ನಗರದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸೋಮವಾರ ಹಮ್ಮಿಕೊಂಡಿದ್ದ ‘ವಾಣಿಜ್ಯ ಸ್ಪಂದನ’ ಕಾರ್ಯಕ್ರಮದಲ್ಲಿ ಮಾತನಾಡಿ, ‘ಜಿಂದಾಲ್ಗೆ ಭೂಮಿ ನೀಡಲು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಒಪ್ಪಂದ ಮಾಡಿಕೊಳ್ಳಲಾಗಿದೆ. ಅವರೇ ಅದಕ್ಕೆ ಸಹಿ ಹಾಕಿದ್ದು, ನಿಯಮದಂತೆ ಹತ್ತು ವರ್ಷಗಳ ನಂತರ ಭೂಮಿ ನೀಡಬೇಕಿದೆ. ಕಾನೂನಿನಂತೆ ನಿರ್ಧಾರ ಕೈಗೊಳ್ಳಲಾಗಿದೆ. ಈ ವಿಷಯದಲ್ಲಿ ಚರ್ಚೆಗೆ ಸಿದ್ಧನಿದ್ದೇನೆ’ ಎಂದರು.