<p>ಬೆಂಗಳೂರು: ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಬೇಸರವನ್ನು ಶಮನ ಮಾಡಿರುವುದರಿಂದ ಕೊಪ್ಪಳದಲ್ಲಿ ಗುರುವಾರ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.</p>.<p>ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿವಿಧ ಜಿಲ್ಲಾ ಬಿಜೆಪಿ ಕಚೇರಿಗಳ ಉದ್ಘಾಟನೆಯನ್ನು ವರ್ಚುವಲ್ ಆಗಿ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮೊದಲು ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿರಲಿಲ್ಲ. ಅಲ್ಲದೇ, ಜನಸಂಕಲ್ಪ ಯಾತ್ರೆಗೆ ಕರೆಯದೇ ನಿರ್ಲಕ್ಷಿಸುತ್ತಿದೆ ಎಂದು ಯಡಿಯೂರಪ್ಪ ಅವರು ಮುನಿಸಿಕೊಂಡಿದ್ದರು.</p>.<p>ಈ ವಿಷಯ ಬಹಿರಂಗವಾಗುತ್ತಿದ್ದಂತೆ ಅವರ ಮನವೊಲಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರಿಗೆ ವರಿಷ್ಠರು ಸೂಚಿಸಿದರು.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರವಿಕುಮಾರ್ ಕಾರ್ಯಕ್ರಮ ಆಹ್ವಾನಿಸಿ, ಬೇಸರ ಶಮನ ಮಾಡುವ ಪ್ರಯತ್ನ ನಡೆಸಿದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಬೇಸರವನ್ನು ಶಮನ ಮಾಡಿರುವುದರಿಂದ ಕೊಪ್ಪಳದಲ್ಲಿ ಗುರುವಾರ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.</p>.<p>ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿವಿಧ ಜಿಲ್ಲಾ ಬಿಜೆಪಿ ಕಚೇರಿಗಳ ಉದ್ಘಾಟನೆಯನ್ನು ವರ್ಚುವಲ್ ಆಗಿ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮೊದಲು ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿರಲಿಲ್ಲ. ಅಲ್ಲದೇ, ಜನಸಂಕಲ್ಪ ಯಾತ್ರೆಗೆ ಕರೆಯದೇ ನಿರ್ಲಕ್ಷಿಸುತ್ತಿದೆ ಎಂದು ಯಡಿಯೂರಪ್ಪ ಅವರು ಮುನಿಸಿಕೊಂಡಿದ್ದರು.</p>.<p>ಈ ವಿಷಯ ಬಹಿರಂಗವಾಗುತ್ತಿದ್ದಂತೆ ಅವರ ಮನವೊಲಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರಿಗೆ ವರಿಷ್ಠರು ಸೂಚಿಸಿದರು.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರವಿಕುಮಾರ್ ಕಾರ್ಯಕ್ರಮ ಆಹ್ವಾನಿಸಿ, ಬೇಸರ ಶಮನ ಮಾಡುವ ಪ್ರಯತ್ನ ನಡೆಸಿದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>