‘ಗಡಿ ಭಾಗದ ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿಕೇರಳದವರುವೈದ್ಯಕೀಯ, ಜೈವಿಕ ತ್ಯಾಜ್ಯ ಎಸೆಯುತ್ತಿದ್ದಾರೆ ಎಂಬ ವರದಿಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ವ್ಯಕ್ತಿಗತವಾಗಿ ಮತ್ತು ಯಾವುದೇ ಸಂಸ್ಥೆನಡೆಸುವ ರಹಸ್ಯ ಚಟುವಟಿಕೆ ಬಗ್ಗೆ ನಿಗಾವಹಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಇಲಾಖೆ ಮತ್ತು ಆಯಾ ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆಲೆ ಮನೆಗಳಲ್ಲಿ ಇಂಧನವಾಗಿ ಇಂಥ ತ್ಯಾಜ್ಯವನ್ನು ಇಂಧನವಾಗಿ ಬಳಸದಂತೆಯೂ ಸೂಚನೆ ನೀಡಿದ್ದೇನೆ’ ಎಂದು ಯಡಿಯೂರಪ್ಪ ಹೇಳಿದ್ದಾರೆ. ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವುದಾಗಿಯೂ ಅವರು ಭರವಸೆ ನೀಡಿದ್ದಾರೆ.