<p><strong>ತುಮಕೂರು:</strong> ಹೇಮಾವತಿ ನಾಲಾ ವೀಕ್ಷಣೆ ಕೈಗೊಂಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನೆಲ್ಲ ರದ್ದು ಮಾಡಿ ಬೆಂಗಳೂರಿಗೆ ತೆರಳಿದರು.</p>.<p>ಕೆರೆಗಳಿಗೆ ನೀರು ತುಂಬುವ ನೀರಾವರಿ ಯೋಜನೆ ಕುರಿತ ಪೂರ್ವಭಾವಿ ಸಭೆ ಸಂಜೆ 5 ಗಂಟೆಗೆ ಸಿದ್ಧಗಂಗಾಮಠದಲ್ಲಿ ನಡೆಯಬೇಕಿತ್ತು. ಇದರಲ್ಲಿ ಯಡಿಯೂರಪ್ಪ ಅವರೂ ಭಾಗವಹಿಸಬೇಕಿತ್ತು.ಆದರೆ, ಅದನ್ನು ರದ್ದುಪಡಿ ಅವರು ಬೆಂಗಳೂರಿಗೆ ಹೊರಟರು. ಮಾರ್ಗ ಮಧ್ಯೆಎಡೆಯೂರು ಸಿದ್ಧಲಿಂಗೇಶ್ವರ ಮಠಕ್ಕೆ ಭೇಟಿ ನೀಡಿದ ಬಿಎಸ್ವೈ ವಿಶೇಷ ಪೂಜೆಯನ್ನೂ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ಅವರು ಬಿಜೆಪಿಯ 105 ಶಾಸಕರು ಒಟ್ಟಾಗಿದ್ದೇವೆ. ಸರ್ಕಾದ ಬೆಳವಣಿಗೆಗಳನ್ನು ಗಮನಿಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.</p>.<p>ರಾಜ್ಯದಲ್ಲಿ ಮಳೆ, ಬೆಳೆಗೆ ಪ್ರಾರ್ಥಿಸಿದ್ದೇನೆ. ತುಮಕೂರು ಜಿಲ್ಲೆಯಲ್ಲಿ ಹೇಮಾವತಿ ನಾಲಾ ವೀಕ್ಷಣೆ ಮಾಡಿದ್ದೇನೆ ಎಂದರು.<br />ದೇವೇಗೌಡರು ದಲಿತರನ್ನು ಮುಖ್ಯಮಂತ್ರಿ ಮಾಡುವ ಚಿಂತನೆ ಮಾಡಿದ್ದಾರಂತಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಬೇರೆ ಪಕ್ಷದವರ ಬಗ್ಗೆ ನಾನೇನು ಮಾತನಾಡಲ್ಲ ಎಂದರು.</p>.<p>ಸಂಜೆ ಬೆಂಗಳೂರಿನಲ್ಲಿ ಪಕ್ಷದ ಮುಖಂಡರೊಂದಿಗೆ ರಾಜಕೀಯ ಬೆಳವಣಿಗೆಗಳ ಕುರಿತು ಯಡಿಯೂರಪ್ಪ ಅವರು ಚರ್ಚೆ ನಡೆಸಲಿದ್ದಾರೆ. ಇದೇ ಕಾರಣಕ್ಕೇ ಅವರು ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ ಎನ್ನಲಾಗಿದೆ.</p>.<p>ಇದಕ್ಕೂ ಮೊದಲು ಅವರು ಬಾಗೂರು ನವಿಲೆ ಬಳಿ ಹೇಮಾವತಿ ನಾಲೆ ವೀಕ್ಷಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಹೇಮಾವತಿ ನಾಲಾ ವೀಕ್ಷಣೆ ಕೈಗೊಂಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನೆಲ್ಲ ರದ್ದು ಮಾಡಿ ಬೆಂಗಳೂರಿಗೆ ತೆರಳಿದರು.</p>.<p>ಕೆರೆಗಳಿಗೆ ನೀರು ತುಂಬುವ ನೀರಾವರಿ ಯೋಜನೆ ಕುರಿತ ಪೂರ್ವಭಾವಿ ಸಭೆ ಸಂಜೆ 5 ಗಂಟೆಗೆ ಸಿದ್ಧಗಂಗಾಮಠದಲ್ಲಿ ನಡೆಯಬೇಕಿತ್ತು. ಇದರಲ್ಲಿ ಯಡಿಯೂರಪ್ಪ ಅವರೂ ಭಾಗವಹಿಸಬೇಕಿತ್ತು.ಆದರೆ, ಅದನ್ನು ರದ್ದುಪಡಿ ಅವರು ಬೆಂಗಳೂರಿಗೆ ಹೊರಟರು. ಮಾರ್ಗ ಮಧ್ಯೆಎಡೆಯೂರು ಸಿದ್ಧಲಿಂಗೇಶ್ವರ ಮಠಕ್ಕೆ ಭೇಟಿ ನೀಡಿದ ಬಿಎಸ್ವೈ ವಿಶೇಷ ಪೂಜೆಯನ್ನೂ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ಅವರು ಬಿಜೆಪಿಯ 105 ಶಾಸಕರು ಒಟ್ಟಾಗಿದ್ದೇವೆ. ಸರ್ಕಾದ ಬೆಳವಣಿಗೆಗಳನ್ನು ಗಮನಿಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.</p>.<p>ರಾಜ್ಯದಲ್ಲಿ ಮಳೆ, ಬೆಳೆಗೆ ಪ್ರಾರ್ಥಿಸಿದ್ದೇನೆ. ತುಮಕೂರು ಜಿಲ್ಲೆಯಲ್ಲಿ ಹೇಮಾವತಿ ನಾಲಾ ವೀಕ್ಷಣೆ ಮಾಡಿದ್ದೇನೆ ಎಂದರು.<br />ದೇವೇಗೌಡರು ದಲಿತರನ್ನು ಮುಖ್ಯಮಂತ್ರಿ ಮಾಡುವ ಚಿಂತನೆ ಮಾಡಿದ್ದಾರಂತಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಬೇರೆ ಪಕ್ಷದವರ ಬಗ್ಗೆ ನಾನೇನು ಮಾತನಾಡಲ್ಲ ಎಂದರು.</p>.<p>ಸಂಜೆ ಬೆಂಗಳೂರಿನಲ್ಲಿ ಪಕ್ಷದ ಮುಖಂಡರೊಂದಿಗೆ ರಾಜಕೀಯ ಬೆಳವಣಿಗೆಗಳ ಕುರಿತು ಯಡಿಯೂರಪ್ಪ ಅವರು ಚರ್ಚೆ ನಡೆಸಲಿದ್ದಾರೆ. ಇದೇ ಕಾರಣಕ್ಕೇ ಅವರು ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ ಎನ್ನಲಾಗಿದೆ.</p>.<p>ಇದಕ್ಕೂ ಮೊದಲು ಅವರು ಬಾಗೂರು ನವಿಲೆ ಬಳಿ ಹೇಮಾವತಿ ನಾಲೆ ವೀಕ್ಷಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>