<p><strong>ಹುಬ್ಬಳ್ಳಿ: </strong>ಸ್ಪೀಕರ್ ಬಗ್ಗೆ ಏಕ ವಚನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಬಹಿರಂಗವಾಗಿ ಕ್ಷಮೆಯಾಚಿಸಬೇಕು, ಇಲ್ಲವಾದರೆ ಸದನದಲ್ಲಿ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸ್ಪೀಕರ್ ಬಗ್ಗೆ ಹಗುರವಾಗಿ ಮಾತನಾಡಿರುವುದು ಅವರಿಗೆ ಶೋಭೆ ತರುವುದಿಲ್ಲ. ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಇಲ್ಲವಾದರೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.</p>.<p>ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಬಗ್ಗೆಯೂ ಸಿದ್ದರಾಮಯ್ಯ ಮನಬಂದತೆ ಮಾತನಾಡಿರುವುದು ಸರಿಯಲ್ಲ ಎಂದರು.</p>.<p class="Subhead"><strong>ಸಿದ್ದರಾಮಯ್ಯ ತಿರುಗೇಟು:</strong>ಹಕ್ಕುಚ್ಯುತಿ ಮಾಡುವುದಾಗಿ ಹೇಳಿರುವ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ನಾನೇಕೆ ಕ್ಷಮೆಯಾಚಿಸಬೇಕು? ಯಡಿಯೂರಪ್ಪ ಹೇಳಿದ ತಕ್ಷಣ ಕ್ಷಮೆ ಕೇಳಬೇಕಾ? ಎಂದು ತಿರುಗೇಟು ನೀಡಿದರು.</p>.<p>‘ಸ್ಪೀಕರ್ ಬಗ್ಗೆ ನಾನು ಅವಹೇಳನಕಾರಿಯಾಗಿ ಮಾತನಾಡಿಲ್ಲ. ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂದು ಹೇಳಿದ್ದೇನೆ. ನನ್ನ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಲಿ ನೋಡೋಣ’ ಎಂದರು.</p>.<p>‘40 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ಯಾರಿಗೆ ಹೇಗೆ ಮಾತನಾಡಬೇಕು ಎಂಬುದು ಗೊತ್ತಿದೆ. ಈ ಬಗ್ಗೆ ಯಡಿಯೂರಪ್ಪ ಅವರಿಂದ ಪಾಠ ಕಲಿಯುವ ಅಗತ್ಯ ಇಲ್ಲ’ ಎಂದರು.</p>.<p class="Subhead"><strong>ಪರಿಹಾರ ನೀಡುವಲ್ಲಿ ತಾರತಮ್ಯ:</strong>ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ಕೆಲವರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಅನೇಕರ ಹೆಸರನ್ನು ಕೈಬಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.</p>.<p>ಮಳೆ, ಪ್ರವಾಹ ಸಂದರ್ಭದಲ್ಲಿ ಬಿದ್ದುಹೋಗಿರುವ ಮನೆ, ಅಂಗಡಿಗಳಿಗೆ ಪರಿಹಾರ ನೀಡಿಲ್ಲ. ಬೆಳೆ ಪರಿಹಾರ ನೀಡಿಲ್ಲ. ಶಾಲೆಗಳು ಇನ್ನೂ ದುರಸ್ತಿ ಮಾಡಿಲ್ಲ. ಮಕ್ಕಳು ಸಮುದಾಯ ಭವನ, ದೇವಸ್ಥಾನಗಳಲ್ಲಿ ಪಾಠ ಕಲಿಯುತ್ತಿದ್ದಾರೆ ಎಂದರು.</p>.<p>ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ. ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಬಂದ ತಕ್ಷಣ ಹೆಸರು ಪ್ರಕಟಿಸಲಾಗುವುದು ಎಂದರು.</p>.<p><strong>ಒಂದೇ ವಿಮಾನದಲ್ಲಿ ಪ್ರಯಾಣ</strong><br />ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಹುಬ್ಬಳ್ಳಿಗೆ ಒಂದೇ ವಿಮಾನದಲ್ಲಿ ಬಂದು, ಸಂಜೆ ಕೂಡ ಒಂದೇ ವಿಮಾನದಲ್ಲಿ ವಾಪಸಾದರು.</p>.<p>ಇವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದ ಆವರಣದಲ್ಲಿ ಬಿಜೆಪಿ, ಕಾಂಗ್ರೆಸ್ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಪಾಲಿಕೆ ಮಾಜಿ ಸದಸ್ಯ ಬಿಜೆಪಿಯ ಶಿವಾನಂದ ಮುತ್ತಣವರ, ಯಡಿಯೂರಪ್ಪ ಅವರಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿದರೆ, ಸಿದ್ದರಾಮಯ್ಯ ಅವರಿಗೆ ಕಂಬಳಿ ಹೊದಿಸಿ ಬರಮಾಡಿಕೊಂಡರು.</p>.<p><strong>ಉಡಾಫೆ ಮಾತು ಬೇಡ: ಸೋಮಣ್ಣ<br />ಮೈಸೂರು:</strong> ‘ಸಿದ್ದರಾಮಯ್ಯ, ನಾನು ಏಕವಚನದಲ್ಲಿ ಮಾತನಾಡುವುದು ರೂಢಿ. ಆದರೆ ಸಭಾಧ್ಯಕ್ಷರ ಬಗ್ಗೆ ಉಡಾಫೆಯಿಂದ ಮಾತನಾಡಬಾರದು’ ಎಂದು ಸಚಿವ ಸೋಮಣ್ಣ ಶನಿವಾರ ಪಿರಿಯಾಪಟ್ಟಣದಲ್ಲಿ ಪ್ರತಿಕ್ರಿಯಿಸಿದರು.</p>.<p>‘ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರು. ಅನುಭವ ಇರುವವರು. ಯಾರನ್ನೋ ಮೆಚ್ಚಿಸಲಿಕ್ಕಾಗಿ ಬಾಯಿಗೆ ಬಂದಂತೆ ಮಾತನಾಡಬಾರದು. ಅವರೇ ಅರ್ಥ ಮಾಡಿಕೊಳ್ಳಬೇಕು’ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p><strong>ವ್ಯಾಕರಣ ತಿಳಿಯದ ಸಿದ್ದರಾಮಯ್ಯ: ಸುರೇಶಕುಮಾರ್ ಲೇವಡಿ<br />ಹಿರಿಯೂರು:</strong> ‘ಪ್ರಾಥಮಿಕ ಶಾಲೆಯಲ್ಲಿ ನಾವೆಲ್ಲ ಏಕವಚನ–ಬಹುವಚನದ ಬಗ್ಗೆ ಕಲಿತಿದ್ದೇವೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕವಚನ ಮಾತ್ರ ಕಲಿತಿದ್ದು, ಅವರಿಗೆ ಬಹುವಚನದ ಬಗ್ಗೆ ಗೊತ್ತೇ ಇಲ್ಲ’ ಎಂದು ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಲೇವಡಿ ಮಾಡಿದರು.</p>.<p>ತಾಲ್ಲೂಕಿನ ಹೊಸಯಳನಾಡು ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರುವಿಧಾನ ಸಭಾಧ್ಯಕ್ಷರ ವಿರುದ್ಧ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ ನಡೆಸಿರುವುದಕ್ಕೆ ಕಿಡಿಕಾರಿದರು. ‘ವ್ಯಾಕರಣದ ಮೇಷ್ಟ್ರು ಆಗಿರುವ ಸಿದ್ದರಾಮಯ್ಯಗೆ ಮಾತನಾಡುವ ಪರಿ ಗೊತ್ತಿಲ್ಲ’ ಎಂದು ಅಸಮಾಧಾನ ಹೊರಹಾಕಿದರು.</p>.<p>*<br />ಸಿದ್ದರಾಮಯ್ಯ, ನಾನು ಏಕವಚನದಲ್ಲಿ ಮಾತನಾಡುವುದು ರೂಢಿ. ಆದರೆ ಸಭಾಧ್ಯಕ್ಷರ ಬಗ್ಗೆ ಉಡಾಫೆಯಿಂದ ಬಾಯಿಗೆ ಬಂದಂತೆ ಮಾತನಾಡಬಾರದು.<br /><em><strong>-ವಿ. ಸೋಮಣ್ಣ, ವಸತಿ ಸಚಿವ</strong></em></p>.<p>*<br />ಪ್ರಾಥಮಿಕ ಶಾಲೆಯಲ್ಲಿ ನಾವೆಲ್ಲ ಏಕವಚನ–ಬಹುವಚನದ ಬಗ್ಗೆ ಕಲಿತಿದ್ದೇವೆ. ಆದರೆ, ಸಿದ್ದರಾಮಯ್ಯ ಏಕವಚನ ಮಾತ್ರ ಕಲಿತಿದ್ದು, ಅವರಿಗೆ ಬಹುವಚನದ ಬಗ್ಗೆ ಗೊತ್ತೇ ಇಲ್ಲ.<br /><em><strong>-ಎಸ್.ಸುರೇಶಕುಮಾರ್, ಶಿಕ್ಷಣ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಸ್ಪೀಕರ್ ಬಗ್ಗೆ ಏಕ ವಚನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಬಹಿರಂಗವಾಗಿ ಕ್ಷಮೆಯಾಚಿಸಬೇಕು, ಇಲ್ಲವಾದರೆ ಸದನದಲ್ಲಿ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸ್ಪೀಕರ್ ಬಗ್ಗೆ ಹಗುರವಾಗಿ ಮಾತನಾಡಿರುವುದು ಅವರಿಗೆ ಶೋಭೆ ತರುವುದಿಲ್ಲ. ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಇಲ್ಲವಾದರೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.</p>.<p>ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಬಗ್ಗೆಯೂ ಸಿದ್ದರಾಮಯ್ಯ ಮನಬಂದತೆ ಮಾತನಾಡಿರುವುದು ಸರಿಯಲ್ಲ ಎಂದರು.</p>.<p class="Subhead"><strong>ಸಿದ್ದರಾಮಯ್ಯ ತಿರುಗೇಟು:</strong>ಹಕ್ಕುಚ್ಯುತಿ ಮಾಡುವುದಾಗಿ ಹೇಳಿರುವ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ನಾನೇಕೆ ಕ್ಷಮೆಯಾಚಿಸಬೇಕು? ಯಡಿಯೂರಪ್ಪ ಹೇಳಿದ ತಕ್ಷಣ ಕ್ಷಮೆ ಕೇಳಬೇಕಾ? ಎಂದು ತಿರುಗೇಟು ನೀಡಿದರು.</p>.<p>‘ಸ್ಪೀಕರ್ ಬಗ್ಗೆ ನಾನು ಅವಹೇಳನಕಾರಿಯಾಗಿ ಮಾತನಾಡಿಲ್ಲ. ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂದು ಹೇಳಿದ್ದೇನೆ. ನನ್ನ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಲಿ ನೋಡೋಣ’ ಎಂದರು.</p>.<p>‘40 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ಯಾರಿಗೆ ಹೇಗೆ ಮಾತನಾಡಬೇಕು ಎಂಬುದು ಗೊತ್ತಿದೆ. ಈ ಬಗ್ಗೆ ಯಡಿಯೂರಪ್ಪ ಅವರಿಂದ ಪಾಠ ಕಲಿಯುವ ಅಗತ್ಯ ಇಲ್ಲ’ ಎಂದರು.</p>.<p class="Subhead"><strong>ಪರಿಹಾರ ನೀಡುವಲ್ಲಿ ತಾರತಮ್ಯ:</strong>ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ಕೆಲವರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಅನೇಕರ ಹೆಸರನ್ನು ಕೈಬಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.</p>.<p>ಮಳೆ, ಪ್ರವಾಹ ಸಂದರ್ಭದಲ್ಲಿ ಬಿದ್ದುಹೋಗಿರುವ ಮನೆ, ಅಂಗಡಿಗಳಿಗೆ ಪರಿಹಾರ ನೀಡಿಲ್ಲ. ಬೆಳೆ ಪರಿಹಾರ ನೀಡಿಲ್ಲ. ಶಾಲೆಗಳು ಇನ್ನೂ ದುರಸ್ತಿ ಮಾಡಿಲ್ಲ. ಮಕ್ಕಳು ಸಮುದಾಯ ಭವನ, ದೇವಸ್ಥಾನಗಳಲ್ಲಿ ಪಾಠ ಕಲಿಯುತ್ತಿದ್ದಾರೆ ಎಂದರು.</p>.<p>ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ. ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಬಂದ ತಕ್ಷಣ ಹೆಸರು ಪ್ರಕಟಿಸಲಾಗುವುದು ಎಂದರು.</p>.<p><strong>ಒಂದೇ ವಿಮಾನದಲ್ಲಿ ಪ್ರಯಾಣ</strong><br />ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಹುಬ್ಬಳ್ಳಿಗೆ ಒಂದೇ ವಿಮಾನದಲ್ಲಿ ಬಂದು, ಸಂಜೆ ಕೂಡ ಒಂದೇ ವಿಮಾನದಲ್ಲಿ ವಾಪಸಾದರು.</p>.<p>ಇವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದ ಆವರಣದಲ್ಲಿ ಬಿಜೆಪಿ, ಕಾಂಗ್ರೆಸ್ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಪಾಲಿಕೆ ಮಾಜಿ ಸದಸ್ಯ ಬಿಜೆಪಿಯ ಶಿವಾನಂದ ಮುತ್ತಣವರ, ಯಡಿಯೂರಪ್ಪ ಅವರಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿದರೆ, ಸಿದ್ದರಾಮಯ್ಯ ಅವರಿಗೆ ಕಂಬಳಿ ಹೊದಿಸಿ ಬರಮಾಡಿಕೊಂಡರು.</p>.<p><strong>ಉಡಾಫೆ ಮಾತು ಬೇಡ: ಸೋಮಣ್ಣ<br />ಮೈಸೂರು:</strong> ‘ಸಿದ್ದರಾಮಯ್ಯ, ನಾನು ಏಕವಚನದಲ್ಲಿ ಮಾತನಾಡುವುದು ರೂಢಿ. ಆದರೆ ಸಭಾಧ್ಯಕ್ಷರ ಬಗ್ಗೆ ಉಡಾಫೆಯಿಂದ ಮಾತನಾಡಬಾರದು’ ಎಂದು ಸಚಿವ ಸೋಮಣ್ಣ ಶನಿವಾರ ಪಿರಿಯಾಪಟ್ಟಣದಲ್ಲಿ ಪ್ರತಿಕ್ರಿಯಿಸಿದರು.</p>.<p>‘ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರು. ಅನುಭವ ಇರುವವರು. ಯಾರನ್ನೋ ಮೆಚ್ಚಿಸಲಿಕ್ಕಾಗಿ ಬಾಯಿಗೆ ಬಂದಂತೆ ಮಾತನಾಡಬಾರದು. ಅವರೇ ಅರ್ಥ ಮಾಡಿಕೊಳ್ಳಬೇಕು’ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p><strong>ವ್ಯಾಕರಣ ತಿಳಿಯದ ಸಿದ್ದರಾಮಯ್ಯ: ಸುರೇಶಕುಮಾರ್ ಲೇವಡಿ<br />ಹಿರಿಯೂರು:</strong> ‘ಪ್ರಾಥಮಿಕ ಶಾಲೆಯಲ್ಲಿ ನಾವೆಲ್ಲ ಏಕವಚನ–ಬಹುವಚನದ ಬಗ್ಗೆ ಕಲಿತಿದ್ದೇವೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕವಚನ ಮಾತ್ರ ಕಲಿತಿದ್ದು, ಅವರಿಗೆ ಬಹುವಚನದ ಬಗ್ಗೆ ಗೊತ್ತೇ ಇಲ್ಲ’ ಎಂದು ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಲೇವಡಿ ಮಾಡಿದರು.</p>.<p>ತಾಲ್ಲೂಕಿನ ಹೊಸಯಳನಾಡು ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರುವಿಧಾನ ಸಭಾಧ್ಯಕ್ಷರ ವಿರುದ್ಧ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ ನಡೆಸಿರುವುದಕ್ಕೆ ಕಿಡಿಕಾರಿದರು. ‘ವ್ಯಾಕರಣದ ಮೇಷ್ಟ್ರು ಆಗಿರುವ ಸಿದ್ದರಾಮಯ್ಯಗೆ ಮಾತನಾಡುವ ಪರಿ ಗೊತ್ತಿಲ್ಲ’ ಎಂದು ಅಸಮಾಧಾನ ಹೊರಹಾಕಿದರು.</p>.<p>*<br />ಸಿದ್ದರಾಮಯ್ಯ, ನಾನು ಏಕವಚನದಲ್ಲಿ ಮಾತನಾಡುವುದು ರೂಢಿ. ಆದರೆ ಸಭಾಧ್ಯಕ್ಷರ ಬಗ್ಗೆ ಉಡಾಫೆಯಿಂದ ಬಾಯಿಗೆ ಬಂದಂತೆ ಮಾತನಾಡಬಾರದು.<br /><em><strong>-ವಿ. ಸೋಮಣ್ಣ, ವಸತಿ ಸಚಿವ</strong></em></p>.<p>*<br />ಪ್ರಾಥಮಿಕ ಶಾಲೆಯಲ್ಲಿ ನಾವೆಲ್ಲ ಏಕವಚನ–ಬಹುವಚನದ ಬಗ್ಗೆ ಕಲಿತಿದ್ದೇವೆ. ಆದರೆ, ಸಿದ್ದರಾಮಯ್ಯ ಏಕವಚನ ಮಾತ್ರ ಕಲಿತಿದ್ದು, ಅವರಿಗೆ ಬಹುವಚನದ ಬಗ್ಗೆ ಗೊತ್ತೇ ಇಲ್ಲ.<br /><em><strong>-ಎಸ್.ಸುರೇಶಕುಮಾರ್, ಶಿಕ್ಷಣ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>