<p><strong>ಮೈಸೂರು:</strong> ‘ನಾನು ಕಾಂಗ್ರೆಸಿಗನಾಗಿದ್ದರೂ ಹೇಳುತ್ತಿದ್ದೇನೆ, ಬಿ.ಎಸ್.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು’ ಎಂದು ಉದ್ಯಮಿ ಅಶೋಕ್ ಖೇಣಿ ಇಲ್ಲಿ ಭಾನುವಾರ ಹೇಳಿದರು.</p>.<p>ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಮಟ್ಟದ ಸಮ್ಮೇಳನದಲ್ಲಿ ಮಾತನಾಡಿದರು.</p>.<p>'ಕೆಲಸ ಮಾಡುವವರಿಗೆ ಜನ ಅಧಿಕಾರ ನೀಡಬೇಕು. ಇಲ್ಲವಾದಲ್ಲಿ 5 ವರ್ಷ ಮಾಡಿದ ತಪ್ಪನ್ನು ಅನುಭವಿಸಬೇಕಾಗುವುದು. ಯಡಿಯೂರಪ್ಪ ಒಳ್ಳೆಯ ಕೆಲಸಗಾರ. ಹೀಗಾಗಿ, ಪಕ್ಷ ಮರೆತು ಅವರನ್ನು ಬೆಂಬಲಿಸುತ್ತೇನೆ' ಎಂದು ಅವರು ಹೇಳಿದರು.</p>.<p>‘ನನ್ನ ಜಾತಿಯ ಕಾರಣದಿಂದಾಗಿ ನೈಸ್ ರಸ್ತೆಯನ್ನು ಇನ್ನೂ ಪೂರ್ಣಗೊಳಿಸಲಾಗಿಲ್ಲ. ನನ್ನ ಹೆಸರು ಅಶೋಕ್ ಖೇಣಿ ಬದಲು ಅಶೋಕ್ ಗೌಡ ಆಗಿದ್ದರೆ ಕನ್ಯಾಕುಮಾರಿಯವರೆಗೂ ರಸ್ತೆಯನ್ನು ವಿಸ್ತರಿಸುತ್ತಿದ್ದೆ’ ಎಂದು ಹೇಳಿದರು.</p>.<p>ನಗುವುದನ್ನು ರೂಢಿಸಿಕೊಳ್ಳಲಿ: ‘ಯಡಿಯೂರಪ್ಪ ಯಾವಾಗಲೂ ಚಿಂತೆ ಮಾಡುತ್ತಿರುವಂತೆ ಕಾಣುತ್ತಾರೆ. ಸ್ವಲ್ಪ ನಗುವುದನ್ನು ರೂಢಿಸಿಕೊಳ್ಳಬೇಕು. ನೀವು ನಗುತ್ತಿದ್ದರೆ ನಮಗೆ ಶಕ್ತಿ ಬಂದಂತೆ ಆಗುವುದು’ ಎಂದು ಐಎಎಸ್ ನಿವೃತ್ತ ಅಧಿಕಾರಿ ಡಾ.ಸಿ.ಸೋಮಶೇಖರ್ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಾನು ಕಾಂಗ್ರೆಸಿಗನಾಗಿದ್ದರೂ ಹೇಳುತ್ತಿದ್ದೇನೆ, ಬಿ.ಎಸ್.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು’ ಎಂದು ಉದ್ಯಮಿ ಅಶೋಕ್ ಖೇಣಿ ಇಲ್ಲಿ ಭಾನುವಾರ ಹೇಳಿದರು.</p>.<p>ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಮಟ್ಟದ ಸಮ್ಮೇಳನದಲ್ಲಿ ಮಾತನಾಡಿದರು.</p>.<p>'ಕೆಲಸ ಮಾಡುವವರಿಗೆ ಜನ ಅಧಿಕಾರ ನೀಡಬೇಕು. ಇಲ್ಲವಾದಲ್ಲಿ 5 ವರ್ಷ ಮಾಡಿದ ತಪ್ಪನ್ನು ಅನುಭವಿಸಬೇಕಾಗುವುದು. ಯಡಿಯೂರಪ್ಪ ಒಳ್ಳೆಯ ಕೆಲಸಗಾರ. ಹೀಗಾಗಿ, ಪಕ್ಷ ಮರೆತು ಅವರನ್ನು ಬೆಂಬಲಿಸುತ್ತೇನೆ' ಎಂದು ಅವರು ಹೇಳಿದರು.</p>.<p>‘ನನ್ನ ಜಾತಿಯ ಕಾರಣದಿಂದಾಗಿ ನೈಸ್ ರಸ್ತೆಯನ್ನು ಇನ್ನೂ ಪೂರ್ಣಗೊಳಿಸಲಾಗಿಲ್ಲ. ನನ್ನ ಹೆಸರು ಅಶೋಕ್ ಖೇಣಿ ಬದಲು ಅಶೋಕ್ ಗೌಡ ಆಗಿದ್ದರೆ ಕನ್ಯಾಕುಮಾರಿಯವರೆಗೂ ರಸ್ತೆಯನ್ನು ವಿಸ್ತರಿಸುತ್ತಿದ್ದೆ’ ಎಂದು ಹೇಳಿದರು.</p>.<p>ನಗುವುದನ್ನು ರೂಢಿಸಿಕೊಳ್ಳಲಿ: ‘ಯಡಿಯೂರಪ್ಪ ಯಾವಾಗಲೂ ಚಿಂತೆ ಮಾಡುತ್ತಿರುವಂತೆ ಕಾಣುತ್ತಾರೆ. ಸ್ವಲ್ಪ ನಗುವುದನ್ನು ರೂಢಿಸಿಕೊಳ್ಳಬೇಕು. ನೀವು ನಗುತ್ತಿದ್ದರೆ ನಮಗೆ ಶಕ್ತಿ ಬಂದಂತೆ ಆಗುವುದು’ ಎಂದು ಐಎಎಸ್ ನಿವೃತ್ತ ಅಧಿಕಾರಿ ಡಾ.ಸಿ.ಸೋಮಶೇಖರ್ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>