<p><strong>ನವದೆಹಲಿ:</strong> ಭಾರಿ ಪ್ರವಾಹದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೇಂದ್ರದ ನೆರವಿನ ಅಗತ್ಯವಿದೆ. ಶೀಘ್ರವೇ ₹ 5,000 ಕೋಟಿ ಮಧ್ಯಂತರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಶನಿವಾರ ಸಂಜೆ ಶಾ ಅವರನ್ನು ಭೇಟಿ ಮಾಡಿ ವಿವರಣೆ ನೀಡಿ, ಪ್ರವಾಹದಿಂದಾಗಿ ರಾಜ್ಯದ 18 ಜಿಲ್ಲೆಗಳ 10ಕ್ಕೂ ಹೆಚ್ಚು ನಗರಗಳು, 20ಕ್ಕೂ ಅಧಿಕ ಪಟ್ಟಣಗಳು, 150 ಗ್ರಾಮಗಳು ಜಲಾವೃತವಾಗಿ ಅಂದಾಜು ₹ 45,000 ಕೋಟಿಗೂ ಅಧಿಕ ಹಾನಿ ಸಂಭವಿಸಿದೆ ಎಂದು ಹೇಳಿದರು.</p>.<p>ನದಿಗಳು ಉಕ್ಕಿ ಹರಿದ ಪರಿಣಾಮ ನೀರು ನುಗ್ಗಿದ್ದರಿಂದ ಲಕ್ಷಾಂತರ ಮನೆಗಳು ನೆಲಸಮವಾಗಿದ್ದು, ಬಹುತೇಕ ಗ್ರಾಮಗಳನ್ನು ಸ್ಥಳಾಂತರಿಸುವ ಅಗತ್ಯವಿದೆ. ಪರಿಸ್ಥಿತಿಯ ಪರಿಶೀಲನೆಗಾಗಿ ಕೇಂದ್ರದ ಅಧ್ಯಯನ ತಂಡವನ್ನು ಆದಷ್ಟು ಶೀಘ್ರ ಕಳುಹಿಸಿಕೊಡಬೇಕು. ಅದಕ್ಕೆ ಮುಂಚಿತವಾಗಿ ಮಧ್ಯಂತರ ಪರಿಹಾರ ಮಂಜೂರು ಮಾಡಬೇಕು ಎಂದು ಕೋರಿದರು.</p>.<p>‘ಕೇಂದ್ರ ಸರ್ಕಾರ ಬಿಡಿಗಾಸನ್ನೂ ಪರಿಹಾರವಾಗಿ ಬಿಡುಗಡೆ ಮಾಡದೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸುತ್ತಿದ್ದಾರೆ. ಆಧಾರರಹಿತ ಆರೋಪದಲ್ಲಿ ನಿರತರಾಗಿರುವ ಕಾಂಗ್ರೆಸ್ ಮುಖಂಡರು ತಲೆತಿರುಕರು’ ಎಂದು ಯಡಿಯೂರಪ್ಪ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರಿ ಪ್ರವಾಹದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೇಂದ್ರದ ನೆರವಿನ ಅಗತ್ಯವಿದೆ. ಶೀಘ್ರವೇ ₹ 5,000 ಕೋಟಿ ಮಧ್ಯಂತರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಶನಿವಾರ ಸಂಜೆ ಶಾ ಅವರನ್ನು ಭೇಟಿ ಮಾಡಿ ವಿವರಣೆ ನೀಡಿ, ಪ್ರವಾಹದಿಂದಾಗಿ ರಾಜ್ಯದ 18 ಜಿಲ್ಲೆಗಳ 10ಕ್ಕೂ ಹೆಚ್ಚು ನಗರಗಳು, 20ಕ್ಕೂ ಅಧಿಕ ಪಟ್ಟಣಗಳು, 150 ಗ್ರಾಮಗಳು ಜಲಾವೃತವಾಗಿ ಅಂದಾಜು ₹ 45,000 ಕೋಟಿಗೂ ಅಧಿಕ ಹಾನಿ ಸಂಭವಿಸಿದೆ ಎಂದು ಹೇಳಿದರು.</p>.<p>ನದಿಗಳು ಉಕ್ಕಿ ಹರಿದ ಪರಿಣಾಮ ನೀರು ನುಗ್ಗಿದ್ದರಿಂದ ಲಕ್ಷಾಂತರ ಮನೆಗಳು ನೆಲಸಮವಾಗಿದ್ದು, ಬಹುತೇಕ ಗ್ರಾಮಗಳನ್ನು ಸ್ಥಳಾಂತರಿಸುವ ಅಗತ್ಯವಿದೆ. ಪರಿಸ್ಥಿತಿಯ ಪರಿಶೀಲನೆಗಾಗಿ ಕೇಂದ್ರದ ಅಧ್ಯಯನ ತಂಡವನ್ನು ಆದಷ್ಟು ಶೀಘ್ರ ಕಳುಹಿಸಿಕೊಡಬೇಕು. ಅದಕ್ಕೆ ಮುಂಚಿತವಾಗಿ ಮಧ್ಯಂತರ ಪರಿಹಾರ ಮಂಜೂರು ಮಾಡಬೇಕು ಎಂದು ಕೋರಿದರು.</p>.<p>‘ಕೇಂದ್ರ ಸರ್ಕಾರ ಬಿಡಿಗಾಸನ್ನೂ ಪರಿಹಾರವಾಗಿ ಬಿಡುಗಡೆ ಮಾಡದೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸುತ್ತಿದ್ದಾರೆ. ಆಧಾರರಹಿತ ಆರೋಪದಲ್ಲಿ ನಿರತರಾಗಿರುವ ಕಾಂಗ್ರೆಸ್ ಮುಖಂಡರು ತಲೆತಿರುಕರು’ ಎಂದು ಯಡಿಯೂರಪ್ಪ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>