ಕೋಲಾರ: 'ರಾಜ್ಯದಲ್ಲಿ ಭೀಕರ ಬರಗಾಲ ಸೇರಿದಂತೆ ಹಲವಾರು ಸಮಸ್ಯೆ ತಲೆದೋರಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಹಿತ ಮರೆತು ಕುಂಭಕರ್ಣ ನಿದ್ದೆಯಲ್ಲಿದೆ. ಬದುಕಿಯೂ ಸತ್ತಂತಿದೆ' ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಲಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಟೀಕಾ ಪ್ರಹಾರ ನಡೆಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯ ಸರ್ಕಾರವನ್ನು ಎಚ್ಚರಿಸಲು, ಹೋರಾಟ ರೂಪಿಸಲು ಕುರುಡುಮಲೆ ಗಣೇಶನಿಗೆ ಪೂಜೆ ಸಲ್ಲಿಸಿ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಂಡಿದ್ದೇವೆ. ಗಣೇಶ ಚತುರ್ಥಿ ಬಳಿಕ ಎಲ್ಲಾ ಮುಖಂಡರು ಎಲ್ಲಾ ಜಿಲ್ಲೆಗಳಿಗೆ ತೆರಳಲಿದ್ದಾರೆ' ಎಂದರು.