ಆತ್ಮಹತ್ಯೆ ಮಾಡಿಕೊಂಡಿದ್ದ ತಾಲ್ಲೂಕಿನ ವಡ್ಡನಹೊಸಹಳ್ಳಿಯ ಚಿಕ್ಕಶೆಟ್ಟಿ ಕುಟುಂಬಕ್ಕೆ ಚುನಾವಣಾ ಪ್ರಚಾರದ ವೇಳೆ ಯಡಿಯೂರಪ್ಪ ₹ 1ಲಕ್ಷ ಪರಿಹಾರ ನೀಡಿದ್ದರು. ಇನ್ನೊಂದು ಪ್ರಕರಣದಲ್ಲಿ,ಭೀಮನಬೀಡು ಗ್ರಾಮದಲ್ಲಿ ಬಿಜೆಪಿಗೆ ಮತಹಾಕುವಂತೆ ಪ್ರಮಾಣ ಮಾಡಿಸಿದ್ದ ಆರೋಪ ಅವರ ಮೇಲಿತ್ತು.ಗುಂಡ್ಲುಪೇಟೆ ಠಾಣೆಯಲ್ಲಿ ಎರಡೂ ಪ್ರಕರಣಗಳಿಗೆ ಸಂಬಂಧಿಸಿದ ಎಫ್ಐಆರ್ ದಾಖಲಾಗಿದ್ದವು. ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಯಡಿಯೂರಪ್ಪ ಕೋರ್ಟ್ನಲ್ಲಿ ಹಾಜರಿದ್ದರು.