ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.</p>.<p><strong>10,000 ಪುಟಗಳ ವರದಿ:</strong>2021ರ ಜನವರಿ 18ರಂದು ಭಾರಿ ಪ್ರಮಾಣದ ದಾಖಲೆಗಳೊಂದಿಗೆ 10,000 ಪುಟಗಳ ‘ಬಿ’ ವರದಿ ಸಲ್ಲಿಸಿದ್ದ ಲೋಕಾಯುಕ್ತ ಡಿವೈಎಸ್ಪಿ ಎಂ.ಜಿ. ಶಂಕರನಾರಾಯಣ, ಯಡಿಯೂರಪ್ಪ ವಿರುದ್ಧದ ಪ್ರಕರಣವನ್ನುಮುಕ್ತಾಯಗೊಳಿಸುವಂತೆ ಶಿಫಾರಸು ಮಾಡಿದ್ದರು.</p>.<p>ದೂರುದಾರರ ಪರ ವಾದ ಮಂಡಿಸಿದ್ದ ಸುಪ್ರೀಂಕೋರ್ಟ್ ವಕೀಲ ಕೆ.ವಿ. ಧನಂಜಯ್, ‘ಬಿ’ ವರದಿಗೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದರು. ತನಿಖಾ ತಂಡದ ವರದಿಯನ್ನು ತಿರಸ್ಕರಿಸಿ, ಯಡಿಯೂರಪ್ಪ ಮತ್ತು ಇತರ ಆರೋಪಿಗಳ ವಿರುದ್ಧ ವಿಚಾರಣೆ ಆರಂಭಿಸುವಂತೆ ಕೋರಿದ್ದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಶ್ರೀಧರ್ ಗೋಪಾಲಕೃಷ್ಣ ಭಟ್, ‘ಬಿ’ ವರದಿಯನ್ನು ತಿರಸ್ಕರಿಸಿದರು.</p>.<p>‘ದೂರಿನಲ್ಲಿರುವ ಆರೋಪಗಳ ಕುರಿತು ಮರುತನಿಖೆ ನಡೆಸಿ ಅಂತಿಮ ವರದಿ ಅಥವಾ ಹೆಚ್ಚುವರಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಘಟಕದ ಡಿವೈಎಸ್ಪಿಗೆ ನಿರ್ದೇಶನ ನೀಡಲಾಗಿದೆ. ಈ ದೂರನ್ನು ರದ್ದುಗೊಳಿಸುವಂತೆ ಕೋರಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ, ತನಿಖೆಯ ವಿಳಂಬದ ಕುರಿತು ನ್ಯಾಯಾಲಯ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಗಮನದಲ್ಲಿ ಇರಿಸಿಕೊಂಡು ತನಿಖೆ ನಡೆಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಈ ದೂರಿನಲ್ಲಿ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಮೊದಲ ಆರೋಪಿ ಎಂದು ಹೆಸರಿಸಲಾಗಿತ್ತು. ಅವರ ವಿರುದ್ಧದ ವಿಚಾರಣೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಆ ಆದೇಶದ ಆಧಾರದಲ್ಲೇ ತನಿಖಾಧಿಕಾರಿ ‘ಬಿ’ ವರದಿ ಸಲ್ಲಿಸಿದ್ದರು.</p>.<p>‘ತನಿಖಾಧಿಕಾರಿ ಪ್ರಕರಣದ ಪ್ರಾಥಮಿಕ ಅಂಶಗಳ ಬಗ್ಗೆಯೇ ತನಿಖೆ ನಡೆಸಿಲ್ಲ. ಈ ಪ್ರಕರಣಕ್ಕೆ ಸಂಬಂಧಪಡದ ವಿಚಾರಗಳ ಆಧಾರದಲ್ಲಿ ನಿರ್ಧಾರಕ್ಕೆ ಬರಲಾಗಿದೆ. ಆರೋಪಿಯು ಅಧಿಕಾರ ದುರ್ಬಳಕೆ ಮಾಡಿದ್ದಾರೆಯೆ? ಡಿನೋಟಿಫಿಕೇಷನ್ ಮಾಡಲು ಯಾವುದಾದರೂ ಲಾಭ ಪಡೆದಿದ್ದಾರೆಯೆ? ಈ ತೀರ್ಮಾನವನ್ನು ಸಾರ್ವಜನಿಕ ಹಿತಾಸಕ್ತಿಗಾಗಿ ಕೈಗೊಂಡಿದ್ದರೆ ಎಂಬ ಪ್ರಶ್ನೆಗಳಿಗೆ ವರದಿಯಲ್ಲಿ ಉತ್ತರವೇ ಇಲ್ಲ’ ಎಂದು ನ್ಯಾಯಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಐ.ಟಿ ಕಾರಿಡಾರ್ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡಿದ್ದ 8 ಎಕರೆ 10 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ವರದಿ ತಿರಸ್ಕರಿಸಿರುವ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮರು ತನಿಖೆ ನಡೆಸುವಂತೆ ಆದೇಶಿಸಿದೆ.</p>.<p>ಯಡಿಯೂರಪ್ಪ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸುವಂತೆ ಶಿಫಾರಸು ಮಾಡಿ ಲೋಕಾಯುಕ್ತ ಪೊಲೀಸರು ಜನವರಿ 18ರಂದು ಸಲ್ಲಿಸಿದ್ದ ವರದಿಯನ್ನು ನ್ಯಾಯಾಲಯ ಶನಿವಾರ ತಿರಸ್ಕರಿಸಿದ್ದು, ಮರು ತನಿಖೆ ನಡೆಸಿ ಆಗಸ್ಟ್ 21ರೊಳಗೆ ವರದಿ ಸಲ್ಲಿಸುವಂತೆ ತನಿಖಾಧಿಕಾರಿಗೆ ನಿರ್ದೇಶನ ನೀಡಿದೆ.</p>.<p>2006–07ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಡಿಯೂರಪ್ಪ ಅವರು ಕಾನೂನಿಗೆ ವಿರುದ್ಧವಾಗಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳ 8 ಎಕರೆ 10 ಗುಂಟೆ ಜಮೀನನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದರು ಎಂದು ಆರೋಪಿಸಿ ನಗರದ ವಾಸುದೇವ ರೆಡ್ಡಿ ಎಂಬುವವರು 2013ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯದ ಆದೇಶದಂತೆ 2015ರ ಫೆಬ್ರುವರಿ 21ರಂದು ಲೋಕಾಯುಕ್ತ ಪೊಲೀಸರು ಎಫ್ಐಆರ್ದಾಖಲಿಸಿ ತನಿಖೆ ಆರಂಭಿಸಿದ್ದರು.</p>.<p>ದೀರ್ಘ ಕಾಲ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿರಲಿಲ್ಲ. ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p>.<p>ಅದನ್ನು ತಿರಸ್ಕರಿಸಿ 2020ರ ಡಿಸೆಂಬರ್ 22ರಂದು ಆದೇಶ ಹೊರಡಿಸಿದ್ದ ಹೈಕೋರ್ಟ್, ‘ಅರ್ಜಿದಾರರು ಸಂಜ್ಞೇಯ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಸಾಕ್ಷ್ಯಗಳು ಮೇಲ್ನೋಟದಲ್ಲೇ ಕಾಣಿಸುತ್ತಿರುವುದರಿಂದ ಪ್ರಕರಣ ರದ್ದು ಮಾಡಲಾಗದು’ ಎಂದು ಹೇಳಿತ್ತು. ಪ್ರಕರಣದ ತನಿಖೆಯನ್ನು ವಿಳಂಬ ಮಾಡಿರುವುದಕ್ಕಾಗಿ ಲೋಕಾಯುಕ್ತ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.</p>.<p><strong>10,000 ಪುಟಗಳ ವರದಿ:</strong>2021ರ ಜನವರಿ 18ರಂದು ಭಾರಿ ಪ್ರಮಾಣದ ದಾಖಲೆಗಳೊಂದಿಗೆ 10,000 ಪುಟಗಳ ‘ಬಿ’ ವರದಿ ಸಲ್ಲಿಸಿದ್ದ ಲೋಕಾಯುಕ್ತ ಡಿವೈಎಸ್ಪಿ ಎಂ.ಜಿ. ಶಂಕರನಾರಾಯಣ, ಯಡಿಯೂರಪ್ಪ ವಿರುದ್ಧದ ಪ್ರಕರಣವನ್ನುಮುಕ್ತಾಯಗೊಳಿಸುವಂತೆ ಶಿಫಾರಸು ಮಾಡಿದ್ದರು.</p>.<p>ದೂರುದಾರರ ಪರ ವಾದ ಮಂಡಿಸಿದ್ದ ಸುಪ್ರೀಂಕೋರ್ಟ್ ವಕೀಲ ಕೆ.ವಿ. ಧನಂಜಯ್, ‘ಬಿ’ ವರದಿಗೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದರು. ತನಿಖಾ ತಂಡದ ವರದಿಯನ್ನು ತಿರಸ್ಕರಿಸಿ, ಯಡಿಯೂರಪ್ಪ ಮತ್ತು ಇತರ ಆರೋಪಿಗಳ ವಿರುದ್ಧ ವಿಚಾರಣೆ ಆರಂಭಿಸುವಂತೆ ಕೋರಿದ್ದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಶ್ರೀಧರ್ ಗೋಪಾಲಕೃಷ್ಣ ಭಟ್, ‘ಬಿ’ ವರದಿಯನ್ನು ತಿರಸ್ಕರಿಸಿದರು.</p>.<p>‘ದೂರಿನಲ್ಲಿರುವ ಆರೋಪಗಳ ಕುರಿತು ಮರುತನಿಖೆ ನಡೆಸಿ ಅಂತಿಮ ವರದಿ ಅಥವಾ ಹೆಚ್ಚುವರಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಘಟಕದ ಡಿವೈಎಸ್ಪಿಗೆ ನಿರ್ದೇಶನ ನೀಡಲಾಗಿದೆ. ಈ ದೂರನ್ನು ರದ್ದುಗೊಳಿಸುವಂತೆ ಕೋರಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ, ತನಿಖೆಯ ವಿಳಂಬದ ಕುರಿತು ನ್ಯಾಯಾಲಯ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಗಮನದಲ್ಲಿ ಇರಿಸಿಕೊಂಡು ತನಿಖೆ ನಡೆಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಈ ದೂರಿನಲ್ಲಿ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಮೊದಲ ಆರೋಪಿ ಎಂದು ಹೆಸರಿಸಲಾಗಿತ್ತು. ಅವರ ವಿರುದ್ಧದ ವಿಚಾರಣೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಆ ಆದೇಶದ ಆಧಾರದಲ್ಲೇ ತನಿಖಾಧಿಕಾರಿ ‘ಬಿ’ ವರದಿ ಸಲ್ಲಿಸಿದ್ದರು.</p>.<p>‘ತನಿಖಾಧಿಕಾರಿ ಪ್ರಕರಣದ ಪ್ರಾಥಮಿಕ ಅಂಶಗಳ ಬಗ್ಗೆಯೇ ತನಿಖೆ ನಡೆಸಿಲ್ಲ. ಈ ಪ್ರಕರಣಕ್ಕೆ ಸಂಬಂಧಪಡದ ವಿಚಾರಗಳ ಆಧಾರದಲ್ಲಿ ನಿರ್ಧಾರಕ್ಕೆ ಬರಲಾಗಿದೆ. ಆರೋಪಿಯು ಅಧಿಕಾರ ದುರ್ಬಳಕೆ ಮಾಡಿದ್ದಾರೆಯೆ? ಡಿನೋಟಿಫಿಕೇಷನ್ ಮಾಡಲು ಯಾವುದಾದರೂ ಲಾಭ ಪಡೆದಿದ್ದಾರೆಯೆ? ಈ ತೀರ್ಮಾನವನ್ನು ಸಾರ್ವಜನಿಕ ಹಿತಾಸಕ್ತಿಗಾಗಿ ಕೈಗೊಂಡಿದ್ದರೆ ಎಂಬ ಪ್ರಶ್ನೆಗಳಿಗೆ ವರದಿಯಲ್ಲಿ ಉತ್ತರವೇ ಇಲ್ಲ’ ಎಂದು ನ್ಯಾಯಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>