<p><strong>ಬೆಂಗಳೂರು:</strong> ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗುವುದಿಲ್ಲ, ರಾಜ್ಯಕ್ಕೆ ಇದೇ 17 ಮತ್ತು 18ರಂದು ಭೇಟಿ ನೀಡುವ ಸಂದರ್ಭದಲ್ಲಿ ಚರ್ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.</p>.<p>ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಮಂಗಳೂರು ಗಲಭೆ ಕುರಿತ ಸಿ.ಡಿ. ಕಟ್ ಆ್ಯಂಡ್ ಪೇಸ್ಟ್ ಮಾಡಿದ ವಿಡಿಯೊ, ಇದರ ಬಗ್ಗೆ ಪ್ರತಿಕ್ರಿಯೆ ನೀಡುವುದರಲ್ಲಿ ಅರ್ಥವಿಲ್ಲ ಎಂದರು.</p>.<p><strong>ಸಂಪುಟ ವಿಸ್ತರಣೆಗೆ ಮುನ್ನ ಕೆಲವರಿಗೆ ಕೊಕ್ ?</strong></p>.<p>ಉಪ ಚುನಾವಣೆಯಲ್ಲಿ ಗೆದ್ದ ಎಲ್ಲ ಶಾಸಕರಿಗೂ (ಕಾಂಗ್ರೆಸ್– ಜೆಡಿಎಸ್ನಿಂದ ಬಂದವರು) ಮಂತ್ರಿ ಸ್ಥಾನ ನೀಡುವುದರ ಜತೆಗೆ ಪಕ್ಷದ ಪ್ರಭಾವಿ ಶಾಸಕರಿಗೂ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕಾಗಿದೆ. ಈ ಕಾರಣಕ್ಕೆ ಇಬ್ಬರು ಅಥವಾ ಮೂವರು ಸಚಿವರ ರಾಜೀನಾಮೆ ಪಡೆದರೆ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪಕ್ಷದ ಮೂಲ ಶಾಸಕರಿಗೆ ಹೆಚ್ಚಿನ ಅವಕಾಶ ಸಿಗುತ್ತದೆ ಎಂಬುದು ಯಡಿಯೂರಪ್ಪ ಲೆಕ್ಕಾಚಾರ ಎಂದು ಮೂಲಗಳು ತಿಳಿಸಿವೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/columns/gathibimba/gati-bimba-colom-696896.html" target="_blank">ಮುಖ್ಯಮಂತ್ರಿಯವರೇ, ಇದ್ಯಾವ ಸಂಸ್ಕೃತಿ?</a></p>.<p>ಯಾವ ಸಚಿವರಿಂದ ರಾಜೀನಾಮೆ ಪಡೆಯಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದ್ದು, ಪಕ್ಷದ ನಿಷ್ಠಾವಂತ ಮತ್ತು ಸಚಿವ ಸ್ಥಾನ ಕಳೆದುಕೊಂಡ ಕಾರಣಕ್ಕೆ ಮುನಿಸಿಕೊಂಡು ಗದ್ದಲ ಎಬ್ಬಿಸದವರಿಂದ ರಾಜೀನಾಮೆ ಪಡೆಯಬಹುದು ಎನ್ನಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗುವುದಿಲ್ಲ, ರಾಜ್ಯಕ್ಕೆ ಇದೇ 17 ಮತ್ತು 18ರಂದು ಭೇಟಿ ನೀಡುವ ಸಂದರ್ಭದಲ್ಲಿ ಚರ್ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.</p>.<p>ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಮಂಗಳೂರು ಗಲಭೆ ಕುರಿತ ಸಿ.ಡಿ. ಕಟ್ ಆ್ಯಂಡ್ ಪೇಸ್ಟ್ ಮಾಡಿದ ವಿಡಿಯೊ, ಇದರ ಬಗ್ಗೆ ಪ್ರತಿಕ್ರಿಯೆ ನೀಡುವುದರಲ್ಲಿ ಅರ್ಥವಿಲ್ಲ ಎಂದರು.</p>.<p><strong>ಸಂಪುಟ ವಿಸ್ತರಣೆಗೆ ಮುನ್ನ ಕೆಲವರಿಗೆ ಕೊಕ್ ?</strong></p>.<p>ಉಪ ಚುನಾವಣೆಯಲ್ಲಿ ಗೆದ್ದ ಎಲ್ಲ ಶಾಸಕರಿಗೂ (ಕಾಂಗ್ರೆಸ್– ಜೆಡಿಎಸ್ನಿಂದ ಬಂದವರು) ಮಂತ್ರಿ ಸ್ಥಾನ ನೀಡುವುದರ ಜತೆಗೆ ಪಕ್ಷದ ಪ್ರಭಾವಿ ಶಾಸಕರಿಗೂ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕಾಗಿದೆ. ಈ ಕಾರಣಕ್ಕೆ ಇಬ್ಬರು ಅಥವಾ ಮೂವರು ಸಚಿವರ ರಾಜೀನಾಮೆ ಪಡೆದರೆ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪಕ್ಷದ ಮೂಲ ಶಾಸಕರಿಗೆ ಹೆಚ್ಚಿನ ಅವಕಾಶ ಸಿಗುತ್ತದೆ ಎಂಬುದು ಯಡಿಯೂರಪ್ಪ ಲೆಕ್ಕಾಚಾರ ಎಂದು ಮೂಲಗಳು ತಿಳಿಸಿವೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/columns/gathibimba/gati-bimba-colom-696896.html" target="_blank">ಮುಖ್ಯಮಂತ್ರಿಯವರೇ, ಇದ್ಯಾವ ಸಂಸ್ಕೃತಿ?</a></p>.<p>ಯಾವ ಸಚಿವರಿಂದ ರಾಜೀನಾಮೆ ಪಡೆಯಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದ್ದು, ಪಕ್ಷದ ನಿಷ್ಠಾವಂತ ಮತ್ತು ಸಚಿವ ಸ್ಥಾನ ಕಳೆದುಕೊಂಡ ಕಾರಣಕ್ಕೆ ಮುನಿಸಿಕೊಂಡು ಗದ್ದಲ ಎಬ್ಬಿಸದವರಿಂದ ರಾಜೀನಾಮೆ ಪಡೆಯಬಹುದು ಎನ್ನಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>