ಮೈಸೂರು: ‘ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೇಳು ವುದಕ್ಕೂ ಮುಖ್ಯಮಂತ್ರಿ ಯಡಿಯೂರಪ್ಪಗೆ ದಂ ಇಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಇಲ್ಲಿ ಕುಟುಕಿದರು.
ಜಿಎಸ್ಟಿ ಹಣ ಸೇರಿದಂತೆ 15ನೇ ಹಣಕಾಸು ಆಯೋಗದಡಿ ರಾಜ್ಯಕ್ಕೆ ಬರಬೇಕಾಗಿದ್ದ ಅನುದಾನವನ್ನು ಕೇಳುವುದಕ್ಕೂ ಅವರಿಗೆ ಆಗುತ್ತಿಲ್ಲ ಎಂದು ಹರಿಹಾಯ್ದ ಅವರು, ‘ಮೋದಿ ತಾಳಕ್ಕೆ ಯಡಿಯೂರಪ್ಪ ಒಬ್ಬರೇ ಅಲ್ಲ, ದೇಶದ ಬಹುತೇಕರು ಕುಣಿಯುತ್ತಿ ದ್ದಾರೆ’ ಎಂದು ಟೀಕಿಸಿದರು.
‘ಎಪಿಎಂಸಿ, ಕಾರ್ಮಿಕ, ಭೂ ಸುಧಾರಣೆ ಕಾಯ್ದೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಬೇಕು. ಆದರೆ, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಈ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿ ಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಇದರ ವಿರುದ್ಧ ರಾಜಕೀಯ ಹೋರಾಟ ನಿಲ್ಲದು’ ಎಂದರು.