‘ಯಡಿಯೂರಪ್ಪ ಸರ್ಕಾರ ಅಭಿವೃದ್ಧಿಪರ, ಜನಪರ ಕೆಲಸಗಳನ್ನು ಮಾಡುತ್ತಿದೆ. ರಾಜ್ಯಕ್ಕೆ ಪ್ರಧಾನಿ ಮೋದಿಯವರ ಹಲವು ಯೋಜನೆಗಳಿವೆ. ಸರ್ಕಾರ ಪತನವಾಗಲಿದೆ ಎಂಬ ಕಾಂಗ್ರೆಸ್ ಕನಸು ನನಸಾಗದು’ ಎಂದ ಶಾ, ‘ಮೂಲಸೌಲಭ್ಯ, ಕೃಷಿ ಸೇರಿದಂತೆ ಎಲ್ಲ ವಲಯಗಳಲ್ಲಿ ರಾಜ್ಯ ಸರ್ಕಾರಕ್ಕೆ ನೆರವು ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ’ ಎಂದರು.